ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ: ಅಶ್ವತ್ಥನಾರಾಯಣ ಸಂತಸ
Team Udayavani, Dec 14, 2021, 5:42 PM IST
ಬೆಳಗಾವಿ: ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿರುವುದು ಸಂತಸ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಬಗ್ಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, `ಬೆಂಗಳೂರು ನಗರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದ್ದು, ಪಕ್ಷದ ಅಭ್ಯರ್ಥಿ ಗೋಪಿನಾಥ ರೆಡ್ಡಿ ಗೆಲುವು ದಾಖಲಿಸುವ ಮೂಲಕ ಚರಿತ್ರೆ ನಿರ್ಮಾಣವಾಗಿದೆ. ಒಟ್ಟಿನಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಒಳ್ಳೆಯ ಸಂದೇಶ ರವಾನಿಸಿದ್ದಾರೆ’ ಎಂದು ಅವರು ನುಡಿದರು.
ವಿಧಾನ ಪರಿಷತ್ತಿನಲ್ಲಿ ಈಗ ಬಿಜೆಪಿ ಬಲ ಮೊದಲಿಗಿಂತ ಹೆಚ್ಚಿದೆ. ಇದರಿಂದಾಗಿ ಹೊಸಹೊಸ ಯೋಜನೆ ಮತ್ತು ಕಾಯ್ದೆಗಳನ್ನು ಜಾರಿಗೆ ತರುವುದು ಸುಲಭವಾಗಲಿದೆ. ಜನರ ಇಚ್ಛೆಗೆ ಪೂರಕವಾದ ಆಡಳಿತ ನೀಡಲು ಮತ್ತು ತ್ವರಿಗ ಗತಿಯಲ್ಲಿ ಕೆಲಸ ಮಾಡಲು ಇದರಿಂದ ಮತ್ತಷ್ಟು ಬಲ ಬಂದಿದೆ ಎಂದು ಅವರು ಅಭಿಪ್ರಾಯ ಪಟ್ಟರು.