ಅನಧಿಕೃತ ಲೇಔಟ್ ವಿರುದ್ಧ ಬುಡಾ ಸಮರ


Team Udayavani, Sep 24, 2019, 11:07 AM IST

bg-tdy-2

ಬೆಳಗಾವಿ: ಕುಂದಾನಗರಿ ಬೆಳಗಾವಿ ನಗರ ಸ್ಮಾರ್ಟ್‌ ಸಿಟಿಯ ಪಟ್ಟ ಅಲಂಕರಿಸಿದರೂ ಅನಧಿಕೃತ ಬಡಾವಣೆಗಳ ಭೂತದ ಕಾಟದಿಂದ ಹೊರಬಂದಿಲ್ಲ. ನಗರದಲ್ಲಿ ನಾಯಿ ಕೊಡೆಯಂತೆ ತಲೆ ಎತ್ತುತ್ತಿರುವ ಅನಧಿಕೃತ ಲೇಔಟ್‌ಗಳಿಗೆ ಮೂಗುದಾರ ಹಾಕಿ ಸಮರ ಸಾರಲು ಮುಂದಾಗಿರುವ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಸೋಮವಾರ ಒಂದೇ ದಿನ 21 ಲೇಔಟ್‌ಗಳನ್ನು ತೆರವುಗೊಳಿಸಿದೆ.

ಬುಡಾ ಆಯುಕ್ತ ಪ್ರೀತಮ್‌ ನಸಲಾಪುರೆ  ಅವರನ್ನೊಳಗೊಂಡ ತಂಡ ಸೋಮವಾರ ಬೆಳಗ್ಗೆ ದಾಳಿ ನಡೆಸಿ ಜೆಸಿಬಿ ಮೂಲಕ ಅನಧಿಕೃತ ಲೇಔಟ್‌ಗಳನ್ನು ನೆಲಸಮಗೊಳಿಸಿದೆ. ಇಲ್ಲಿಯ ಗಾಂಧಿನಗರ, ಬಸವನ ಕುಡಚಿ, ವಡಗಾಂವ, ಅನಗೋಳ ಹಾಗೂ ಪೀರನವಾಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಒಟ್ಟು 21 ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿಸಿದೆ.

ದೀಪಕರಾವ ಶ್ರೀಪಾಲ ಪಾಟೀಲ, ಜೀನಪ್ಪ ನೇಮಿನಾಥ ಪಾಟೀಲ, ವಿಘ್ನೇಶ್ವರ ಕೋ ಆಪ್‌ ಸೊಸೈಟಿ, ಸಂಜಯ ಪರಶುರಾಮ ಶಿಂಧೆ, ರವಿ ಪಾಟೀಲ, ಕಿತ್ತೂರ ಅಸೋಸಿಯೇಟ್ಸ್‌, ಯಲ್ಲಪ್ಪ ಪಾಟೀಲ, ಅಸ್ಲಮ ಇಸ್ಮಾಯಿಲ್‌ ಅತ್ತಾರ, ಸುರೇಶ ಬಾಳಪ್ಪ ಗುಂಟಪ್ಪನವರ, ಪುಂಡಲೀಕ ಗೋವಿಂದ ಧಾಮಣೇಕರ, ಗಂಗಾಧರ ಅಜೀತ ಕಳ್ಳಿಮನಿ, ಬಶೀರ ಅಹ್ಮದ ಇಮ್ರಾನ ತಾಶೀಲ್ದಾರ, ಬಂದೇನವಾಜ ಅಬ್ದುಲಸತ್ತಾರ ಬಾಳೇಕುಂದ್ರಿ, ಶ್ರೇಯಸ ಧರ್ಮಪ್ಪ ಕಲಕುಪ್ಪಿ, ಗುಂಡೋಜಿ ಶಿವಾಜಿರಾವ ಹಲಗೇಕರ,ಆದೀಲಬೇಗ್‌ ಅನ್ವರಬೇಗ್‌ ನಿಜಾಮಿ, ಸುಲೇಮಾನ ಅಲ್ಲಾಭಕ್ಷ ಅವಟಿ, ಆನೀಸ್‌ಅಹ್ಮದ ಇಬ್ರಾಹಿಂ ಖೋತವಾಲ, ಮೊಹ್ಮದಸಾಧಿಕ ಅಲ್ಲಾಭಕ್ಷ ಮುಲ್ಲಾ,

ಅಸ್ಲಮ್‌ ಅತ್ತಾರ ಎಂಬವರ ಅನಧಿಕೃತ ಲೇಔಟ್‌ಗಳು ತೆರವುಗೊಂಡಿವೆ. ಈ ಲೇಔಟ್‌ಗಳನ್ನು ಗುರುತಿಸಿ ಅಂಥ ಮಾಲೀಕರಿಗೆ 2-3 ಬಾರಿ ನೋಟಿಸ್‌ಗಳನ್ನು ಕಳುಹಿಸಲಾಗಿತ್ತು. ಆದರೆ ಯಾರೊಬ್ಬರೂ ನೋಟಿಸ್‌ಗೆ ಉತ್ತರ ನೀಡಿರಲಿಲ್ಲ. ಜತೆಗೆ ವಿಚಾರಣೆಗೆ ಕೂಡ ಹಾಜರಾಗಿರಲಿಲ್ಲ. ಹೀಗಾಗಿ ಸರ್ಕಾರದ ನಿಯಮಾವಳಿ ಪ್ರಕಾರ ನಮ್ಮ ಸಿಬ್ಬಂದಿಗಳೊಂದಿಗೆ ಹೋಗಿ ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಬುಡಾ ಆಯುಕ್ತ ಪ್ರೀತಮ್‌ ನಸಲಾಪುರೆ ತಿಳಿಸಿದ್ದಾರೆ.

ಬುಡಾ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದಿಂದ ಯಾವುದೇ ಅಧಿಕೃತ ದಾಖಲೆಗಳನ್ನು ಪಡೆದುಕೊಳ್ಳದೇ ಸಿಕ್ಕ ಸಿಕ್ಕಲ್ಲಿ ಜಾಗ ಖರೀದಿಸಿರುವ ಅಕ್ರಮ ಕುಳಗಳು ಲೇಔಟ್‌ಗಳನ್ನು ನಿರ್ಮಿಸಿದ್ದಾರೆ. ಮಾರುಕಟ್ಟೆಯ ದರಕ್ಕಿಂತಲೂ ಕಡಿಮೆ ದರಕ್ಕೆ ಜಾಗ ಮಾರಾಟ ಮಾಡುತ್ತಿದ್ದಾರೆ. ಈ ಆಸೆಗೆ ಬಿದ್ದು ಜನರು ಮುಂಗಡ ಹಣ ಕೊಟ್ಟು ಖರೀದಿಸುತ್ತಿದ್ದಾರೆ. ಆದರೆ ಇವು ಅನಧಿಕೃತ ಎಂಬುದು ಸಾರ್ವಜನಿಕರಿಗೆ ಗೊತ್ತಾಗುತ್ತಿಲ್ಲ.

100 ರೂ. ಬಾಂಡ್‌ ಮೇಲೆ ಜಾಗಗಳನ್ನು ಮಾರಾಟ ಮಾಡುವ ಜಾಲ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಬುಡಾ ಆಯುಕ್ತ ಪ್ರೀತಮ್‌ ನಸಲಾಪುರೆ ಅವರು, ಅನಧಿಕೃತ ಲೇಔಟ್‌ಗಳ ಆಸೆಗೆ ಬಿದ್ದು ಜಾಗ ಖರೀದಿಸಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರೂ ಜನರು ಎಚ್ಚೆತ್ತುಕೊಂಡಿರಲಿಲ್ಲ ಎಂದು ನಸಲಾಪುರೆ ವಿವರಿಸಿದ್ದಾರೆ.

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.