ಬೈಲಹೊಂಗಲ : ಅಪಘಾತದಲ್ಲಿ ಮಡಿದ ಯೋಧ ಪ್ರಕಾಶ್ ಗೆ ಕಣ್ಣೀರ ವಿದಾಯ

ಪತ್ನಿಯ ಸೀಮಂತ ಕಾರ್ಯಕ್ಕೆಂದು ರಜೆಯಲ್ಲಿ ಬಂದಿದ್ದ 28 ರ ಹರೆಯದ ಸೈನಿಕ

Team Udayavani, Jun 3, 2022, 6:01 PM IST

1–ff

ಬೈಲಹೊಂಗಲ: ಅಪಘಾತಕ್ಕೆ ಬಲಿಯಾಗಿದ್ದ ಬೆಳಗಾವಿಯ ಮರಾಠಾ ಇನ್ ಫೆಂಟ್ರಿಯಲ್ಲಿ (ಎಂಎಲ್‌ಐಆರ್‌ಸಿಯಲ್ಲಿ) ಸೇವೆ ಸಲ್ಲಿಸುತ್ತಿದ್ದ, ಪ್ರಕಾಶ ಮಡಿವಾಳಪ್ಪ ಸಂಗೊಳ್ಳಿ (28) ಅವರ ಅಂತ್ಯಸಂಸ್ಕಾರ ಸವದತ್ತಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಸರಕಾರಿ ಗೌರವದೊಂದಿಗೆ ಶುಕ್ರವಾರ ನೆರವೇರಿತು.

ಪತ್ನಿಯ ಸೀಮಂತಕ್ಕೆಂದು ರಜೆಯ ಮೇಲೆ ತೆರಳುತ್ತಿದ್ದ ಯೋಧ ಪ್ರಕಾಶ ಅವರು ಗುರುವಾರ ಅಪಘಾತಕ್ಕೆ ಬಲಿಯಾಗಿದ್ದರು.

ಭಾನುವಾರ ನಡೆಯಬೇಕಾಗಿದ್ದ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ರಜೆಯ ಮೇಲೆ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನಕ್ಕೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಹತ್ತಿರ ಗುರುವಾರ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಹೋದ ಪರಿಣಾಮ ಪ್ರಕಾಶ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಹಿರೇಬಾಗೇವಾಡಿಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2013 ಸೆಪ್ಟಂಬರ್ ನಲ್ಲಿ ಸೇವೆಗೆ ಸೇರಿದ್ದ ಪ್ರಕಾಶ ವಿವಿಧೆಡೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಪ್ರಕಾಶ ಅವರ ಪಾರ್ಥಿವ ಶರೀರವನ್ನು ಹಿರೇಬಾಗೇವಾಡಿಯಿಂದ ರಸ್ತೆಯ ಮೂಲಕ ಗ್ರಾಮಕ್ಕೆ ಮೆರವಣಿಗೆ ಮಾಡಿ ತರಲಾಯಿತು. , ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಪುಷ್ಪ ನಮನ ಸಲ್ಲಿಸಿದರು.

ತಹಶೀಲ್ದಾರ್ ಪ್ರಶಾಂತ ಪಾಟೀಲ, ಉಪತಹಶೀಲ್ದಾರ ಡಿ.ಬಿ.ಅಲ್ಲಯ್ಯನವರಮಠ, ಕಂದಾಯ ನಿರೀಕ್ಷಕ ಆರ್.ಎಸ್.ಪಾಟೀಲ, ಗ್ರಾಮ ಲೆಕ್ಕಿಗ ಸತೀಶ್, ಗ್ರಾಮ ಸಹಾಯಕ ಮಹಾದೇವಪ್ಪ ಇಂಗಳಗಿ ಯೋಧನ ಮನೆಗೆ ಪಾರ್ಥಿವ ಶರೀರ ಆಗಮಿಸಿದಾಗ ಗೌರವ ನಮನ ಸಲ್ಲಿಸಿದರು.

ಅದ್ದೂರಿ ಮೆರವಣಿಗೆ
ಪಾರ್ಥಿವ ಶರೀರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ವಾಹನದ ಮೂಲಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಯುವಕರು ಸೇರಿದಂತೆ ಗ್ರಾಮಸ್ಥರು ಅಮರ್ ಹೇ .. ಅಮರಹೇ .ಪ್ರಕಾಶ ಅಮರ ಹೇ ..ಎಂಬ ಘೋಷಣೆಗಳು ಮುಗಿಲು ಮುಟ್ಟಿದವು. ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದ, ರಸ್ತೆ ಪಕ್ಕದಲ್ಲಿ ನಿಂತಿದ ಜನರು ಕಣ್ಣೀರು ಸುರಿಸಿದರು. ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ, ವಿವಿಧ ಜನ ಪ್ರತಿನಿಧಿಗಳು ಗೌರವ ವಂದನೆ ಸಲ್ಲಿಸಿದರು.

ಮುಗಿಲು ಮುಟ್ಟಿದ ರೋದನ

ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ತಲಪುತ್ತಿದಂತೆ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟಿತು. ಪತ್ನಿ, ತಾಯಿ, ತಂದೆ, ಸಂಬಂಧಿಕರ ರೋದನ ಮುಗಿಲು ಮುಟ್ಟಿತು.

ಇತ್ತಿಚಿಗೆ ಬೆಳಗಾವಿಗೆ ವರ್ಗವಾಗಿದ್ದ ಪ್ರಕಾಶ ಅವರು ತಂದೆ ಮಡಿವಾಳಪ್ಪ, ತಾಯಿ ಕಸ್ತೂರೆವ್ವ, ತುಂಬು ಗರ್ಭಿಣಿ ಪತ್ನಿ ಚೆನ್ನಮ್ಮ ಅವರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.