ಡಾಬಾದಲ್ಲಿ ಊಟ ಮಾಡಿ ಬರುವಾಗ ಭೀಕರ ಅಪಘಾತ: ಬೆಳಗಾವಿಯ ಇಬ್ಬರು ಯುವಕರು ದುರ್ಮರಣ
Team Udayavani, Sep 9, 2021, 8:43 AM IST
ಬೆಳಗಾವಿ: ಡಾಬಾದಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ ಬಳಿಯ ಯಮನಾಪುರ ಸಮೀಪದ ಬರ್ಡೆ ಹಾಗೂ ಗಾವಕರಿ ಡಾಬಾ ಎದುರು ಸಂಭವಿಸಿದೆ.
ಚವಾಟ ಗಲ್ಲಿಯ ಶ್ರೀನಾಥ ದಿಗಂಬರ ಪವಾರ (21 ವ) ಹಾಗೂ ಸದಾಶಿವ ನಗರದ ರಚಿತ್ ರಂಜನ್ ಡುಮಾವತ್ (21 ವ) ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸರಕಾರಕ್ಕೆ ಸಡ್ಡು ಹೊಡೆಯುವ ಕಾಲ ಇದಲ್ಲ: ಸ್ವಾಮಿ
ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ಬಿ.ಕಾಂ. ತೃತೀಯ ವರ್ಷದಲ್ಲಿ ಓದುತ್ತಿದ್ದ ಈ ಇಬ್ಬರೂ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.
ಮೃತ ಯುವಕ ಶ್ರೀನಾಥ ಅವರ ತಂದೆ ದಿಗಂಬರ ಪವಾರ ಬೆಳಗಾವಿಯ ಮರಾಠಾ ಕೋ ಆಪ್ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ