ಭಿರಡಿ ಗ್ರಾಪಂಗೆ ಬೀಗ-ಪ್ರತಿಭಟನೆ


Team Udayavani, Feb 27, 2020, 2:27 PM IST

bg-tdy-1

ರಾಯಬಾಗ: ತಾಲೂಕಿನ ಭಿರಡಿ ಗ್ರಾಮದಲ್ಲಿ ಸಂತ್ರಸ್ತರಿಗಾಗಿ ನಿರ್ಮಿಸಿದ ಮನೆಗಳಲ್ಲಿ ಅನರ್ಹ ಫಲಾನುಭವಿಗಳು ವಾಸವಾಗಿದ್ದು, ಕೂಡಲೇ ಅವರನ್ನು ಸ್ಥಳಾಂತರಿಸಿಬೇಕೆಮದು ಒತ್ತಾಯಿಸಿ ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಭಿರಡಿ ಗ್ರಾಪಂಗೆ ಬೀಗ ಹಾಕಿ ಸರ್ಕಾರ ನೀಡಿದ ದಾಖಲೆಗಳನ್ನು ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು.

2005ರಲ್ಲಿ ಕೃಷ್ಣಾ ನದಿಯ ಪ್ರವಾಹದಲ್ಲಿ ಮನೆಗಳು ಮುಳುಗಡೆಯಾದ ಸಂತ್ರಸ್ತರಿಗೆಭಿರಡಿ ಗ್ರಾಮದ ರಿ.ಸನಂ.21ರಲ್ಲಿ ಸುಮಾರು ನಾಲ್ಕು ಎಕರೆ ಜಾಗದಲ್ಲಿ 132 ಅರ್ಹ ಪಲಾನುಭವಿಗಳಿಗೆ ಸರ್ಕಾರ ಮನೆ ನಿರ್ಮಿಸಿಕೊಟ್ಟಿತ್ತು. ಮನೆಗಳನ್ನು ಅರ್ಹ ಪಲಾನುಭಾವಿಗಳಿಗೆ ವಿತರಿಸುವ ಮುಂಚೆ ಆ ಮನೆಗಳಲ್ಲಿ ಅನಧಿಕೃತವಾಗಿ ಬೇರೆ ಕುಟುಂಬಗಳು ವಾಸವಾಗಿದ್ದಾರೆ. ಅನಧಿಕೃತವಾಗಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ಈ ಮನೆಗಳನ್ನು ಹಂಚಿದ್ದರ ಕೂರಿತು ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದರೂ ಕೂಡಾ ಸಂಬಂಧಿಸಿದ ಗ್ರಾಮ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿಯವರು ಮತ್ತು ತಹಶೀಲ್ದಾರರು ಯಾವುದೇ ಕ್ರಮ ಕೈಗೊಂಡಿಲ್ಲ. ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಮನೆ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಪ್ರಕಾಶ ವಡ್ಡರ ಹಾಗೂ ಉಪತಹಶೀಲ್ದಾರ್‌ ಪರಮಾನಂದ ಮಂಗಸೂಳಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. 2005ರ ಗ್ರಾಪಂ ಪಟ್ಟಿಯ ಪ್ರಕಾರ ಮಂಜೂರಾದ ಮನೆಗಳನ್ನು ಅರ್ಹ ಪಲಾನುಭವಿಗಳಿಗೆ ನೀಡಬೇಕೆಂದು ಗ್ರಾಮಸ್ಥರು ಹಾಗೂ ಅರ್ಹ ಫಲಾನುಭವಿಗಳು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್‌ ಪರಮಾನಂದ ಮಂಗಸೂಳೆ ಮಾತನಾಡಿ, ಶೀಘ್ರವೇ 2005ರಲ್ಲಿ ಸರ್ಕಾರದಿಂದ ಸಂತ್ರಸ್ತರಿಗಾಗಿ ಮಂಜೂರಾದ ಈ ಮನೆಗಳಲ್ಲಿ ಯಾರು ಇದ್ದಾರೆ ಎಂದು ದಾಖಲೆಗಳನ್ನು ಪರಿಶೀಲಿಸಿ ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಚಿದಾನಂದ ತೇಲಿ, ಬಸವರಾಜ ತಿಗಡಿ, ವಸಂತ ಘೇನಾನಿ, ಶಂಕರ ಪಾಟೀಲ, ಲಕ್ಷ್ಮೀಬಾಯಿ ತೇಲಿ, ಶಾರವ್ವ ನಾವಿ, ಮಂಗಲ ಬಿಸನಕೊಪ್ಪ, ಕಸ್ತೂರಿ ಬನಹಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.