ಉಳ್ಳವರ ಬಿಪಿಎಲ್‌ ಕಾರ್ಡ್‌ಗೆ ಬಂತು ಕುತ್ತು!


Team Udayavani, Jan 12, 2020, 11:38 AM IST

bg-tdy-2

ಸಾಂಧರ್ಬಿಕ ಚಿತ್ರ

ಚಿಕ್ಕೋಡಿ: ಹೆಚ್ಚು ಆದಾಯ ಹೊಂದಿರುವ, ಸರ್ಕಾರಿ ನೌಕರರು ಮತ್ತು ಪಿಂಚಣಿ ಸಿಬ್ಬಂದಿ ಅಕ್ರಮವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಕಾರ್ಡ್‌ಗಳನ್ನು ಮರಳಿ ಸರ್ಕಾರಕ್ಕೆ ಒಪ್ಪಿಸುತ್ತಿದ್ದು, ಚಿಕ್ಕೋಡಿ ತಾಲೂಕಿನ 579 ಜನರು ಇಂಥ ಕಾರ್ಡುಗಳನ್ನು ಸರ್ಕಾರಕ್ಕೆ ಮರಳಿಸಿದ್ದಾರೆ.

ಅಕ್ರಮ ಬಿಪಿಎಲ್‌ ರೇಶನ್‌ ಕಾರ್ಡ್‌ ಬಳಕೆ ಮಾಡಿದ ಆರೋಪದ ಮೇಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು 81 ಜನರಿಂದ 2.69 ಲಕ್ಷ ರೂ ದಂಡ ವಸೂಲಿ ಮಾಡಿದೆ. ಚಿಕ್ಕೋಡಿ ತಾಲೂಕಿನಲ್ಲಿ 1,97,026 ಪಡಿತರ ಕಾರ್ಡ್‌ಗಳಲ್ಲಿ 6,27,786 ಫಲಾನುಭವಿಗಳು ಇದ್ದಾರೆ. ಇದರಲ್ಲಿ 3,490 ಅಂತ್ಯೋದಯ, 16,614 ಎಪಿಎಲ್‌ ಮತ್ತು 1,50,264 ಬಿಪಿಎಲ್‌ ಕಾರ್ಡ್‌ಗಳನ್ನು ಸರ್ಕಾರ ನೀಡಿದೆ. ನಿಗದಿಗಿಂತ ಹೆಚ್ಚು ಆದಾಯ ಇದ್ದರೂ ಬಿಪಿಎಲ್‌ ರೇಶನ್‌ ಕಾರ್ಡ್‌ ಬಳಸುತ್ತಿದ್ದವರಿಂದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮರಳಿ ಪಡೆಯುತ್ತಿದೆ.

ಈ ಮೊದಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಇಂತಹ ರೇಶನ್‌ ಕಾರ್ಡ್‌ಗಳನ್ನು ಮರಳಿ ಇಲಾಖೆಗೆ ಒಪ್ಪಿಸಬೇಕೆಂದು ಕಾಲಾವಕಾಶ ನೀಡಿತ್ತು. ಈ ನಿಟ್ಟಿನಲ್ಲಿ 579 ಜನರು ಮರಳಿ ಸರ್ಕಾರಕ್ಕೆ ಕಾರ್ಡ್‌ ಜಮಾ ಮಾಡಿದ್ದಾರೆ. ರಾಜ್ಯ ಸರ್ಕಾರ ನಾಗರಿಕರ ಹಸಿವು ನೀಗಿಸಲು ಅಕ್ಕಿ ಖರೀದಿ ಮಾಡಿ ಉಚಿತವಾಗಿ ವಿತರಣೆ ಮಾಡುತ್ತಿದೆ. ಬಿಪಿಎಲ್‌ ರೇಶನ್‌ ಕಾರ್ಡ್‌ನಲ್ಲಿ ಹೆಸರು ಇರುವ ಪ್ರತಿ ವ್ಯಕ್ತಿಗೆ ತಿಂಗಳಿಗೆ 7 ಕೆಜಿ ಅಕ್ಕಿ ನೀಡಲಾಗುತ್ತಿದೆ.

ನೈಜ ಫಲಾನುಭವಿಗಳು ಬಿಟ್ಟು ಇತರ ಉಳ್ಳವರು ಹಾಗೂ ಹಾಗೂ ಸರ್ಕಾರಿ ಸಿಬ್ಬಂದಿ ಇಮಥ ಕಾರ್ಡ್‌ ಪಡೆದಿದ್ದರಿಂದ ಖಜಾನೆಗೆ ನಷ್ಟವಾಗುವುದನ್ನು ತಪ್ಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಂತಹ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯ ಮತ್ತು ಕೇಂದ್ರ ಸಿಬ್ಬಂದಿ ಹಾಗೂ ಪಿಂಚಣಿದಾರರು, ಆದಾಯ ತೆರಿಗೆ ತುಂಬುವ ವ್ಯಕ್ತಿ, ಜಮೀನುದಾರರು ಇಂಥವರ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದ್ದು, ಹೆಚ್ಚು ಆದಾಯ ಹೊಂದಿದ ವ್ಯಕ್ತಿಗಳು ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುವ ಮುನ್ನವೇ ಬಿಪಿಎಲ್‌ ಕಾರ್ಡ್‌ಗಳನ್ನು ಮರಳಿ ಸರ್ಕಾರಕ್ಕೆ ಒಪ್ಪಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಆದಾಯ ಹೆಚ್ಚಿರುವ ವ್ಯಕ್ತಿಗಳಿಂದ ಪಡಿತರ ಕಾರ್ಡ್‌ಗಳನ್ನು ಮರಳಿ ಪಡೆದುಕೊಳ್ಳುತ್ತಿದ್ದೇವೆ. ಚಿಕ್ಕೋಡಿ ತಾಲೂಕಿನ 579 ಬಿಪಿಎಲ್‌ ರೇಶನ್‌ ಕಾರ್ಡ್‌ಗಳನ್ನು ಮರಳಿ ಪಡೆದಿದೆ. ಬಿಪಿಎಲ್‌ ಕಾರ್ಡ್‌ ಮರಳಿ ನೀಡದ ಇರುವ ವ್ಯಕ್ತಿಗಳನ್ನು ಗುರ್ತಿಸಿ 81 ಜನರಿಂದ 2.69 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ. -ಎಂ.ಬಿ.ಡಂಗಿ, ನಿರೀಕ್ಷಕರು.  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಚಿಕ್ಕೋಡಿ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.