ಪೌರ ಕಾರ್ಮಿಕರಿಗೆ ಉಪಾಹಾರ
Team Udayavani, May 29, 2020, 6:08 AM IST
ಬೆಳಗಾವಿ: ಲಾಕ್ಡೌನ್ ವೇಳೆ ಎರಡು ತಿಂಗಳಿಂದ ಜೀವದ ಹಂಗು ಲೆಕ್ಕಿಸದೇ ನಗರದಲ್ಲಿ ಸ್ವಚ್ಛತೆ ಕಾಪಾಡುತ್ತಿರುವ ಪೌರ ಕಾರ್ಮಿಕರಿಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಉಪಾಹಾರ ನೀಡಿ ಗೌರವಿಸಿದರು.
ಎಲ್ಲ ಪೌರ ಕಾರ್ಮಿಕರನ್ನು ಉಪಾಹಾರಕ್ಕೆ ಆಹ್ವಾನಿಸಿದ ಶಾಸಕ ಅಭಯ ಪಾಟೀಲರು, ಉಪಾಹಾರ ಉಣಬಡಿಸಿದರು. ಜತೆಗೆ ತಾವೂ ಅವರೊಂದಿಗೆ ಉಪಾಹಾರ ಸವಿದರು. ಸುಮಾರು 600 ಪೌರ ಕಾರ್ಮಿಕರು ನಗರದ ಮಹಾವೀರ ಭವನದಲ್ಲಿ ಜಮಾಯಿಸಿದ್ದರು. ಎಲ್ಲ ಪೌರ ಕಾರ್ಮಿಕರೊಂದಿಗೆ ಕೆಲ ಹೊತ್ತು ಸಮಯ ಕಳೆದರು.
ಎರಡು ತಿಂಗಳಿಂದ ಸ್ವಚ್ಛತೆಗೆ ಶ್ರಮ ವಹಿಸಿ ದುಡಿಯುತ್ತಿರುವ ಪೌರ ಕಾರ್ಮಿಕರ ಸಮಸ್ಯೆ ಆಲಿಸಿದ ಶಾಸಕ ಅಭಯ, ನಂತರ ಪ್ರತಿಯೊಬ್ಬ ಪೌರ ಕಾರ್ಮಿಕರಿಗೂ ಆಹಾರದ ಕಿಟ್ ನೀಡಿ ಬೀಳ್ಕೊಟ್ಟರು. ಈ ವೇಳೆ ಮಾತನಾಡಿದ ಶಾಸಕ ಅಭಯ ಪಾಟೀಲ, ಲಾಕ್ಡೌನ್ ವೇಳೆ ಬೆಳಗಾವಿಯ ಪೌರ ಕಾರ್ಮಿಕರು ನಿರಂತರ ಕೆಲಸ ಮಾಡಿದ್ದಾರೆ. ಸ್ವಚ್ಛತೆಗಾಗಿ ಸಮಯವನ್ನೂ ಲೆಕ್ಕಿಸದೇ ದುಡಿಯುತ್ತಿದ್ದಾರೆ. ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಂತೆಯೇ ಕೊರೊನಾ ವಾರಿಯರ್ಸ್ಗಳಾಗಿ ಪೌರ ಕಾರ್ಮಿಕರು ದುಡಿಯುತ್ತಿದ್ದಾರೆ. ಈ ಕಾರ್ಮಿಕರ ಸೇವೆ ನಿಜಕ್ಕೂ ಅಮೂಲ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ