ಎಸ್ಎಪಿ ಕಾನೂನು ಬಲಪಡಿಸಲು ಆಗ್ರಹ
•ಹಲ್ಲಿಲ್ಲದ ಹಾವಿನಂತಾದ ಕಾನೂನು: ಕೋಡಿಹಳ್ಳಿ ಟೀಕೆ•ಕಂಪನಿಗಳಿಗೆ ಮಾತ್ರ ಲಾಭದಾಯಕ ಬೆಳೆ ವಿಮೆ
Team Udayavani, Jul 31, 2019, 11:49 AM IST
ಗೋಕಾಕ: ನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿದರು.
ಗೋಕಾಕ: ಜಗದೀಶ ಶೆಟ್ಟರ ಅವರು ರಾಜ್ಯದ ಮುಖ್ಯಮಂತ್ರಿಗಳಿದ್ದಾಗ ರೈತರ ಹಿತಕ್ಕಾಗಿ ಜಾರಿಗೊಳಿಸಿದ್ದ ಎಸ್ಎಪಿ ಕಾನೂನಿಗೆ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚಿನ ಶಕ್ತಿ ತುಂಬಬೇಕೆಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಹಲ್ಲಿಲ್ಲದ ಹಾವಿನಂತಾಗಿರುವ ಎಸ್ಎಪಿ ಕಾನೂನಿಗೆ ಹೆಚ್ಚಿನ ಅಧಿಕಾರ ನೀಡಿ ಸಬಲಗೊಳಿಸಬೇಕೆಂದು ಹೇಳಿದರು.
ಕೇಂದ್ರ ಸರಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿದಾಗ ಅದು ರೈತರಿಗೆ ಹಾನಿ ಮಾಡುತ್ತಿದ್ದರೆ ಎಸ್ಎಪಿ ಪ್ರಕಾರ ಅದನ್ನು ಸರಿದೂಗಿಸಲು ಸಾಧ್ಯ. ಸರಕಾರಕ್ಕೆ ರೈತರ ಬೆಳೆಗಳ ಸಂಬಂಧಿಸಿದಂತೆ ವೈಜ್ಞಾನಿಕ ಮಾನದಂಡವೇ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಕಬ್ಬಿನ ಇಳುವರಿ 12 ನೀಡಿದರೂ ಕಡಿಮೆ ಬೆಲೆ ನೀಡಲಾಗುತ್ತಿದೆ. ಇಳುವರಿ ಪ್ರಕಾರ ಕಬ್ಬಿಗೆ ಯೋಗ್ಯ ನೀಡುತ್ತಲೇ ಇಲ್ಲ. ಜಿಲ್ಲೆಯ ಕೆಲ ಸಕ್ಕರೆ ಕಾರಖಾನೆಗಳು ರೈತರ ಬಿಲ್ ಬಾಕಿ ಉಳಿದಿದ್ದರೂ ಸರಕಾರದ ವರದಿಯಲ್ಲಿ ಎಲ್ಲ ಸಕ್ಕರೆ ಕಾರಖಾನೆಗಳು ರೈತರ ಬಿಲ್ ಬಾಕಿ ಇಲ್ಲವೆಂದು ಹೇಳುತ್ತಿರುವುದು ಅತ್ಯಂತ ದುರ್ದೈವದ ಸಂಗತಿ. ಅಧಿಕಾರಿ ವರ್ಗ ಹಾಗೂ ಉದ್ಯೋಗಪತಿಗಳು ಒಂದಾಗಿ ರೈತರನ್ನು ವಂಚಿಸುತ್ತಿದ್ದಾರೆ ಎಂದೂ ದೂರಿದರು.
ಮಹದಾಯಿ ಯೋಜನೆ ಕುರಿತು ಮಾತನಾಡಿದ ಅವರು, ಮಹದಾಯಿ ಯೋಜನೆ ಬಗ್ಗೆ ನ್ಯಾಯ ಮಂಡಳಿ ತೀರ್ಪು ನೀಡಿದ್ದು ರಾಜ್ಯದ ಪಾಲಿನ ನೀರಿನ ಬಳಕೆಗಾಗಿ ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು. ನಂತರ ಮೇಲ್ಮನವಿ ಸಲ್ಲಿಸಬೇಕಿತ್ತು ಎಂದು ಹೇಳಿದರು.
ರಾಜ್ಯದಲ್ಲಿ ಸತತ ಬರಗಾಲ ಬಿದ್ದರೂ ಬೆಳೆ ವಿಮೆ ಯೋಜನೆಯಿಂದ ರೈತರಿಗೆ ಏನೂ ಉಪಯೋಗವಿಲ್ಲ. ಅದು ವಿಮಾ ಕಂಪನಿಗಳಿಗೆ ಮಾತ್ರ ಲಾಭದಾಯಕ ಎಂದು ಹೇಳಿದ ಕೋಡಿಹಳ್ಳಿ, ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ಉತ್ತರಿಸಿ, ಇಡೀ ದೇಶವೇ ಕರ್ನಾಟಕದ ಬಗ್ಗೆ ಹೇಸಿಗೆ ಪಡುವಂತಾಗಿದ್ದು, ಇಂಥ ಹೀನ ರಾಜಕೀಯ ನಡೆಯಬಾರದು ಎಂದು ಉತ್ತರಿಸಿದರು.
ರೈತರು ಹನಿ ನೀರಾವರಿ ಕೈಗೊಳ್ಳುವ ಜೊತೆಗೆ ಬರಿಯ ಕಬ್ಬು ಬೆಳೆಯದೇ ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ಪ್ರೇರೇಪಿಸಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಭೀಮಶಿ ಗದಾಡಿ, ಗಣಪತಿ ಇಳಿಗೇರ, ಮಂಜುನಾಥ ಪೂಜೇರಿ, ಮುತ್ತೆಪ್ಪ ಬಾಗನ್ನವರ, ಅಬ್ಬಣ್ಣಿ ಶಿವಪ್ಪ, ಭಕ್ತರಹಳ್ಳಿ ಭೈರೇಗೌಡ, ಗೋಪಾಲ ಕುಕನೂರ, ಭರಮು ಖೆಮಲಾಪೂರೆ, ಇರ್ಫಾನ್ ಜಮಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ