ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಬಾಲಚಂದ್ರ ಜಾರಕಿಹೊಳಿ


Team Udayavani, Jan 21, 2023, 7:54 PM IST

1-adadasd

ಮೂಡಲಗಿ : ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಇಂದಿನಿಂದ ಪ್ರತಿ ಮತದಾರರ ಮನೆಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಶನಿವಾರದಂದು ಬಿಜೆಪಿ ಅರಭಾವಿ ಮಂಡಲ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನಿಂದ ಕಾರ್ಯಕರ್ತರು ತಮ್ಮೆಲ್ಲ ಕೆಲಸಗಳನ್ನು ಕೇವಲ ಪಕ್ಷಕ್ಕೆ ಮಾತ್ರ ಮೀಸಲಿಟ್ಟು ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕರೆ ನೀಡಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಯೋಜನೆಗಳನ್ನು ಜನರಿಗೆ ರೂಪಿಸಿದ್ದಾರೆ. ಸಾಕಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದಾರೆ. ಏಪ್ರೀಲ್ ತಿಂಗಳಲ್ಲಿ ಜರುಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಸರ್ಕಾರ ನಡೆಸಲು ಕಾರ್ಯಕರ್ತರು ಉಭಯ ಸರ್ಕಾರಗಳ ಸಾಧನೆಗಳನ್ನು ತಿಳಿಸಲು ಕರಪತ್ರಗಳನ್ನು ಮತ್ತು ಸ್ಟೀಕರಗಳನ್ನು ವಿತರಿಸಬೇಕು. ಇಂದಿನಿಂದ ಆರಂಭವಾಗಿರುವ ವಿಜಯ ಸಂಕಲ್ಪ ಅಭಿಯಾನದ ವೇಳೆ ಪ್ರತಿ ಮನೆಗಳಿಗೆ ಕಾರ್ಯಕರ್ತರು ಭೇಟಿ ನೀಡಬೇಕು ಸಮಯ ಪ್ರಜ್ಞೆ ರೂಢಿಸಿಕೊಂಡು ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಜ.29ರ ತನಕ ಶಿಸ್ತಿನಿಂದ ಕೆಲಸ ನಿರ್ವಹಿಸಬೇಕು. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿಯಾಗಿದ್ದು, ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಳ್ಳುತ್ತಿರುವ ಏಕೈಕ ಪಕ್ಷವೇ ನಮ್ಮ ಬಿಜೆಪಿಯಾಗಿದೆ ಎಂದರು.

ನಮ್ಮ ಪಕ್ಷದ ವಿರುದ್ದ ನಮ್ಮ ವಿರೋಧಿ ಪಕ್ಷಗಳು ಎಷ್ಟೇ ಅಪಪ್ರಚಾರಗಳನ್ನು ನಡೆಸುತ್ತಿದ್ದರೂ ಅದಕ್ಕೆಲ್ಲ ಸೊಪ್ಪು ಹಾಕಬೇಡಿ. ಕಾರ್ಯಕರ್ತರು ಶ್ರಮ ವಹಿಸಿದ್ದಾದಲ್ಲಿ ಖಂಡಿತವಾಗಿಯೂ ರಾಜ್ಯದಲ್ಲಿ 120 ಸ್ಥಾನಗಳನ್ನು ಗಳಿಸಿ ಸರಳ ಬಹುಮತವನ್ನು ಪಡೆದು ಅಧಿಕಾರ ಚುಕ್ಕಾಣಿ ಹಿಡಿಯುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅರಭಾವಿ ಮಂಡಲದ ವಿಸ್ತಾರಕ ವೆಂಕಟೇಶ ಲಾಳೆ ಮಾತನಾಡಿ, ಕಾಂಗ್ರೇಸಿನವರು ಈ ಚುನಾವಣೆಯಲ್ಲಿ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮ್ಮ ಪಕ್ಷ ಈಗಾಗಲೇ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಬಿ ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ನಡೆದ ಕಾಮಗಾರಿಗಳನ್ನು ಜನರ ಬಳಿಗೆ ವಿವರಿಸೋಣ. ಜೊತೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೈಗೊಂಡಿರುವ ಪ್ರಗತಿಪರ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಕೇಳೊಣ. ರಾಜ್ಯದಲೇ ಬಾಲಚಂದ್ರ ಜಾರಕಿಹೊಳಿಯವರು ಇತರ ಶಾಸಕರಿಗೆ ಮಾದರಿಯಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇಂತಹ ಜನಸೇವಕನನ್ನು ಪಡೆದಿರುವುದು ಅರಭಾವಿ ಕ್ಷೇತ್ರದ ಪುಣ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶಕ್ಕಿ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಮ್‍ಸಿ ಮಾಜಿ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ಪ್ರಭಾ ಶುಗರ್ ನಿರ್ದೇಶಕ ಸಿದ್ದಲಿಂಗ ಕಂಬಳಿ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಯ್ಯ ಬಡನಿಂಗಗೋಳ, ಉಪಾಧ್ಯಕ್ಷ ರಾಜು ಬೈರಗೋಳ, ಮುತ್ತಪ್ಪ ಕುಳ್ಳೂರ, ಬಸವರಾಜ ಹಿಡಲಕ್, ಹಣಮಂತ ತೇರದಾಳ, ಬಸವರಾಜ ಭುಜನ್ನವರ, ಭರಮಪ್ಪ ಆಸಿರೊಟ್ಟಿ, ಭರಮಣ್ಣ ಗಂಗನ್ನವರ, ಆನಂದ ಹೊಸಕೋಟಿ, ಪತ್ರಯ್ಯ ಚರಂತಿಮಠ, ಬಾಳಪ್ಪ ತಿಗಡಿ, ಕೆಂಚಪ್ಪ ಶಿಂತ್ರಿ, ಬಿಜೆಪಿಯ ಪದಾಧಿಕಾರಿಗಳಾದ ಭೀಮಶಿ ಮಾಳೆದವರ, ದುಂಡಪ್ಪ ನಂದಗಾವಿ, ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಪಾಂಡುರಂಗ ಮಹೇಂದ್ರಕರ, ಪ್ರಮೋದ ನುಗ್ಗಾನಟ್ಟಿ, ನಾಗರಾಜ ಕುದರಿ, ಅಲ್ಪಾವಧಿ ವಿಸ್ತಾರಕರು, ಶಕ್ತಿಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಯುವ ಮುಖಂಡ ಸಂಜು ಹೊಸಕೋಟಿ ಮಾತನಾಡಿ, ಮಸಗುಪ್ಪಿ ಗ್ರಾಮದ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹಲವಾರು ಯೋಜನೆಗಳನ್ನು ಸಾಕಾರಗೊಳಿಸಿದ್ದಾರೆ. ಮಹಾಲಕ್ಷ್ಮೀ ಸಮುದಾಯ ಭವನ ನಿರ್ಮಾಣಕ್ಕೆ 50ಲಕ್ಷ ರೂ, ರಸ್ತೆ ಕಾಮಗಾರಿಯನ್ನು ಕೈಗೊಂಡಿದ್ದಾರೆ ಜೊತೆಗೆ ಕೋವಿಡ್ ಸಮಯದಲ್ಲಿ ಸಂತ್ರಸ್ಥ ಕುಟುಂಬಗಳಿಗೆ ಆಸರೆಯಾಗಿ ಆಶ್ರಯದಾತರಾಗಿದ್ದಾರೆ. ಅಂದಿನ ಸಂದಿಗ್ಭ ಪರಿಸ್ಥಿಯಲ್ಲಿ ಮಸಗುಪ್ಪಿ ಗ್ರಾಮವೇ ಜಲಾವೃತಗೊಂಡಿತ್ತು ಆಪದ್ಬಾಂಧವರಂತೆ ನಮ್ಮನ್ನೆಲ್ಲ ಕಷ್ಟದಿಂದ ಕಾಪಾಡಿದ ಕರುಣಾಮಯಿ ಹೃದಯದ ಶಾಸಕರು. ಮುಂದಿನ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರಿಗೆ ನಮ್ಮ ಗ್ರಾಮದಿಂದ ಹೆಚ್ಚಿನ ಲೀಡ್ ಮಾಡಿಕೊಂಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.