ಉಪ ಚುನಾವಣೆ ದಿಕ್ಸೂಚಿಯಲ್ಲ: ಪರಂ
Team Udayavani, Oct 23, 2018, 6:55 AM IST
ಬೆಳಗಾವಿ: ಮುಂದಿನ ಲೋಕಸಭೆ ಚುನಾವಣೆಗೆ ಈಗ ನಡೆಯುತ್ತಿರುವ ಉಪಚುನಾವಣೆ ದಿಕ್ಸೂಚಿಯಲ್ಲ. ಐದೂ ಕ್ಷೇತ್ರಗಳಲ್ಲಿ ಸಮ್ಮಿಶ್ರ ಸರಕಾರಕ್ಕೆ ಗೆಲುವು ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬಾರದು ಎನ್ನುವುದು ಜನರ ಅಭಿಪ್ರಾಯವಾಗಿದ್ದು, ಸಮ್ಮಿಶ್ರ ಸರಕಾರಕ್ಕೆ ಈ ಚುನಾವಣೆ ಶಕ್ತಿ ತುಂಬಲಿದೆ ಎಂದರು.
ಸಚಿವರಾದ ರಮೇಶ ಜಾರಕಿಹೊಳಿ ಹಾಗೂ ಡಿ.ಕೆ. ಶಿವಕುಮಾರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅವರಿಬ್ಬರೂ ಮೊದಲಿನಿಂದಲೂ ಸ್ನೇಹಿತರು. ಈ ತರಹ ಮಾತನಾಡುವುದು ಸಹಜವಾಗಿ ಬಿಟ್ಟಿದೆ. ಬಹಿರಂಗವಾಗಿ ಇಂಥ ಹೇಳಿಕೆ ನೀಡದಂತೆ ಇಬ್ಬರಿಗೂ ಸೂಚಿಸಲಾಗುವುದು ಎಂದು ಹೇಳಿದರು.
ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದಂದು ಎಂಇಎಸ್ ಕರಾಳ ದಿನ ಆಚರಿಸುತ್ತಿದ್ದು, ಈ ಸಲವೇನೂ ಅದು ಹೊಸದಲ್ಲ. ಆದರೆ ಕರಾಳ ದಿನಾಚರಣೆ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಡಾ| ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ