ಬಸ್ ನಿಲ್ದಾಣ ಕಟ್ಟಡ ತೆರವು ಬೇಡ
Team Udayavani, Feb 18, 2020, 3:06 PM IST
ಬೈಲಹೊಂಗಲ: ಪಟ್ಟಣದ ಸುಸಜ್ಜಿತ ಕೇಂದ್ರ ಬಸ್ನಿಲ್ದಾಣ ಕಟ್ಟಡವನ್ನು ಸಾರಿಗೆ ಸಂಸ್ಥೆ ತೆರವು ಮಾಡುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಉಪವಿಭಾಗಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಇದಕ್ಕೂ ಮೊದಲು ವಿವಿಧ ಸಂಘಟನೆಗಳು ಒಂದು ಗಂಟೆ ಕಾಲ ರಸ್ತೆ ನಡೆಸಿ ಪ್ರತಿಭಟನಾ ಮೆರವಣಿಗೆ ನಡೆಸಿದವು. ಈ ವೇಳೆ ಸಾಮಾಜಿಕ ಕಾರ್ಯಕರ್ತ ರಫೀಕ ಬಡೇಘರ, ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಮಾತನಾಡಿ, ಹಲವು ದಶಕಗಳ ಹಿಂದೆ ನಿರ್ಮಿಸಿದ್ದ ಸಾರಿಗೆ ಸಂಸ್ಥೆ ಬಸ್ನಿಲ್ದಾಣವು ಸುಸಜ್ಜಿತ ಹಾಗೂ ಆಕರ್ಷಣಿಯವಾಗಿದೆ. ಈ ಕಟ್ಟಡದಲ್ಲಿರುವ ವಾಣಿಜ್ಯ ಮಳಿಗೆಗಳಿಂದ ಹಾಗೂ ನಿಲ್ದಾಣದ ಮುಂಭಾಗದಲ್ಲಿ ಅಂಟಿಕೊಂಡಿರುವ ವಾಣಿಜ್ಯ ಮಳಿಗೆಗಳಿಂದ ಲಕ್ಷಾಂತರ ರೂ. ಸಾರಿಗೆ ಸಂಸ್ಥೆಗೆ ಆದಾಯ ಬರುತ್ತಿದ್ದು,ಇಂಥ ವಾಣಿಜ್ಯ ಮಳಿಗೆಗಳನ್ನು ಸಹ ಕೆಡವಿ ಹೊಸ ಕಟ್ಟಡ ನಿರ್ಮಿಸುವ ಸಾರಿಗೆ ಸಂಸ್ಥೆಯ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಸಾರ್ವಜನಿಕರ ಮನವಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ಮುಂಬರುವ ದಿನಗಳಲ್ಲಿ ಬೈಲಹೊಂಗಲ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಜಿಪಂ ಸದಸ್ಯ ಶಂಕರ ಮಾಡಲಗಿ, ಪುರಸಭೆ ಮಾಜಿ ಉಪಾಧ್ಯಕ್ಷ ಮಹಾಂತೇಶ ತುರಮರಿ ಮಾತನಾಡಿ, ಈಗಾಗಲೇ ಸಾರಿಗೆ ಸಂಸ್ಥೆಯು ನಷ್ಟದಲ್ಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೈಲಹೊಂಗಲದಲ್ಲಿ ನಡೆದ ಸಭೆಯಲ್ಲೆ ಹೇಳಿದ್ದಾರೆ. 11ರಿಂದ 13 ಲಕ್ಷ ಕಿ.ಮೀ ಓಡಿರುವ ಬಸ್ಸುಗಳನ್ನು ಗುಜರಿಗೆ ಹಾಕಬೇಕೆಂಬ ಸರ್ಕಾರದ ನಿಯಮವಿದ್ದರೂ ಅದೇ ಬಸ್ಸುಗಳನ್ನು ಇನ್ನೂ ಸಾರ್ವಜನಿಕರ ಸೇವೆಯಲ್ಲಿ ಓಡಿಸುತ್ತಿರುವುದು ದುರ್ದೈವ¨ ಸಂಗತಿ ಎಂದರು.
ಈ ವೇಳೆ ರಾಜು ಭರಮಗೌಡರ, ಪರಶುರಾಮ ರಾಯಭಾಗ, ವಿಠuಲ ಹಂಪಿಹೊಳಿ, ಬಾಳಪ್ಪ ಚಳಕೊಪ್ಪ, ಅಭಿಷೇಕ ಬೋಳಣ್ಣವರ, ಶ್ರೀದೇವಿ ನಾಯ್ಕರ, ಇಸ್ಮಾಯಿಲ್ ಬಡೇಘರ, ಮಹ್ಮದಲಿ ಬಾಗೇವಾಡಿ, ರಾಜು ಬೋಳಣ್ಣವರ, ಫಾರೂಕ ಪಟ್ಟಿಹಾಳ, ಉಳವಪ್ಪ ಅಂಗಡಿ ಇತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ