ಕಿತ್ತೂರಲ್ಲೇ ಕೋಟೆ-ಅರಮನೆ ಪ್ರತಿರೂಪ ನಿರ್ಮಿಸಿ

ಸಮುದಾಯ ಭವನ ನಿರ್ಮಾಣಕ್ಕೆ ಪುರಾತತ್ವ ಇಲಾಖೆಯವರು ಅನುಮತಿ ಕೊಟ್ಟಿದ್ದಾರೆ.

Team Udayavani, Aug 3, 2022, 11:14 AM IST

ಕಿತ್ತೂರಲ್ಲೇ ಕೋಟೆ-ಅರಮನೆ ಪ್ರತಿರೂಪ ನಿರ್ಮಿಸಿ

ಬೆಳಗಾವಿ/ಚ.ಕಿತ್ತೂರು: ಚನ್ನಮ್ಮನ ಕಿತ್ತೂರು ಕೋಟೆಯ ಪ್ರತಿರೂಪ ಅರಮನೆಯನ್ನು ಬಚ್ಚನಕೇರಿಯಲ್ಲಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕಿತ್ತೂರಿನ ಜನತೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕಿತ್ತೂರಿನಲ್ಲಿ ಚನ್ನಮ್ಮ ಪ್ರತಿಮೆಗೆ ಗೌರವ ಸಲ್ಲಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಂಗಡಿ ಮುಂಗಟ್ಟು ಸೇರಿದಂತೆ ವ್ಯಾಪಾರ ವಹಿವಾಟು ಬಂದ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಿತ್ತೂರು ಬಂದ್‌ ಯಶಸ್ವಿಯಾಯಿತು. ನಂತರ ಬೆಳಗಾವಿ ನಗರಕ್ಕೆ ಆಗಮಿಸಿ ಜಿಲ್ಲಾ ಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಪ್ರತಿಭಟಿಸಿದರು.

ಮೊದಲಿನಿಂದಲೂ ಅರಮನೆ ಇರುವ ಜಾಗದಲ್ಲಿಯೇ ಅರಮನೆಯ ಪ್ರತಿರೂಪವನ್ನು ನಿರ್ಮಿಸಬೇಕು. ಆದರೆ ಸರ್ಕಾರ ಮತ್ತು ಜಿಲ್ಲಾಡಳಿತ ಕಿತ್ತೂ ರು ತಾಲೂಕಿನ ಬಚ್ಚನಕೇರಿ ಗ್ರಾಮದ 57 ಎಕರೆ ಜಾಗದಲ್ಲಿ ಕಿತ್ತೂರು ಕೋಟೆಯ ಪ್ರತಿರೂಪದ ಅರಮನೆ ನಿರ್ಮಾಣಕ್ಕೆ ಮುಂದಾಗಿದೆ. ಇದು ಕಿತ್ತೂರು ನಾಡಿಗೆ ಮಾಡಿರುವ ಘೋರ ಅವಮಾನವಾಗಿದೆ ಎಂದು ಆರೋಪಿಸಿದರು.

ಕಿತ್ತೂರಿನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಕಿತ್ತೂರಿನ ಕೋಟೆಯ ಪ್ರತಿರೂಪವನ್ನು ಕಿತ್ತೂರು ಬಿಟ್ಟು ಬಚ್ಚನಕೇರಿ ಎಂಬ ಗ್ರಾಮದಲ್ಲಿ ನಿರ್ಮಿಸಲು ಹೊರಟಿರುವ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ಕಿತ್ತೂರನ್ನು ಹೊರಗಿಟ್ಟು ಬೇರೆ ಕಡೆಗೆ ಪ್ರತಿರೂಪದ ಅರಮನೆ ನಿರ್ಮಾಣಕ್ಕೆ ಆದೇಶ ಹೊರಡಿಸಿದೆ. ಕಿತ್ತೂರು ಜನತೆ ಹಾಗೂ ರಾಣಿ ಚನ್ನಮ್ಮನಿಗೆ ಸರ್ಕಾರ ಅವಮಾನ ಮಾಡಿದೆ ಎಂದು ಕಿಡಿಕಾರಿದರು.

ಕಿತ್ತೂರಿನ ಪರಂಪರೆ ಹಾಗೂ ಇತಿಹಾಸಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು. ಕಿತ್ತೂರಿನ ವೈಭವಯುತ ನೆಲದಲ್ಲಿಯೇ ಐತಿಹಾಸಿಕ ಗತವೈಭವ ಮರಳಿ ಬರುವ ಕಾರ್ಯ ಸರ್ಕಾರ ಮಾಡಬೇಕು. ಬಚ್ಚನಕೇರಿಯಲ್ಲಿ ಉದ್ದೇಶಿಸಿರುವ ಪ್ರತಿರೂಪದ ಅರಮನೆ ನಿರ್ಮಾಣ ಕಾರ್ಯವನ್ನು ಕೈಬಿಡಬೇಕು. ಕಿತ್ತೂರಿನಲ್ಲಿರುವ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಇಲ್ಲಿಯೇ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯಬೇಕು. ಕಿತ್ತೂರು ಕೋಟೆ ಎದುರಿನ ರೈತರ ಜಮೀನಿಗೆ ಸೂಕ್ತ ಪರಿಹಾರ ನೀಡಿ ಸ್ವಾಧೀನಪಡಿಸಿಕೊಂಡು ಕಿತ್ತೂರಿನಲ್ಲಿಯೇ ಅರಮನೆ ಪ್ರತಿರೂಪ ನಿರ್ಮಾಣ ಮಾಡಬೇಕು. ಸದ್ಯ ಇರುವ ಕೋಟೆಯಲ್ಲಿ ಅರಮನೆ ಕಟ್ಟಲು ಪುರಾತತ್ವ ಇಲಾಖೆಯ ನಿರ್ಬಂಧ ಇರಬಹುದು. ಆದರೆ ಅದರ ಎದುರಿಗೆ ಖಾಸಗಿ ಜಾಗದಲ್ಲಿ ಕಟ್ಟುವುದರಿಂದ ಸಮಸ್ಯೆ ಆಗುವುದಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು.

ಶ್ರೀ ಮಹಾಲಕ್ಷ್ಮಿ (ದ್ಯಾಮವ್ವ) ದೇವಿ ಮಂದಿರ ನಿರ್ಮಿಸಲು 6 ಎಕರೆ ಜಾಗದಲ್ಲಿ ತೋಟಗಾರಿಕಾ ಇಲಾಖೆಯ ಕೆಲಸಕ್ಕೆ ಹಾಗೂ ಉತ್ಸವ ವೇಳೆ ಸಮುದಾಯ ಭವನ ನಿರ್ಮಾಣಕ್ಕೆ ಪುರಾತತ್ವ ಇಲಾಖೆಯವರು ಅನುಮತಿ ಕೊಟ್ಟಿದ್ದಾರೆ. ಆದರೆ ಕೋಟೆ ನಿರ್ಮಿಸಲು ಅವರು ಅನುಮತಿ ಏಕೆ ನೀಡುವುದಿಲ್ಲ. ರಾಮಮಂದಿರ ಎಲ್ಲಿ ಇತ್ತೋ ಅಲ್ಲಿಯೇ ನಿರ್ಮಾಣ ಆಗುತ್ತಿದೆ. ಅದೇ ರೀತಿ ಚನ್ನಮ್ಮಾಜಿ ಆಡಳಿತ ಮಾಡಿದ ಜಾಗದಲ್ಲಿಯೇ ಅರಮನೆ ನಿರ್ಮಾಣ ಆಗಬೇಕು ಎಂದು ಮುಖಂಡ ಹಬೀಬ್‌ ಶಿಲೇದಾರ ಆಗ್ರಹಿಸಿದರು.

ವಾದ್ಯ ಮೇಳಗಳೊಂದಿಗೆ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಯಿತು. ಜಿಲ್ಲಾಡಳಿತದ ಗಮನಸೆಳೆಯಲು ವಿವಿಧ ದೇಸಿ ವಾದ್ಯದವರು ಪಾಲ್ಗೊಂಡಿದ್ದರು. ಪಪಂ ಸದಸ್ಯರಾದ ಜಯಸಿದ್ದರಾಮ ಮಾರೀಹಾಳ, ಕೃಷ್ಣಾ ಬಾಳೇಕುಂದ್ರಿ, ಶಂಕರ ಬಡಿಗೇರ, ಪ್ರವೀಣಗೌಡ ಪಾಟೀಲ, ಎಂ.ಎಸ್‌ ಜಕಾತಿ, ಮುಖಂಡರಾದ ಬಾಬಾಸಾಹೇಬ ಪಾಟೀಲ, ಯಲ್ಲಪ್ಪ ವಕ್ಕುಂದ, ಬಸವರಾಜ ಸಂಗೊಳ್ಳಿ, ಕಾಶೀನಾಥ ಕಿನಾರೆ, ಸಚೀನ್‌ ಮಾರೀಹಾಳ, ಜಯದೇವ ಮಾರೀಹಾಳ, ವಿಜಯಕುಮಾರ ಶಿಂಧೆ ಇತರರು ಇದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.