ಬ್ರಿಡ್ಜ್ ಕಂ.ಬ್ಯಾರೇಜ್ ಕಾಮಗಾರಿ ವೀಕ್ಷಣೆ
Team Udayavani, Jan 29, 2020, 1:01 PM IST
ರಾಮದುರ್ಗ: ತಾಲೂಕಿನ ಸಂಗಳ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ನಿರ್ಮಿಸಿದ ಬ್ರಿಡ್ಜ್ ಕಂ. ಬ್ಯಾರೇಜ್ನ್ನು ಶಾಸಕ ಮಹಾದೇವಪ್ಪ ಯಾದವಾಡ, ಸ್ಥಳೀಯ ಮುಖಂಡರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.
ಮೊದಲು ನಿರ್ಮಾಣ ಮಾಡಿದ ಬ್ರಿಡ್ಜ್ ಕಂ. ಬ್ಯಾರೇಜ್ ನೆಲಮಟ್ಟಕ್ಕಿದೆ. ನದಿ ಬದಿ ತುಂಬಾ ಎತ್ತರದಲ್ಲಿದೆ. ಅದಕ್ಕೆ ತಕ್ಕಂತೆ ಬ್ರಿಡ್ಜ್ ನಿರ್ಮಿಸಿ, ಬ್ರಿಡ್ಜ್ ನ ಹಿಂದೆ ಹಾಗೂ ಮುಂದಿನ ನದಿಯಲ್ಲಿ ತುಂಬಿಕೊಂಡ ಹೂಳು ತೆಗೆಯಬೇಕಾದ ಅಗತ್ಯತೆ ಇದ್ದು, ಅಗಲೀಕರಣ ಮಾಡುವ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ಜಮೀನುಗಳ ಮಾಲೀಕರು ಸಹಕಾರ ನೀಡಬೇಕು. ಗ್ರಾಮದ ಸ್ಥಳೀಯ ಮುಖಂಡರು ಜವಾಬಾœರಿ ತೆಗೆದುಕೊಂಡು ನದಿ ಹೂಳೆತ್ತಿ, ಎತ್ತರದ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಪರಸ್ಪರರು ಸಹಕಾರ ನೀಡಿದಲ್ಲಿ ಮಾತ್ರ ಯೋಜಿತ ಉದ್ದೇಶ ಈಡೇರಲು ಸಾಧ್ಯವಿದೆ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ ಎಂ. ಎನ್. ಭಜಂತ್ರಿ ಅವರಿಗೆ ನವೀಕರಣ ಹಾಗೂ ನದಿ ಹೂಳೆತ್ತಲು ಕ್ರಿಯಾ ಯೋಜನೆ ಸಿದ್ಧಪಡಿಸಿಸರಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದರು. ಈ ಕುರಿತು ಸಣ್ಣ ನೀರಾವರಿ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಕಾಮಗಾರಿಗೆ ಅಗತ್ಯ ಅನುದಾನ ಬಿಡುಗಡೆಗೆ ಒತ್ತಾಯಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಗ್ರಾಮದ ಮುಖಂಡರಾದ ಬಸಣ್ಣ ಕುದರಿ, ಮಲ್ಲಣ್ಣ ಅಂಗಡಿ, ರಾಯನಗೌಡ ಗೌಡ್ರ, ಎಸ್.ಎ. ಸಂಗಳಮಠ, ಚೆನ್ನಪ್ಪಗೌಡ್ರ ಸೇರಿದಂತೆ ಗ್ರಾಮಸ್ಥರು ಹಾಗೂ ಗ್ರಾ.ಪಂ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ