ಬಿಜೆಪಿ ಹೈಕಮಾಂಡ್ ನಿಂದ ಸಚಿವ ಸ್ಥಾನದ ಭರವಸೆ: ಉಮೇಶ್ ಕತ್ತಿ
Team Udayavani, Aug 24, 2019, 9:30 PM IST
ಬೆಳಗಾವಿ: ಮುಂದಿನ ವಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿಗೆ ಸ್ಥಾನ ಸಿಗುತ್ತೆ.ಸ್ವಲ್ಪ ಕಾಯಿರಿ ಅಂತ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಎಲ್ಲಾ ಶಾಸಕರು ಸಮಾಧಾನವಾದ ಬಳಿಕ ನಾನು ಹಾಗೂ ಬಾಲಚಂದ್ರ ಸಚಿವರಾಗುತ್ತೇವೆ.ಎಲ್ಲರಿಗೂ ಸಚಿವ ಸ್ಥಾನ ಹಂಚಿಕೆ ಮಾಡಿ ನಮಗೆ ಉಳಿಯದಿದ್ದರೆ ನಾವು ಸಚಿವರಾಗುವುದಿಲ್ಲ ನಮಗೆ ಯಾವುದೇ ಅಸಮಾಧಾನ ಇಲ್ಲ.
ಈ ಹಿಂದೆ ಎಂಟೂವರೆ ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ.ಮಂತ್ರಿಯಾಗಬೇಕು ಅಂತಾ ಹಂಬಲವೇನಿಲ್ಲ, ಕೊಟ್ಟರೆ ಜವಾಬ್ದಾರಿಯಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ.
ಮಂತ್ರಿಸ್ಥಾನ ಸಿಗದಿದ್ದರೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ.ಎಂದು ಹೇಳಿದರು.
ನಾನು ಮತ್ತು ಸಚಿವ ಲಕ್ಷ್ಮಣ ಸವದಿ ಇಬ್ಬರು ಇಂದು ಭೇಟಿಯಾಗಿಲ್ಲ. ಮಾಧ್ಯಮಗಳು ಸೃಷ್ಟಿಸಿದರೆ ನಾನೇನು ಮಾಡಲು ಆಗುವುದಿಲ್ಲ ಅಂತಹ ವೈರತ್ವ ಯಾರೊಂದಿಗಿಲ್ಲ. ಸಚಿವ ಲಕ್ಷ್ಮಣ ಸವದಿ ದಿನಕ್ಕೆ ಮೂರು ಬಾರಿ ಫೋನ್ ಮಾಡುತ್ತಾರೆ ನಾನು ಸಹ ಅವರಿಗೆ ಕರೆ ಮಾಡುತ್ತೇನೆ. ಮಂತ್ರಿ ಸ್ಥಾನ ಸಿಗದಿದ್ದರೆ ತಿನ್ನಲು ಉನ್ನಲು ನಮಗೆ ತೋಟಗಳಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ