ಚೌತಿ-ಮೊಹರಂ ಶಾಂತಿಯಿಂದ ಆಚರಿಸಿ
Team Udayavani, Aug 31, 2019, 10:53 AM IST
ರಾಮದುರ್ಗ: ತಾಪಂ ಸಭಾ ಭವನದಲ್ಲಿ ಚೌತಿ ಹಾಗೂ ಮೊಹರಂ ನಿಮಿತ್ತ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಮಾತನಾಡಿದರು.
ರಾಮದುರ್ಗ: ಗಣೇಶ ಉತ್ಸವ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪನಾ ಕಮಿಟಿ ಪದಾಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಸುರಕ್ಷಿತವಾಗಿ ಹಬ್ಬ ಆಚರಣೆ ಮಾಡಲು ಸಹಕರಿಸಿದಲ್ಲಿ ಸಾರ್ವಜನಿಕ ಸ್ನೇಹಿಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡಲಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಹೇಳಿದರು.
ಪಟ್ಟಣದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಗಣೇಶ ಉತ್ಸವ ಹಾಗೂ ಮೊಹರಂ ಪ್ರಯುಕ್ತ ಏರ್ಪಡಿಸಿದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆರೆ ಹಾವಳಿಯಿಂದ ಸಂಕಷ್ಠದಲ್ಲಿರುವ ಎಲ್ಲರನ್ನು ಜೊತೆಗೆ ಕರೆದುಕೊಂಡು ಹಬ್ಬ ಆಚರಣೆ ಮಾಡಿ, ಪ್ರವಾಹ ಪೀಡಿತರಿಗೆ ಉತ್ಸವ ಕಮಿಟಿ ಸಹಾಯ ಮಾಡಲು ಮುಂದಾದಲ್ಲಿ ವಿಶೇಷವಾಗಿ ಹಬ್ಬ ಆಚರಿಸಿದಂತಾಗುತ್ತದೆ ಎಂದರು.
ಗಣೇಶ ಮಂಟಪ ಸ್ಥಾಪನೆ ಹಾಗೂ ವಿಸರ್ಜನೆಯ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕದ ಬಗೆಗೆ ಜಾಗೃತೆ ವಹಿಸಬೇಕು. ನಿಷ್ಕಾಳಜಿ ವಹಿಸಿ ಶಾರ್ಟ್ ಸರ್ಕ್ನೂಟ್ ಸಂಭವಿಸಿದಲ್ಲಿ ದೊಡ್ಡ ಅಪಾಯಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಹೆಸ್ಕಾಂ ಇಲಾಖೆಯ ಅಧಿಕೃತ ಪರವಾಣಿಗೆ ಪಡೆದು ವಿದ್ಯುತ್ ಸಂಪರ್ಕ ಪಡೆದುಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಬೇಕು. 50-60 ಡೆಸಿಬಲ್ಗಿಂದ ಅಧಿಕವಿರುವ ಸೌಂಡ್ಸ್ಗಳ ಬಳಕೆಯಿಂದ ವಯೋವೃದ್ಧರು ಹಾಗೂ ಚಿಕ್ಕ ಮಕ್ಕಳಿಗೆ ಹೃದಯ ಸಂಬಂಧಿತ ತೊಂದರೆಗೆ ಕಾರಣವಾಗಲಿದೆ. ಎಲ್ಲ ಕೋಮಿನ ಜನತೆಗೆ ಒಟ್ಟಿಗೆ ಪಾಲ್ಗೊಂಡು ಸೌಹಾರ್ಧತೆಯಿಂದ ಮೊಹರಂ ಹಾಗೂ ಗಣೇಶ ಉತ್ಸವ ಆಚರಿಸಬೇಕು ಎಂದು ಹೇಳಿದರು.
ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಹಬ್ಬದ ಆಚರಣೆ ಸಂದರ್ಭದಲ್ಲಿ ಆಚರಣೆ ಹಿನ್ನಲೆ ಅರಿತು ಆಚರಿಸಬೇಕು. ನಾವು ಮಾಡುವ ಯಾವುದೇ ಆಚರಣೆಗಳಿಂದ ಸಮಾಜದಲ್ಲಿರುವ ಮತ್ತೂಬ್ಬರಿಗೆ ತೊಂದರೆಯಾಗದಂತೆ ನಿಘಾ ವಹಿಸಬೇಕು ಸಲಹೆ ನೀಡಿದರು.
ಈ ವೇಳೆ ಗ್ರೇಡ-2 ತಹಶೀಲ್ದಾರ್ ಎಸ್.ಕೆ. ತಂಗೊಳಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಮಿಲಾನಟ್ಟಿ, ಡಿವೈಎಸ್ಪಿ ಬಿ.ಎಸ್ ಪಾಟೀಲ, ಸಿಪಿಐ ಲಖನ್ ಮಸಗುಪ್ಪಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಸ್. ಕರ್ಕಿ ಸೇರಿದಂತೆ ಇತರರಿದ್ದರು. ಶಿಕ್ಷಕ ಗಣೇಶ ಗೋಕಾವಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು