ಬಿಡುಗಡೆ ವೇಳೆ ಕೋವಿಡ್‌ ನಿಯಮ ಉಲ್ಲಂಘನೆ| ವಿನಯ್ ಸೇರಿ 400 ಮಂದಿ ವಿರುದ್ಧ ದೂರು

 ಹಿರೇಬಾಗೇವಾಡಿ ಟೋಲ್‌ ಬಳಿಯೇ ಬೆಂಬಲಿಗರ ವಾಹನಗಳಿಗೆ ತಡೆ

Team Udayavani, Aug 22, 2021, 1:54 PM IST

strtre

ಬೆಳಗಾವಿ:ಗಡಿಭಾಗ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದ್ದರೆ ಇತ್ತ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ವಿನಯ ಕುಲಕರ್ಣಿ ಅವರನ್ನು ಸ್ವಾಗತಿಸಲು ಶನಿವಾರ ಪಾಲ್ಗೊಂಡಿದ್ದ ಅಪಾರ ಸಂಖ್ಯೆಯ ಜನರು ಕೋವಿಡ್‌ ನಿಯಮ ಉಲ್ಲಂಘಿಸಿದರು.

ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರವಿಲ್ಲದೇ ಸಾವಿರಾರು ಜನರು ಪಾಲ್ಗೊಂಡಿದ್ದರು. ಆದರೆ ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದರು. ನಂತರ ಎಚ್ಚೆತ್ತುಕೊಂಡ ಪೊಲೀಸರು ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ವಿನಯ ಕುಲಕರ್ಣಿ ಸೇರಿ 400 ಜನರ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದಾರೆ.

ವಾರಾಂತ್ಯ ಕರ್ಫ್ಯೂ ಹಾಗೂ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಆರೋಪದಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸರು ಒಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಿಂಡಲಗಾ ಗ್ರಾಪಂ ಪಿಡಿಒ ಅವರು ಕೋವಿಡ್‌ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಮರೆತು ರೋಡ್‌ ಶೋ ನಡೆಸಿದ್ದಾರೆ. ರಸ್ತೆ ಇಕ್ಕೆಲಗಳಲ್ಲಿ ಅಪಾರ ಜನರು ಭಾಗವಹಿಸಿದ್ದರು. ಮೆರವಣಿಗೆ ವೇಳೆ ವಿನಯ ಕುಲಕರ್ಣಿ ಅವರೂ ಮಾಸ್ಕ್ ಧರಿಸಿರಲಿಲ್ಲ. ಪೊಲೀಸರು ಸ್ಥಳದಲ್ಲಿ ಇದ್ದರೂ ಜನಜಂಗುಳಿಯನ್ನು ತಡೆಯಲು ಸಾಧ್ಯವಾಗಲಿಲ್ಲ. ವಿನಯ ಕುಲಕರ್ಣಿ ಬಿಡುಗಡೆ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಜೈಲಿನ ಆವರಣದಲ್ಲಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಜೈಲಿನಿಂದ ಸ್ವಲ್ಪ ದೂರದ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿತ್ತು.

ಧಾರವಾಡ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರು. ಬೆಂಬಲಿಗರ ಕೆಲವೊಂದು ವಾಹನಗಳನ್ನು ಹಿರೇಬಾಗೇವಾಡಿ ಟೋಲ್‌ ನಾಕಾ ಬಳಿಯೇ ನಿಲ್ಲಿಸಲಾಗಿತ್ತು. ರೊಡ್‌ ಶೋ ವೇಳೆ ನಗರದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಕರ್ಫ್ಯೂ ಉಲ್ಲಂಘಿಸಿದ ಕುಲಕರ್ಣಿಗೆ ಸೇನಾ ಅಧಿಕಾರಿಯಿಂದ ಕ್ಲಾಸ್‌

“ವೀಕೆಂಡ್‌ ಕರ್ಫ್ಯೂ ಇದ್ದರೂ ದೇವಸ್ಥಾನಕ್ಕೆ ಹೇಗೆ ಬಂದಿದ್ದೀರಿ’ ಎಂದು ಸೇನಾ ಅಧಿ ಕಾರಿ ರಾಕೇಶ್‌ ಸಾವಂತ್‌ ಅವರು ವಿನಯ ಕುಲಕರ್ಣಿ ಅವರನ್ನು ತರಾಟೆಗೆ ತೆಗೆದುಕೊಂಡರು ಸೇನೆಯ ಸುಪರ್ದಿಯಲ್ಲಿರುವ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ವಿನಯ ಕುಲಕರ್ಣಿ ದರ್ಶನ ಪಡೆದುಕೊಂಡರು. ಜತೆಗೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹಾಗೂ ಬೆಂಬಲಿಗರು ಇದ್ದರು. ಈ ವೇಳೆ ಸ್ಥಳಕ್ಕೆ ಬಂದ ಸೇನಾ ಅಧಿಕಾರಿ ರಾಕೇಶ್‌ ಸಾವಂತ ಅವರು ವಿನಯ ಕುಲಕರ್ಣಿಯನ್ನು ತರಾಟೆಗೆ ತೆಗೆದುಕೊಂಡರು. “ದೇವಸ್ಥಾನಕ್ಕೆ ಬಂದಿದ್ದಾದರೂ ಏಕೆ. ವೀಕೆಂಡ್‌ ಕರ್ಫ್ಯೂ ಇರುವುದು ನಿಮಗೆ ಗೊತ್ತಿಲ್ಲವೇ’ ಎಂದು ತರಾಟೆಗೆ ತೆಗೆದುಕೊಂಡು ಹೊರಗೆ ಕಳುಹಿಸಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.