ಪೌರತ್ವ ಕಾಯಿದೆಯಿಂದ ಭಾರತೀಯರಿಗೆ ಯಾವುದೇ ತೊಂದರೆಯಿಲ್ಲ: ಸಿ ಟಿ ರವಿ
Team Udayavani, Dec 20, 2019, 3:17 PM IST
ಬೆಳಗಾವಿ: ಪೌರತ್ವ ಕಾಯಿದೆ ಜಾರಿಯಿಂದ ಭಾರತೀಯರಿಗೆ ಯಾವುದೇ ತೊಂದರೆಯಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೌರತ್ವ ಕಾಯಿದೆ ಜಾರಿಯಿಂದ ಮುಸಲ್ಮಾನರೂ ಸೇರಿದಂತೆ 130 ಕೋಟಿ ಭಾರತೀಯರಿಗೆ ಯಾವುದೇ ತೊಂದರೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯದ ನಿರಾಶ್ರಿತರಿಗೆ ಆಶ್ರಯ ನೀಡುವುದು ಕಾಯ್ದೆಯ ಉದ್ದೇಶವಾಗಿದೆ. ಕಾಯ್ದೆ ಸಂವಿಧಾನ ಬಾಹಿರ ಆಗಿದ್ದರೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಿ. ಕಾಯ್ದೆ ವಿರುದ್ದ ವದಂತಿಗಳನ್ನು ಪಸರಿಸಿ ಶಾಂತಿ-ಸುವ್ಯವಸ್ಥೆಗೆ ಭಂಗ ತರಲು ಕೆಲವರು ಪಿತೂರಿ ನಡೆಸಿದ್ದಾರೆ ಎಂದರು.
ಚಳವಳಿ ನೆಪದಲ್ಲಿ ಹಿಂಸಾಚಾರ ನಡೆಸಲಾಗುತ್ತಿದ್ದು, ಕೋಮು ಭಾವನೆ ಕೆರಳಿಸುವ ಕೆಲಸ ಮಾಡಲಾಗುತ್ತಿದೆ. ಸಂಚಿಗೆ ಬಲಿಯಾಗಿ ಹಿಂಸಾಚಾರಕ್ಕೆ ಇಳಿದವರು ಇದನ್ನು ಅರಿತುಕೊಳ್ಳಬೇಕು. ಹಿಂಸಾಚಾರವನ್ನು ಪ್ರಜಾಪ್ರಭುತ್ವ ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ಪ್ರಚೋದಿಸುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕಳಸಾ-ಬಂಡೂರಿ ವಿಷಯ ಪ್ರಸ್ತಾಪಿಸಿದ ಅವರು ಯೋಜನೆಗೆ ಕೊಟ್ಟಿದ್ದ ಅನುಮತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಆದ್ದರಿಂದ ಕೇಂದ್ರಕ್ಕೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮನವರಿಕೆ ಮಾಡಿಕೊಟ್ಟು ಅನುಮತಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!
Belgavi;ಗೋ ಸಾಗಾಟ ಲಾರಿ ತಡೆದ ಹಿಂದೂ ಕಾರ್ಯಕರ್ತರು: ಬಿಗುವಿನ ವಾತಾವರಣ
Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ
MUST WATCH
ಹೊಸ ಸೇರ್ಪಡೆ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ