ಚಿಕ್ಕೋಡಿ: ಬಸದಿಯಿಂದ ನಾಪತ್ತೆಯಾದ ಜೈನ ಮುನಿ
Team Udayavani, Jul 7, 2023, 8:10 PM IST
ಚಿಕ್ಕೋಡಿ: ಜೈನ ಮುನಿಯೊಬ್ಬರು ಇದ್ದಕ್ಕಿದ್ದಂತೆ ಬಸದಿಯಿಂದ ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ನಡೆದಿದೆ.
ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದಾರೆ. ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದಿಂದ ಮುನಿಗಳು ನಾಪತ್ತೆಯಾಗಿದ್ದು, ಗುರುವಾರ ಬೆಳಗ್ಗೆ 8 ಗಂಟೆಯಿಂದ ಜೈನ ಮುನಿ ನಾಪತ್ತೆಯಾಗಿದ್ದರೆ ಎನ್ನಲಾಗಿದ್ದು, ಬುಧವಾರ ರಾತ್ರಿ 10 ಗಂಟೆಯವರೆಗೆ ಆಶ್ರಮದ ತಮ್ಮ ಕೋಣೆಯಲ್ಲಿಯೇ ಇದ್ದರು ಎಂದು ಭಕ್ತರು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಭಕ್ತರು ಆಶ್ರಮಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಕಾಮಕುಮಾರ ನಂದಿ ಮಹಾರಾಜರು ಕಳೆದ 15 ವರ್ಷಗಳಿಂದ ಹಿರೇಕೋಡಿಯ ಜೈನ ಆಶ್ರಮ ವಾಸವಾಗಿದ್ದರು.
ಆಶ್ರಮದ ಜೈನಮುನಿಗಳು ವಾಸವಿದ್ದ ಕೋಣೆಯಲ್ಲಿಯೇ ಅವರು ಬಳಕೆ ಮಾಡುತ್ತಿದ್ದ ಪಿಂಚಿ, ಕಮಂಡಲು ಹಾಗೂ ಮೊಬೈಲ್ ಪತ್ತೆಯಾಗಿದೆ. ಕಳೆದ 15 ವರ್ಷದಿಂದ ಇದೇ ಆಶ್ರಮದಲ್ಲಿ ಇದ್ದರು ಎಂದು ಮಾಹಿತಿ ಲಭ್ಯವಾಗಿದೆ. ಜೈನ ಮುನಿಗಳು ಒಮ್ಮಿಂದ ಒಮ್ಮೆ ಕಾಣೆಯಾಗಿರುವದು ಶ್ರಾವಕ ಶ್ರಾವಕಿಯಲ್ಲಿ ಆತಂಕ ಮೂಡಿದೆ.ಈ ಕುರಿತಾಗಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್