ಬೆಳಗಾವಿಗೆ ಗಡಿ ಸಂರಕ್ಷಣ ಆಯೋಗ ಕಚೇರಿ ಕೂಗು

ಸುವರ್ಣ ಸೌಧಕ್ಕೆ ಸ್ಥಳಾಂತರಕ್ಕೆ ಸಿಗದ ಮನ್ನಣೆ ; ಇನ್ನೂ ಬೆಂಗಳೂರಿನಿಂದ ಅಲ್ಲಾಡದ ಕಚೇರಿ

Team Udayavani, Dec 29, 2022, 6:45 AM IST

ಬೆಳಗಾವಿಗೆ ಗಡಿ ಸಂರಕ್ಷಣ ಆಯೋಗ ಕಚೇರಿ ಕೂಗು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಗಡಿ ವಿವಾದ ಮತ್ತೆ ಸದ್ದು ಮಾಡುತ್ತಿರುವುದು ಗಡಿ ಭಾಗದಲ್ಲಿ ಹಲವು ಹೊಸ ಚಟುವಟಿಕೆಗಳಿಗೆ ಜೀವ ನೀಡಿದೆ. ಗಡಿ ಅಭಿವೃದ್ಧಿಗಾಗಿರುವ ಕಚೇರಿಗಳ ಸ್ಥಾಪನೆ ವಿಷಯ ಪ್ರಧಾನವಾಗಿ ಮುನ್ನೆಲೆಗೆ ಬಂದಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೆಲವು ದಿನಗಳ ಹಿಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಸಿಎಂಗಳ ಸಭೆ ನಡೆಸಿ ಎರಡೂ ರಾಜ್ಯಗಳ ಗಡಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ವಿಷಯ ಪ್ರಸ್ತಾವಿಸಿದ ಬಳಿಕ ಸುವರ್ಣ ವಿಧಾನಸೌಧದಲ್ಲಿ ಗಡಿ ಸಂರಕ್ಷಣ ಆಯೋಗದ ಕಚೇರಿ ಸ್ಥಾಪನೆಗೆ ಹೆಚ್ಚಿನ ಮಹತ್ವ ಬಂದಿದೆ.

ಗಡಿ ಕಾನೂನು ಸಲಹಾ ಸಮಿತಿ ಬದಲಾಗಿ ಗಡಿ ಸಂರಕ್ಷಣ ಆಯೋಗ ರಚನೆಯಾದಾಗಿನಿಂದ ಈ ಮುಖ್ಯ ಕಚೇರಿಯನ್ನು ಸುವರ್ಣ ವಿಧಾನಸೌಧದಲ್ಲಿ ಆರಂಭಿಸಬೇಕು ಎಂಬ ಬೇಡಿಕೆ ಸಲ್ಲಿಸುತ್ತ ಬಂದಿರುವ ಕನ್ನಡ ಹಾಗೂ ಗಡಿ ಅಭಿವೃದ್ಧಿ ಹೋರಾಟಗಾರರು ಈಗ ಮತ್ತೊಮ್ಮೆ ಸರಕಾರಕ್ಕೆ ತಮ್ಮ ಬೇಡಿಕೆಯ ನೆನಪು ಮಾಡಿಕೊಟ್ಟಿದ್ದಾರೆ.

ಮನವಿಗಳಿಗೆ ಲೆಕ್ಕವಿಲ್ಲ
2005ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಗಡಿ ಕಾನೂನು ಸಲಹಾ ಸಮಿತಿ 2015ರಲ್ಲಿ ವಿ.ಎಸ್‌.ಮಳೀಮಠ ಅಧ್ಯಕ್ಷರಾಗಿದ್ದಾಗ ಮರು ನಾಮಕರಣಗೊಂಡು ಗಡಿ ಸಂರಕ್ಷಣ ಆಯೋಗ ಎಂದು ಬದಲಾವಣೆಯಾಗಿದೆ. ಆಗಿ ನಿಂದಲೂ ಸರಕಾರಕ್ಕೆ ಈ ಕಚೇರಿ ಸ್ಥಳಾಂತರದ ಬಗ್ಗೆ ಒತ್ತಾಯ ಮಾಡಲಾಗುತ್ತಿದೆ. ಆಯೋಗದ ಕಚೇರಿ ಬೆಂಗಳೂರಿನಲ್ಲಿ ಇರುವುದರಿಂದ ಗಡಿ ಭಾಗದ ಜನರಿಗೆ ಈ ಆಯೋಗದ ಬಗ್ಗೆ ಕಲ್ಪನೆಯೇ ಇಲ್ಲ. ಇದರ ಪರಿಣಾಮ ಎಲ್ಲ ಮನವಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಕೆಯಾಗುತ್ತಿದ್ದು ಗಡಿ ಸಂರಕ್ಷಣ ಆಯೋಗಕ್ಕೆ ಸಂಬಂಧಿಸಿದ ವಿಷಯಗಳು ಅಲ್ಲಿಗೆ ತಲುಪುತ್ತಲೇ ಇಲ್ಲ. ತಲುಪಿದರೂ ಯಾವ ಕ್ರಮವೂ ಆಗುತ್ತಿಲ್ಲ. ಇದೇ ಸ್ಥಿತಿ ಮುಂದುವರಿದರೆ ಆಯೋಗ ಬಿಳಿಯಾನೆ ಆಗಲಿದೆ ಎಂಬುದು ಕನ್ನಡ ಹೋರಾಟಗಾರರ ಆತಂಕ.

ಕಳೆದ ಹಲವು ವರ್ಷಗಳಿಂದ ಗಡಿ ಭಾಗದ ಜನರು ಒಂದು ರೀತಿಯಲ್ಲಿ ಭದ್ರ ನೆಲೆಯ ಹುಡುಕಾಟದಲ್ಲಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರ ಇದ್ದರೂ ಅದರ ಕಾರ್ಯನಿರ್ವಹಣೆ ತೃಪ್ತಿ ತಂದಿಲ್ಲ. ಈ ಭಾಗದ ಎಷ್ಟೋ ಜನರಿಗೆ ಅದರ ಅಧ್ಯಕ್ಷರು ಯಾರು ಎಂಬುದು ಗೊತ್ತಿಲ್ಲ. ಬೆಳಗಾವಿ ನಗರ ಸಹಿತ ಗಡಿ ಭಾಗದ ಪ್ರದೇಶ ಇನ್ನೂ ಸಾಕಷ್ಟು ಅಭಿವೃದ್ಧಿಯ ನಿರೀಕ್ಷೆಯಲ್ಲಿದೆ. ಸರಕಾರದ ಅನುದಾನ ಮತ್ತು ಯೋಜನೆಗಳು ಸಹ ಹೆಚ್ಚಾಗಿ ಗಡಿ ಭಾಗಕ್ಕೆ ಹೋಗುತ್ತಿಲ್ಲ  ಎಂಬ ಆರೋಪ ಮೊದಲಿಂದಲೂ ಇದೆ. ಒಂದೆಡೆ ಕನ್ನಡ ಶಾಲೆಗಳು ಶೋಚನೀಯ ಸ್ಥಿತಿಯಲ್ಲಿದ್ದರೆ, ಇನ್ನೊಂದೆಡೆ ನೀರಾವರಿ ಯೋಜನೆಗಳ ಸಂಪೂರ್ಣ ಲಾಭ ಇಲ್ಲಿಯ ರೈತರಿಗೆ ಸಿಕ್ಕಿಲ್ಲ ಎಂಬ ಕೊರಗು ಕಾಡುತ್ತಿದೆ.

ಗಡಿ ಸಂರಕ್ಷಣ ಆಯೋಗ ಎಂಬುದು ಕೇವಲ ಗಡಿ ವಿವಾದಕ್ಕೆ ಸಂಬಂಧಿಸಿದ ಆಯೋಗ ಅಲ್ಲ. ಇದು ಗಡಿ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಕಾರದ ಜತೆ ಕೆಲಸ ಮಾಡಲಿದೆ. ಈ ಹಿನ್ನೆಲೆಯಲ್ಲಿ ಆಯೋಗ ಬೆಂಗಳೂರಿ ನಲ್ಲಿ ಇರುವುದಕ್ಕಿಂತ ಬೆಳಗಾವಿಯಲ್ಲಿ ಇರುವುದು ಹೆಚ್ಚು ಸೂಕ್ತ ಎಂಬುದು ಗಡಿ ಅಭಿವೃದ್ಧಿ ಚಿಂತಕರ ಅಭಿಮತ.

ಗಡಿ ಸಂರಕ್ಷಣ ಆಯೋಗವು ಗಡಿ ವಿವಾದದ ಜತೆಗೆ ಗಡಿ ಹಿತರಕ್ಷಣೆ, ಕನ್ನಡ ಶಾಲೆಗಳ ಸ್ಥಿತಿಯಲ್ಲಿ ಸುಧಾರಣೆ ತರುವುದು, ಉದ್ಯಮ ಹಾಗೂ ಕೈಗಾರಿಕೆಗಳ ಬೆಳವಣಿಗೆಗೆ ಸಂಬಂಧಿಸಿದ ವಿಷಯಗಳಲ್ಲೂ ಕೆಲಸ ಮಾಡಬೇಕು. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು.
– ಜಿನದತ್ತ ದೇಸಾಯಿ, ನಿವೃತ್ತ ನ್ಯಾಯಾಧೀಶರು ಹಾಗೂ ಸಾಹಿತಿ

ಗಡಿ ಭಾಗದ ಜನರ ಮತ್ತು ಸರಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಬೇಕಿರುವ ಗಡಿ ಸಂರಕ್ಷಣ ಆಯೋಗದ ಮುಖ್ಯ ಕಚೇರಿ ಸುವರ್ಣ ವಿಧಾನಸೌಧದಲ್ಲಿ ಸ್ಥಾಪನೆಯಾಗಬೇಕು. ಸರಕಾರ ಈ ವಿಷಯದಲ್ಲಿ ಸುಳ್ಳು ಭರವಸೆ ನೀಡುವುದು ಬೇಡ. ಬೆಂಗಳೂರಿನಲ್ಲಿ ಈ ಕಚೇರಿಯಿದ್ದರೆ ಗಡಿ ಭಾಗದ ಜನರು ಮೇಲಿಂದ ಮೇಲೆ ಅಲ್ಲಿಗೆ ಅಲೆದಾಡಬೇಕಾಗುತ್ತದೆ.
– ಅಶೋಕ, ಕನ್ನಡ ಸಂಘಟನೆಗಳ ಜಂಟಿ ಕ್ರಿ.ಸಮಿತಿ ಅಧ್ಯಕ್ಷ 

– ಕೇಶವ ಆದಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.