ಇನ್ನೂ ಪೂರ್ತಿ ಸಿಕ್ಕಿಲ್ಲ ಪ್ರವಾಹ ಪರಿಹಾರ

ಕೃಷಾ-ಉಪನದಿಗಳ ಈ ಹಿಂದಿನ ಪ್ರವಾಹಕ್ಕೆ ನಲುಗಿದ್ದ ಜನರು

Team Udayavani, Jul 11, 2022, 2:29 PM IST

8

ಚಿಕ್ಕೋಡಿ: ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ. ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆ, ಬ್ರಿಡ್ಜ್ಗಳ ಕಾಮಗಾರಿ ಮುಕ್ತಾಯಗೊಂಡಿವೆ. ಆದರೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಸಿಕ್ಕಿಲ್ಲ. ಇದರಿಂದ ನದಿ ತೀರದ ಜನ ಸಂಕಷ್ಟ ಪಡುವಂತಾಗಿದೆ.

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬಂದು ಪ್ರವಾಹ ಎದುರಾಗಿತ್ತು. ಇದರಿಂದ ಚಿಕ್ಕೋಡಿ ತಾಲೂಕಿನ 11 ಗ್ರಾಮಗಳು ನಡುಗಡ್ಡೆಯಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ಕಳೆದ ವರ್ಷ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಆದರೆ ಈಗ ಮತ್ತೆ ಮಳೆಗಾಲ ಆರಂಭವಾಗಿದೆ. ಪ್ರವಾಹ ಉಂಟಾಗುವ ಸಂಭವ ಇದ್ದರೂ ಸಹ ಕಳೆದ ವರ್ಷದ ಪರಿಹಾರ ಸಿಗದೇ ಇರುವುದು ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ದೊಡ್ಡ ಪ್ರಮಾಣದ ಪ್ರವಾಹದಿಂದ ಚೇತರಿಸಿಕೊಳ್ಳುವ ಮುನ್ನವೇ 2020ರಲ್ಲಿ ಮಹಾಪೂರ ನದಿ ತೀರದ ಜನರನ್ನು ಮತ್ತೂಮ್ಮೆ ಸಂಕಷ್ಟಕ್ಕೆ ಈಡು ಮಾಡಿತ್ತು. ಸರ್ಕಾರ ಸಮರ್ಪಕ ಸರ್ವೇ ನಡೆದಿದೆ ಎಂದು ಹೇಳುತ್ತಿದ್ದರೂ ಕೂಡಾ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಸಿಗದೇ ಇರುವುದು ದುರದೃಷ್ಟಕರವಾಗಿದೆ. ಮನೆಗಳಿಗೆ ಹಾನಿಯಾದ ಸಂತ್ರಸ್ತರಿಗೆ ಮೊದಲ ಕಂತಾಗಿ 95 ಸಾವಿರ ರೂ. ಹೊರತು ಪಡಿಸಿ ಬಹುತೇಕ ಜನರಿಗೆ ಉಳಿದ ಪರಿಹಾರ ಮರೀಚಿಕೆಯಾಗಿದೆ.

ಚಿಕ್ಕೋಡಿ ತಾಲೂಕಿನ ಜನವಾಡ, ಶಮನೇವಾಡಿ, ಸದಲಗಾ, ಯಕ್ಸಂಬಾ, ಮಲಿಕವಾಡ, ಕಲ್ಲೋಳ, ಯಡೂರ, ಚೆಂದೂರ, ಮಾಂಜರಿ, ಇಂಗಳಿ ಮತ್ತು ಅಂಕಲಿ ಗ್ರಾಮಗಳು ಕೃಷ್ಣಾ ಮತ್ತು ದೂಧಗಂಗಾ ನದಿ ಪ್ರವಾಹಕ್ಕೆ ತುತ್ತಾಗುತ್ತವೆ. ತಾಲೂಕು ಆಡಳಿತದ ಮಾಹಿತಿ ಪ್ರಕಾರ ಚಿಕ್ಕೋಡಿ ತಾಲೂಕಿನ 11 ಗ್ರಾಮಗಳಲ್ಲಿ 4319 ಮನೆಗಳಿಗೆ ಹಾನಿ ಸಂಭವಿಸಿತ್ತು.

ಅದರಲ್ಲಿ ಈಗಾಗಲೇ 3800 ಸಂತ್ರಸ್ತರ ಮನೆಗಳಿಗೆ 95 ಸಾವಿರ ರೂ. ದಂತೆ ಮೊದಲ ಕಂತು ಪರಿಹಾರ ಹಸ್ತಾಂತರಿಸಲಾಗಿದೆ. ತಾಂತ್ರಿಕ ತೊಂದರೆಯಿಂದ ಜಿಲ್ಲಾ ನೋಡಲ್‌ ಅಧಿಕಾರಿಗಳು ಉಳಿದ 519 ಮನೆಗಳಿಗೆ ಪರಿಹಾರ ತಡೆಹಿಡಿದಿದ್ದಾರೆ. ಸಮಸ್ಯೆ ಪರಿಹಾರದ ನಂತರ ಅವರಿಗೆ ಪರಿಹಾರ ದೊರಕಲಿದೆ.

ತಾತ್ಕಾಲಿಕ ಪರಿಹಾರ ವಿತರಣೆ: ಭೀಕರ ಪ್ರವಾಹದಿಂದ ಗೃಹೋಪಯೋಗಿ ಸಾಮಗ್ರಿಗಳನ್ನು ಕಳೆದುಕೊಂಡ ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳ ಜನರಿಗೆ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ಪರಿಹಾರ ವಿತರಿಸಲಾಗಿದೆ.

ಹಂತ ಹಂತವಾಗಿ ಮನೆ ಪರಿಹಾರ: ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರ ಮನೆಗಳನ್ನು ಸರ್ಕಾರ ಸರ್ವೇ ಮಾಡಿ ವರ್ಕ್‌ ಆರ್ಡ್‌ರ್‌ ನೀಡಿದೆ. ಮೊದಲ ಕಂತಾಗಿ 95 ಸಾವಿರ ರೂ. ಪರಿಹಾರ ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗಿದೆ. ಉಳಿದ ಪರಿಹಾರ ಹಂತ ಹಂತವಾಗಿ ಸಂತ್ರಸ್ತರ ಕೈ ಸೇರಲಿದೆ.

ನದಿ ತೀರದ ರಸ್ತೆ-ಬ್ರಿಡ್ಜ್ ಕಾಮಗಾರಿ ಮುಕ್ತಾಯ: ಯಡೂರವಾಡಿ ಗ್ರಾಮದ ಡೋಣೆ ತೋಟದ ಜನರು ಬೋಟ್‌ ಸಂಚಾರ ಮಾಡುವಂತಾಗಿತ್ತು. ಸರ್ಕಾರ ಎಚ್ಚೆತ್ತುಕೊಂಡು ಡೋಣೆ ತೋಟಕ್ಕೆ ತೆರಳುವ ಜನರಿಗೆ ಅನುಕೂಲವಾಗಲು ಬ್ರಿಡ್ಜ್ ನಿರ್ಮಿಸಿ ಅನುಕೂಲ ಕಲ್ಪಿಸಿದೆ. ಹದಗೆಟ್ಟ ರಸ್ತೆಗಳ ದುರಸ್ತಿಯಾಗಿದೆ.

‌ಕಳೆದ ವರ್ಷ ಉಂಟಾದ ಭೀಕರ ಪ್ರವಾದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ವೇ ಮಾಡಿ ಮೊದಲ ಕಂತಿನ ಹಣ ಜಮೆ ಮಾಡಲಾಗಿದೆ. ಉಳಿದ ಹಣ ಜಿಪಿಎಸ್‌ ಆದ ಮೇಲೆ ಹಂತ ಹಂತವಾಗಿ ಜಮೆ ಆಗುತ್ತದೆ. ಕೆಲವೊಂದು ಗ್ರಾಮದಲ್ಲಿ ತಾಂತ್ರಿಕ ತೊಂದರೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಣೆಯಾಗಿಲ್ಲ, ಆ ಸಮಸ್ಯೆ ಸಹ ಬಗೆಹರಿಸುವ ಪ್ರಯತ್ನ ಮಾಡಲಾಗುತ್ತಿದೆ.  –ಸಂತೋಷ ಕಾಮಗೌಡ, ಉಪವಿಭಾಗಾಧಿಕಾರಿ, ಚಿಕ್ಕೋಡಿ.

ಕಳೆದ 2019 ಮತ್ತು 2021ರ ಪ್ರವಾಹ ನಮಗೆ ಸಾಕಷ್ಟು ತೊಂದರೆ ಕೊಟ್ಟಿವೆ. ಬದುಕು ಕಟ್ಟಿಕೊಳ್ಳುವ ತವಕದಲ್ಲಿಯೇ ಪ್ರವಾಹ ನಮ್ಮ ಹೊಟ್ಟೆ ಮೇಲೆ ಬರೆ ಎಳೆದಿದೆ. ಸಂಪೂರ್ಣ ಮನೆ ಬಿದ್ದು ಹೋಗಿದೆ. ಸರ್ಕಾರ ಸೂಕ್ತ ಪರಿಹಾರ ಕೊಟ್ಟರೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಮೊದಲ ಕಂತಾಗಿ 95 ಸಾವಿರ ರೂ. ಹೊರತುಪಡಿಸಿ ಉಳಿದ ಪರಿಹಾರ ಬಂದಿಲ್ಲ. ಸರ್ಕಾರ ಗಮನ ಹರಿಸಬೇಕು. – ಸಿದ್ಧಾರ್ಥ ಗಾಯಗೋಳ, ನದಿ ತೀರದ ಗ್ರಾಮಸ್ಥ.  

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.