ಜಾನುವಾರು ಬೇನೆಗೆ ರೈತ ತತ್ತರ


Team Udayavani, Jan 12, 2019, 11:31 AM IST

12-january-22.jpg

ಚಿಕ್ಕೋಡಿ: ಜಾನುವಾರುಗಳಿಗೆ ವ್ಯಾಪಕವಾಗಿ ಹರಡಿರುವ ಕಾಲು-ಬಾಯಿ ಬೇನೆ ಮಹಾಮಾರಿ ರೋಗಕ್ಕೆ ತಾಲೂಕಿನ ಮುಗಳಿ ಗ್ರಾಮದ ರೈತರು ತತ್ತರಿಸಿ ಹೋಗಿದ್ದು, ಗ್ರಾಮದ ಹತ್ತಾರು ಕುಟುಂಬಗಳ ನೂರಕ್ಕೂ ಹೆಚ್ಚಿನ ರಾಸುಗಳು ರೋಗಕ್ಕೆ ಬಲಿಯಾಗಿವೆ.

ಕಳೆದ ಒಂದು ತಿಂಗಳಿಂದ ರೋಗ ಗಡಿ ಜಿಲ್ಲೆಗೆ ಹರಡಿದ್ದು, ಮುಗಳಿ ಗ್ರಾಮವೊಂದರಲ್ಲಿಯೇ ನೂರಕ್ಕೂ ಹೆಚ್ಚಿನ ಜಾನುವಾರಗಳು ರೋಗಕ್ಕೆ ತುತ್ತಾಗಿದ್ದು, ಸರ್ಕಾರವೇ ದನಕರುಗಳ ಸಾವಿಗೆ ಕಾರಣವಾಗಿದೆಂದು ಗ್ರಾಮಸ್ಥರು ಪಶು ಸಂಗೋಪನಾ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ಇಲ್ಲದೇ ಇರುವುದಕ್ಕೆ ಇಷ್ಟೊಂದು ಜಾನುವಾರಗಳು ಸಾವಿನ ಕದ ತಟ್ಟಿದ್ದು, ಇನ್ನೂ ಹಲವು ದನಕರುಗಳು ಸೂಕ್ತ ಚಿಕಿತ್ಸೆ ಇಲ್ಲದೇ ಒದ್ದಾಡುತ್ತಿವೆ ಎಂದು ಗ್ರಾಮದ ರೈತರು ದೂರಿದರು.

ತೀವ್ರ ಬರಗಾಲ ಪೀಡಿತ ಪ್ರದೇಶವಾಗಿರುವ ಗ್ರಾಮದಲ್ಲಿ ಕಳೆದ ಐದಾರು ವರ್ಷಗಳಿಂದ ಸಮರ್ಪಕ ಮಳೆ ಆಗಿಲ್ಲ, ಇದರಿಂದ ಬರಗಾಲಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಹಾಮಾರಿ ಕಾಲು-ಬಾಯಿ ಬೇನೆ ವಕ್ಕರಿಸಿ ರೈತರ ಹೊಟ್ಟೆಗೆ ಬರೆ ಎಳೆದಂತಾಗಿದೆ. ಚಿಕ್ಕೋಡಿ ತಾಲೂಕಿನಲ್ಲಿಯೇ ಅತಿ ಹೆಚ್ಚಾಗಿ ಹೈನುಗಾರಿಕೆ ಹೊಂದಿರುವ ಮುಗಳಿ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕಿಂತ ಅಧಿಕ ಜಾನುವಾರುಗಳು ಇದ್ದು, ಇಲ್ಲಿ ಪಶು ಆಸ್ಪತ್ರೆ ಇದ್ದರೆ ರೋಗ ಗುಣಪಡಿಸಬಹುದಾಗಿತ್ತು. ಆದರೆ ಸರ್ಕಾರ ಮಾತ್ರ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಮೀನಮೇಷ ಮಾಡುತ್ತಿದೆ ಎಂದು ರೈತ ರಾಜು ಹರಗನ್ನವರ ಆರೋಪಿಸಿದರು.

ರೋಗದ ಲಕ್ಷಣ ಕಂಡ ತಕ್ಷಣಾ ರೋಗಗ್ರಸ್ತ ಪ್ರಾಣಿಯನ್ನು ಇತರ ಜಾನುವಾರುಗಳಿಂದ ಬೇರ್ಪಡಿಸಬೇಕು. ಅಲ್ಲದೇ ನಿತ್ಯ ಕೊಟ್ಟಿಗೆಯನ್ನು ಶುಚಿಗೊಳಿಸಿ ಕಟ್ಟುವುದರಿಂದ ಇತರ ಪ್ರಾಣಿಗಳಿಗೆ ಕಾಯಿಲೆ ಹರಡದಂತೆ ತಡೆಯಬಹುದಾಗಿದೆ. ರೋಗಗ್ರಸ್ತ ಪ್ರಾಣಿಯಿಂದ ಈ ಅಂಟು ರೋಗವು ಬೇಗನೆ ಇತರೆಡೆಗೆ ವ್ಯಾಪಿಸುವುದರಿಂದ ಈ ರಾಸುಗಳನ್ನು ಮಾರಾಟ ಮಾಡಬಾರದು. ಕಾಯಿಲೆಗೆ ತುತ್ತಾದ ಜಾನುವಾರಿನ ಕಾಲು ಬಾಯಿ ಹುಣ್ಣನ್ನು ಸ್ವಲ್ಪ ಅಡುಗೆ ಸೋಡ ದ್ರಾವಣದಿಂದ ಶುಚಿಗೊಳಿಸುವುದು. ಮೃದು ಆಹಾರ ನೀಡುವುದು. ವಿಟಮಿನ್‌ ಲಸಿಕೆ ಕೊಡಿಸುವ ಮೂಲಕ ಆರೈಕೆ ಮಾಡಬೇಕು ಎನ್ನುತ್ತಾರೆ ಪಶು ವೈದ್ಯರು.

ರೋಗದ ಲಕ್ಷಣ
ಕಾಲು ಮತ್ತು ಬಾಯಿ ಜ್ವರಕ್ಕೆ ತುತ್ತಾದ ಜಾನುವಾರಗಳಲ್ಲಿ ಅತಿಯಾದ ಜ್ವರ, ಬಾಯಿಯಲ್ಲಿ ನೀರ್ಗುಳ್ಳೆ, ಜೊಲ್ಲು ಸುರಿಸುವುದು. ಕಾಲು ಕುಂಟುವುದು ಹಾಗೂ ಕೆಚ್ಚಲಿನ ಮೇಲೆ ಗುಳ್ಳೆಗಳು ಮೂಡುವುದು ಸೇರಿದಂತೆ ಹಲವು ಲಕ್ಷಣಗಳು ಕಂಡು ಬರುತ್ತವೆ.

ಪ್ರತಿ ವರ್ಷ ಜಾನುವಾರುಗಳಿಗೆ ಈ ರೋಗ ಕಾಣಿಸಿಕೊಳ್ಳುತ್ತದೆ. ರೋಗ ಬರದಂತೆ ಪಶುಸಂಗೋಪನಾ ಇಲಾಖೆ ಪ್ರತಿ ಗ್ರಾಮದಲ್ಲಿ ಜಾಗೃತಿ ಮೂಡಿಸಿ ಲಸಿಕೆ ಕೊಡಿಸಿದೆ. ರೋಗಕ್ಕೆ ತುತ್ತಾಗಿರುವ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಚಳಿ ಹೆಚ್ಚಾಗಿ ಇರುವುದರಿಂದ ಶೇ 30ರಷ್ಟು ಕರುಗಳ ಸಾವಿನ ಪ್ರಮಾಣ ಹೆಚ್ಚಿತ್ತದೆ. ಮುಗಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
•ಡಾ. ಸದಾಶಿವ ಉಪ್ಪಾರ,
ತಾಲೂಕು ಆರೋಗ್ಯಾಧಿಕಾರಿ,
ಪಶು ಸಂಗೋಪನಾ ಇಲಾಖೆ ಚಿಕ್ಕೋಡಿ

ಜಾನುವಾರುಗಳನ್ನೇ ನಂಬಿಕೊಂಡಿರುವ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಕಾಲುಬಾಯಿ ಬೇನೆ ರೋಗಕ್ಕೆ ನಮ್ಮ ಜಾನುವಾರುಗಳು ಮೃತಪಟ್ಟಿವೆ. ಸರ್ಕಾರ ಗ್ರಾಮದಲ್ಲಿ ಪಶು ಆಸ್ಪತ್ರೆ ಆರಂಭಿಸಿ ವೈದ್ಯರ ನೇಮಕ ಮಾಡಬೇಕು.
•ಗಣಪತಿ ಬಡಿಗೇರ,
ಮುಗಳಿ ಗ್ರಾಮದ ರೈತ.
ಮಹಾದೇವ ಪೂಜೇರಿ

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.