ಕೋವಿಡ್ ನಿಯಮ ಉಲ್ಲಂಘನೆ : ಹಸೆ ಮಣೆ ಏರಿದ ದಿನವೇ ಪೊಲೀಸ್ ಠಾಣೆಗೆ
Team Udayavani, Apr 24, 2021, 5:39 PM IST
ಸಂಕೇಶ್ವರ: ಕೋವಿಡ್ ನಿಯಮ ಪಾಲನೆ ಮಾಡದೆ ಅದ್ಧೂರಿ ಮದುವೆ ಆಯೋಜಿಸಿದ್ದ ವಧು-ವರ ಹಾಗೂ ಅವರ ಕುಟುಂಬಸ್ಥರ ಮತ್ತು ಮಂಗಲ ಕಾರ್ಯಾಲಯದ ಮಾಲೀಕರ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಶುಕ್ರವಾರ ನಡೆದಿದೆ.
ನಿಡಸೋಸಿ ರಸ್ತೆಯಲ್ಲಿನ ಮಿಲನ್ ಮಂಗಲ ಕಾರ್ಯಾಲಯದಲ್ಲಿ ಮದುವೆಗೆ ವಧು, ವರನ ಕುಟುಂಬಸ್ಥರು ಅದ್ಧೂರಿ ಆಯೋಜನೆ ಮಾಡಿಕೊಂಡಿದ್ದರು. ಸರ್ಕಾರಿ ಮಾರ್ಗಸೂಚಿ ಪಾಲನೆ ಮಾಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಪುರಸಭೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಹುಬ್ಬಳ್ಳಿ ಮೂಲದ ವರ ಕಾರ್ತಿಕ್ ಗಾಯಕವಾಡ್, ಸಂಕೇಶ್ವರ ಮೂಲದ ವಧು ಮೇಘ ದವಡತೆ ಹಾಗೂ ಕಲ್ಯಾಣ ಮಂಟಪದ ಮಾಲೀಕ ಝಾಕರೀಯಾ ಸೇರಿದಂತೆ ಒಟ್ಟು 7 ಜನರ ವಿರುದ್ಧ ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಸೆಮಣೆ ಏರಿದ ದಿನವೇ ವಧು-ವರರು ಠಾಣೆ ಮೆಟ್ಟಿಲು ಏರುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?