ಪ್ರಾದೇಶಿಕ ಆಯುಕ್ತರ ಹುದ್ದೆ ರದ್ದತಿಗೆ ಕಿಡಿ

ವಿಜಯಭಾಸ್ಕರ ಶಿಫಾರಸು! ­ಧ್ವನಿಗೂಡಿಸಿದ ಕಂದಾಯ ಸಚಿವ! ­ಹೋರಾಟಕ್ಕೆ ಸಜ್ಜಾದ ಅಭಿವೃದ್ಧಿ ಪರ ಚಿಂತಕರು

Team Udayavani, Jul 14, 2021, 8:21 PM IST

5705325811bgv2

ವರದಿ: ಕೇಶವ ಆದಿ

ಬೆಳಗಾವಿ: ಅಧಿಕಾರ ವಿಕೇಂದ್ರೀಕರಣ ಮತ್ತು ಆಡಳಿತಾತ್ಮಕ ಅನುಕೂಲತೆ ಉದ್ದೇಶದಿಂದ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳು ಸರ್ಕಾರಕ್ಕೆ ಭಾರವಾಗಿವೆಯೇ? ಇವುಗಳನ್ನು ರದ್ದು ಮಾಡುವದು ನ್ಯಾಯವೇ? ಇಂತಹ ಒಂದು ಚರ್ಚೆ ಈಗ ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ಗಂಭೀರವಾಗಿ ನಡೆದಿದೆ.

ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದು ಮಾಡುವುದು ಸೂಕ್ತ ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ ಅವರು ಸರ್ಕಾರಕ್ಕೆ ಶಿಫಾರಸು ಮಾಡಿ ವರದಿ ನೀಡಿದ ನಂತರ ಈ ಶಿಫಾರಸಿನ ಬಗ್ಗೆ ವ್ಯಾಪಕ ಪ್ರಮಾಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸುಗಳಂತೆ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸುವುದು ವಿಕೇಂದ್ರೀಕರಣದ ಮನೋಭಾವಕ್ಕೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು ಎಂಬ ಒತ್ತಾಯ ಸಹ ಕೇಳಿಬಂದಿದೆ. ಹೋರಾಟದ ಸುಳಿವು ಸಹ ಕಂಡಿದೆ. ಇನ್ನೊಂದು ಕಡೆ ಸ್ವತಃ ಕಂದಾಯ ಸಚಿವ ಆರ್‌.ಅಶೋಕ ಅವರು ಪ್ರಾದೇಶಿಕ ಆಯುಕ್ತರ ಕಚೇರಿಗಳು ಸರ್ಕಾರಕ್ಕೆ ಬಿಳಿಯಾನೆಯಂತಾಗಿವೆ ಎಂದು ಹೇಳಿರುವುದು ಸಾರ್ವಜನಿಕವಾಗಿ ಟೀಕೆಗಳಿಗೆ ಗುರಿಯಾಗಿದೆ.

ಬೆಂಗಳೂರಿನಲ್ಲಿ ಅನೇಕ ಬಿಳಿಯಾನೆಗಳು ಇವೆ. ರಿಗೆ ಈ ಆನೆಗಳು ಕಾಣಲಿಲ್ಲವೇ. ಅದೆಲ್ಲವನ್ನೂ ಬಿಟ್ಟು ಪ್ರಾದೇಶಿಕ ಆಯುಕ್ತರ ಕಚೇರಿಗಳ ಮೇಲೆ ಕಣ್ಣು ಹಾಕಿರುವುದು ಏಕೆ, ಇದರ ಹಿಂದೆ ಉನ್ನತಾಧಿಕಾರಿಗಳ ಲಾಬಿ ಕೆಲಸ ಮಾಡಿದೆಯಾ ಎಂದು ಹೋರಾಟಗಾರರು ಹಾಗೂ ಅಭಿವೃದ್ಧಿ ಪರ ಚಿಂತಕರು ಪ್ರಶ್ನೆಕಂದಾಯ ಸಚಿವ ಮಾಡಿದ್ದಾರೆ.

ರಾಜ್ಯದಲ್ಲಿಯ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ರಾಜ್ಯ ಮಟ್ಟದಲ್ಲಿ ಕಂದಾಯ ಸಚಿವಾಲಯವನ್ನು ರಚಿಸಬೇಕು ಎಂಬ ಶಿಫಾರಸು ಅಧಿಕಾರ ವಿಕೇಂದ್ರಿಕರಣದ ವಿರೋಧಿ. ಇಂತಹ ಕ್ರಮ ಜನರಿಗಾಗಲಿ, ಅಭಿವೃದ್ಧಿ ಮತ್ತು ಒಳ್ಳೆಯ ಆಡಳಿತಕ್ಕಾಗಲಿ ಅನುಕೂಲಕರವಾದದ್ದಲ್ಲ. ಹಿರಿಯ ಐಎಎಸ್‌ ಅಧಿಕಾರಿಗಳು ಬೆಂಗಳೂರಿನಿಂದ ಹೊರಗೆ ಹೋಗಲು ಇಚ್ಛಿಸುವದಿಲ್ಲ ಎಂಬ ಕಾರಣಕ್ಕೆ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನೇ ರದ್ದುಗೊಳಿಸುವುದು ನ್ಯಾಯವಾದ ಕ್ರಮವಲ್ಲ ಎಂಬುದು ಉತ್ತರ ಕರ್ನಾಟಕದ ಹೋರಾಟಗಾರರ ಅಭಿಪ್ರಾಯ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.