ಮನೆ ಮುಂದೆ ಮಾಟ !:ಕೈ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಂಗಾಲು
Team Udayavani, Apr 20, 2017, 10:52 AM IST
ಬೆಳಗಾವಿ : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸದ ಎದುರು ಮಾಟ ಮಂತ್ರ ಮಾಡಿರುವುದು ಗುರುವಾರ ಬೆಳಗ್ಗೆ ಕಂಡು ಬಂದಿದೆ.
ಕುವೆಂಪುನಗರದ ನಿವಾಸದ ಎದುರು ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಾಟ ಮಂತ್ರಕ್ಕೆ ಬಳಸುವ ಲಿಂಬೆ , ಮೊಟ್ಟೆ ,ಮೆಣಸಿನಕಾಯಿ ಬೂದು ಗುಂಬಳಕಾಯಿ ಅರಸಿನ ಕುಂಕುಮ ಇತ್ಯಾದಿ ವಸ್ತುಗಳು ಪತ್ತೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ‘ನಾನು ಮಾಟ,ಮಂತ್ರ ನಂಬುವುದಿಲ್ಲ. ರಾಜಕೀಯ ವಿರೋಧಿಗಳು ಇದನ್ನು ಮಾಡಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆ ನಡೆದ ಬಳಿಕ ಈ ರೀತಿ ಮಾಡುತ್ತಿದ್ದಾರೆ. ಯಾವ ಉದ್ದೇಶಕ್ಕಾಗಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು ನನ್ನ ತಮ್ಮನ ಕಾರು ಅಪಘಾತಕ್ಕೀಡಾಗಿದೆ. ಅದಾಗಿ 2 ದಿನಗಳಲ್ಲಿ ನನ್ನ ಇನ್ನೋವಾ ಕಾರು ಅಪಘಾತಕ್ಕೀಡಾಗಿ ಕೆಲವರಿಗೆ ಗಾಯವಾಗಿದೆ. ನನ್ನ ಮಗನೂ ಬಿದ್ದು ಗಾಯಗೊಂಡಿದ್ದಾನೆ. ಈ ಎಲ್ಲಾ ಘಟನೆಗಳಿಂದ ನಮ್ಮ ಮನೆಯವರಿಗೆಲ್ಲಾ ಸಂಶಯ ಮೂಡಿದೆ ಎಂದರು.
ಪಿಎಸ್ಐಗೆ ಧಮ್ಕಿ, ನಿವಾಸದ ಮೇಲೆ ಐಟಿ ದಾಳಿ,ಉಪಚುನಾವಣೆ ವೇಳೆ ಮತದಾರರಿಗೆ ಹಣ ಹಂಚಿದ ಆರೋಪ ಹೀಗೆ ಸದಾ ಒಂದಿಲ್ಲ ಒಂದು ವಿಚಾರದಲ್ಲಿ ಹೆಬ್ಬಾಳ್ಕರ್ ಸುದ್ದಿಯಲ್ಲಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ