ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಗಡಿವಿವಾದ ಸೇರ್ಪಡೆ: ಮಧು ಬಂಗಾರಪ್ಪ
Team Udayavani, Dec 13, 2022, 10:15 PM IST
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ತರಲು ನಮ್ಮ ನಾಯಕರು ಹೇಳಿದ್ದಾರೆ. ಅದರಂತೆ ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ಗಡಿ ವಿವಾದ ವಿಚಾರ ಸೇರ್ಪಡೆ ಮಾಡಲಾಗುವುದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದ ಯಾವುದೇ ಜಾಗ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಮ್ಮ ದೇಶದಲ್ಲಿ ಕಾನೂನು, ಕೋರ್ಟ್-ಕಚೇರಿ ಅಂತ ಇವೆ. ನಾವು ಕೋರ್ಟ್ನಲ್ಲಿ ಹೋರಾಟ ಮಾಡುತ್ತೇವೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಈಗ ಕೋರ್ಟ್ನಲ್ಲಿದೆ. ನಮ್ಮ ತಂದೆ ಬಂಗಾರಪ್ಪನವರೇ ಬೆಳಗಾವಿಯಲ್ಲಿ ಮೊದಲ ಕನ್ನಡ ಮೇಯರ್ ಮಾಡಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಬೆಳಗಾವಿಯಲ್ಲಿ ಮೊದಲು ಕನ್ನಡ ಮೇಯರ್ ಮಾಡಲಾಗಿದೆ.
ಮಹಾರಾಷ್ಟ್ರದ ಕನ್ನಡಿಗರ ಮೇಲೆ ಅಲ್ಲಿಯ ಸರ್ಕಾರದಿಂದ ಅನ್ಯಾಯ ಆಗುತ್ತಿದ್ದು, ಮಹಾರಾಷ್ಟ್ರ ಕನ್ನಡಿಗರ ಪರ ಕಾಂಗ್ರೆಸ್ ಧ್ವನಿ ಯಾವಾಗಲೂ ಗಟ್ಟಿಯಾಗಿರುತ್ತದೆ. ಸರ್ಕಾರ ಸತ್ತಾಗ ಅದಕ್ಕೆ ಜನರ ಗೋಳು ಕೇಳಿಸುವುದಿಲ್ಲ, ಗೋವಾದಲ್ಲೂ ಇದೇ ರೀತಿ ಇದೆ. ಕಾನೂನು ಬದ್ಧ ಪರಿಹಾರಕ್ಕೆ ಸರ್ಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು.
ಜತೆಗೆ ಮಾನವೀಯತೆಯಿಂದಲೂ ನೋಡಬೇಕು. ಗಡಿ ವಿವಾದ ಯಾವಾಗಲೂ ಚುನಾವಣೆ ಸಂದರ್ಭದಲ್ಲಿ ಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ