ಬಿಜೆಪಿ ಸೇರಲು ಸಜ್ಜಾದ ಲಖನ್‌


Team Udayavani, Apr 6, 2021, 4:52 PM IST

ಬಿಜೆಪಿ ಸೇರಲು ಸಜ್ಜಾದ ಲಖನ್‌

ಗೋಕಾಕ: ಬೆಳಗಾವಿ ಲೋಕಸಭೆ ಉಪಚುನಾವಣೆ ಸಮಯದಲ್ಲೇಪ್ರಮುಖ ರಾಜಕೀಯ ಬೆಳವಣಿಗೆನಡೆದಿದ್ದು ಕಾಂಗ್ರೆಸ್‌ ಮುಖಂಡ ಲಖನ್‌ ಜಾರಕಿಹೊಳಿ ಬಿಜೆಪಿ ಸೇರಲು ಸಜ್ಜಾಗಿದ್ದಾರೆ.

ಚುನಾವಣೆ ಉಸ್ತುವಾರಿವಹಿಸಿಕೊಂಡಿರುವ ಕೈಗಾರಿಕಾ ಸಚಿವಜಗದೀಶ ಶೆಟ್ಟರ, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಸ್ವತಃಗೋಕಾಕದಲ್ಲಿ ಲಖನ್‌ ಜಾರಕಿಹೊಳಿಮನೆಗೆ ಭೇಟಿ ನೀಡಿ ಮಾತುಕತೆನಡೆಸಿದ ಬೆನ್ನಲ್ಲೇ ಈ ಮಹತ್ವದಬೆಳವಣಿಗೆ ನಡೆದಿದ್ದು, ಲಖನ್‌ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ್ದಾರೆ.

ಬಿಜೆಪಿ ನಾಯಕರ ಜತೆ ಚರ್ಚೆನಡೆಸಿದ ನಂತರ ಮಾತನಾಡಿದ ಲಖನ್‌,ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ ನಡೆಯುತ್ತಿದ್ದು, ಪಕ್ಷ ಇಂದು ಒಬ್ಬವ್ಯಕ್ತಿಯ ಕೈಗೊಂಬೆಯಾಗಿ ವರ್ತಿಸುತ್ತಿದೆ. ಮೇಲಾಗಿ ಇತ್ತಿಚಿನ ಬೆಳವಣಿಗೆಯಿಂದ ಮನಸ್ಸಿಗೆ ಘಾಸಿಯಾಗಿದ್ದು ಈ ಎಲ್ಲಕಾರಣಗಳಿಂದ ನಾನು ಈ ಬಾರಿ ಬಿಜೆಪಿಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದ್ದೇನೆ ಎಂದರು.

ಕಳೆದ ವಿಧಾನಸಭೆ ಉಪಚುನಾವಣೆಯಲ್ಲಿ ಜಾರಕಿಹೊಳಿಕುಟುಂಬವೆಲ್ಲ ಒಂದೇ ಎಂದುಹೇಳಿದ ಮಹಾನುಭಾವನ ಮಾತುಕೇಳಿ ನನಗೆ ಕೊನೆ ಕ್ಷಣದಲ್ಲಿ ಟಿಕೆಟ್‌ನೀಡಿ ಗೊಂದಲ ನಿರ್ಮಿಸಿದರು. ಈಗ ಕೂಡಾ ಸತೀಶ ಜಾರಕಿಹೊಳಿ ಅವರಿಗೆಯಾವ ಆಧಾರದ ಮೇಲೆ ಟಿಕೆಟ್‌ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಇದನ್ನೆಲ್ಲ ನೋಡಿದರೆ ಕಾಂಗ್ರೆಸ್‌ನಿಂದಯಾವುದೇ ಉಪಯೋಗವಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕುಹೈಕಮಾಂಡ್‌ ನಿರ್ಮಾಣವಾಗಿವೆ.ಯಾರಲ್ಲೂ ಒಮ್ಮತವಿಲ್ಲ. ಹೀಗಾಗಿಕಾಂಗ್ರೆಸ್‌ ಪರವಾಗಿ ಪ್ರಚಾರಕ್ಕೆಹೋಗಲು ಮುಜುಗರವಾಗುತ್ತಿದೆ ಎಂದರು.

ಬಿಜೆಪಿಗೆ ಸೇರುವಂತೆ ಹಿರಿಯರು, ಪ್ರಮುಖ ನಾಯಕರು ಕೇಳಿಕೊಂಡಿದ್ದಾರೆ. ಈ ಸಂಬಂಧಸಹೋದರರಾದ ರಮೇಶ ಹಾಗೂಬಾಲಚಂದ್ರ ಜತೆ ಚರ್ಚಿಸಿ ತೀರ್ಮಾನಕೈಗೊಳ್ಳುತ್ತೇನೆ. ನಮ್ಮ ಕಾರ್ಯಕರ್ತರ ಅಭಿಪ್ರಾಯ ಕೂಡಾ ಇದೇ ಆಗಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ರೊಂದಿಗೆ ಚರ್ಚಿಸಿ ನಮ್ಮ ಮುಂದಿನ ನಡೆಯನ್ನು ತಿಳಿಸಲಾಗುವುದು. ಲೋಕಸಭಾ ಉಪಚುನಾವಣೆ ಯಲ್ಲಿ ಪ್ರಚಾರದಲ್ಲಿರುವ ಬಿಜೆಪಿ ಮುಖಂಡರು ತಮ್ಮ ಜತೆ ಮಾತುಕತೆ ನಡೆಸಿದ್ದುಅವರ ಮನವಿ ಮೇರೆಗೆ ಸಹೋದರಿ ಮಂಗಲಾ ಅಂಗಡಿಯವರಿಗೆ ಬೆಂಬಲ ನೀಡುತ್ತಿದ್ದೇವೆ ಎಂದರು.

ಇದಕ್ಕೂ ಮುನ್ನ ಲಖನ್‌ ಜಾರಕಿಹೊಳಿ ಅವರ ನಿವಾಸಕ್ಕೆ ಕೈಗಾರಿಕೆಸಚಿವ ಜಗದೀಶ ಶೆಟ್ಟರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ,ಆಹಾರ ಮತ್ತು ನಾಗರಿಕ ಪೂರೈಕೆಸಚಿವ ಉಮೇಶ ಕತ್ತಿ, ರಾಜ್ಯಸಭಾಸದಸ್ಯ ಈರಣ್ಣಾ ಕಡಾಡಿ, ಸಂಸದಅಣ್ಣಾಸಾಹೇಬ ಜೊಲ್ಲೆ, ಸಂಜಯಪಾಟೀಲ ಭೇಟಿ ನೀಡಿ ಮಾತುಕತೆನಡೆಸಿ ಪಕ್ಷಕ್ಕೆ ಬರುವಂತೆ ಆಹ್ವಾನನೀಡಿದರು. ಬಳಿಕ ಬಿಜೆಪಿ ಅಭ್ಯರ್ಥಿಮಂಗಲಾ ಅಂಗಡಿ, ಮಗಳು ಶೃದ್ಧಾಹಾಗೂ ಈರಣ್ಣ ಕಡಾಡಿ ಮತ್ತೂಂದುಸುತ್ತಿನ ಮಾತುಕತೆ ನಡೆಸಿ ಪಕ್ಷದ ಪ್ರಚಾರದ ಕುರಿತು ಚರ್ಚಿಸಿದರು.

ಬಿಜೆಪಿ ಬೆಂಬಲ ಲಖನ್‌ ವೈಯಕ್ತಿಕ ನಿಲುವು: ಸತೀಶ :

ಬೆಳಗಾವಿ: ಲಖನ್‌ ಜಾರಕಿಹೊಳಿ ಬಿಜೆಪಿಗೆ ಬೆಂಬಲ ನೀಡಿದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೂ ಬಿಜೆಪಿ ನಾಯಕರು ಭೇಟಿ ಆಗುತ್ತಾರೆ. ಅದರಲ್ಲೇನು ವಿಶೇಷ. ಬೆಂಬಲ ನೀಡುವುದು ಬೇರೆ, ಭೇಟಿಯಾಗೋದು ಬೇರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಇನ್ನೊಬ್ಬರು ಬರುತ್ತಾರೆ. ಇದೆಲ್ಲ ಸಹಜ. ಹೋದವರ ಜತೆಗೆಕೆಲವು ಮತ ಹೋಗುತ್ತವೆ. ಬಂದವರ ಜತೆಗೆ ಕೆಲವು ಮತಗಳು ಬರುತ್ತವೆ.ಪಕ್ಷದ ಮತಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ವಿಧಾನಸಭೆಚುನಾವಣೆಯಲ್ಲಿ ಕಾಂಗ್ರೆಸ್‌ ಮತ ಎಷ್ಟು ಅಂತ ತೋರಿಸಿದ್ದೇವೆ. ಮತಗಳ ಸಂಖ್ಯೆಯಲ್ಲಿ ಕಡಿಮೆ ಆಗಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.