ಶಿಕ್ಷಣ ಪದ್ದತಿಯಲ್ಲಿ ಬದಲಾವಣೆ ಅಗತ್ಯ

ಶಿಕ್ಷಣದಿಂದ ಮಕ್ಕಳ ಭವಿಷ್ಯ ಭದ್ರ ; ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿ

Team Udayavani, Nov 23, 2022, 2:42 PM IST

12

ಮೂಡಲಗಿ: ಮಕ್ಕಳ ಭವಿಷ್ಯದಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಮೊದಲಿನ ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆಯನ್ನು ತರಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಸಬೇಕು ಎನ್ನುವ ಉದ್ದೇಶದಿಂದ ಪ್ರಾಯೋಗಿಕವಾಗಿ ಐದು ಸ್ಮಾರ್ಟ್‌ ಕ್ಲಾಸ್‌ಗಳನ್ನು ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಪಟ್ಟಣದ ಕೃಷ್ಣಪ್ಪ ಹ.ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕಾದ ಅನಿರ್ವಾಯತೆ ಇದೆ. ಶಿಕ್ಷಣದಿಂದ ಮಾತ್ರ ನಮ್ಮ ಮಕ್ಕಳ ಭವಿಷ್ಯದ ಬದುಕು ಭದ್ರಪಡಿಸಲು ಸಾಧ್ಯ ಎಂದರು.

ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಕೆ ಸವಾಲಾಗಿ ಪರಿಣಮಿಸಿದ್ದು, ಇಂತಹ ಸವಾಲನ್ನು ಸುಲಭವಾಗಿ ಎದುರಿಸಲು ಸ್ಮಾರ್ಟ್‌ ಕ್ಲಾಸ್‌ ಸಹಕಾರಿಯಾಗುತ್ತದೆ. ಆದರಿಂದ ರಾಜ್ಯಸಭಾ ಸದಸ್ಯರ ಅನುದಾನದಲ್ಲಿ ಮೂಡಲಗಿ ಶಿಕ್ಷಣ ವಲಯದ ಕಲ್ಲೋಳಿ, ತುಕ್ಕಾನಟ್ಟಿ, ರಾಜಾಪೂರ, ಮೂಡಲಗಿಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಗಳನ್ನು ಪ್ರಾಯೋಗಿಕವಾಗಿ ನೀಡಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಡಲ್ಲಿ ಮುಂದಿನ ದಿನಮಾನಗಳಲ್ಲಿ ಎಲ್ಲ ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್‌ಗಳನ್ನು ಪ್ರಾರಂಭ ಮಾಡುವಂತ ಯೋಜನೆಯನ್ನು ರೂಪಿಸಲಾಗದೆ ಎಂದರು.

ಕಲ್ಲೋಳಿ, ತುಕ್ಕಾನಟ್ಟಿ, ರಾಜಾಪೂರ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಡೆಸ್ಕ್ ಇಲ್ಲದೇ ಇರುವುದರಿಂದ ಶಾಲೆಗಳಿಗೆ ಈಗಾಗಲೇ ಒಂದು ಸಾವಿರ ಡೆಸ್ಕ್ಗಳನ್ನು ನೀಡಲಾಗಿದ್ದು, ಸರ್ಕಾರಿ ಶಾಲೆಗಳಿಗೆ ಸದ್ಯದರಲ್ಲೇ 40 ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದ್ದು, ನಮ್ಮ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಮೂಲಕ ಶಿಕ್ಷಣ ಕಲಿತರೇ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನವನ್ನು ಉದ್ದೇಶವಿದ್ದು, ವಿದ್ಯಾರ್ಥಿಗಳು ಇವುಗಳ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಂತರ ಮಕ್ಕಳೊಂದಿಗೆ ಮಾತನಾಡಿದ ಅವರು, ಮೊದಲಿನ ಶಿಕ್ಷಣದ ಪದ್ಧತಿಯಲ್ಲಿ ಆಧುನಿಕ ತಂತ್ರಜ್ಞಾನದಿಂದ ಮಕ್ಕಳ ಕಲಿಕೆಯಲ್ಲಿ ಆಗುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ತಹಶೀಲ್ದಾರ್‌ ಡಿ.ಜಿ.ಮಹಾತ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್‌ ಮಣ್ಣಿಕೇರಿ, ತಾಪಂ ಇಒ ಎಫ್‌. ಜಿ. ಚಿನ್ನನವರ, ಸಿಡಿಪಿ ಯಲ್ಲಪ್ಪ ಗದಾಡಿ, ಪುರಸಭೆ ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ಅಜೀಜ ಡಾಂಗೆ, ಪ್ರಕಾಶ ಮಾದರ, ಶಾಲೆಯ ಮುಖ್ಯ ಶಿಕ್ಷಕ ಎಂ.ಎಂ. ದಬಾಡಿ ಮತ್ತಿತರು ಇದ್ದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.