ಮೂರು ನೈರ್ಮಲೀಕರಣ ಘಟಕ ಸ್ಥಾಪನೆ
Team Udayavani, Apr 10, 2020, 12:31 PM IST
ಚಿಕ್ಕೋಡಿ: ನಗರದಲ್ಲಿ ಕೊರೊನಾ ನೈರ್ಮಲೀಕರಣ ಘಟಕಗಳಿಗೆ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಉದ್ಘಾಟಿಸಿದರು.
ಚಿಕ್ಕೋಡಿ: ನಗರದ ಮೂರು ಕಡೆಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟುವ ನೈರ್ಮಲೀಕರಣ ಘಟಕಗಳು ಸ್ಥಾಪನೆಯಾಗಿದ್ದು, ಪೊಲೀಸ್, ಪೌರ ಕಾರ್ಮಿಕರು ಹಾಗೂ ವೈದ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಹೇಳಿದರು.
ನಗರದಲ್ಲಿ ಜೊಲ್ಲೆ ಉದ್ಯೋಗ ಸಮೂಹ, ಪುರಸಭೆ ಚಿಕ್ಕೋಡಿ ಹಾಗೂ ಕೇಶವ ಸ್ಮೃತಿ ಟ್ರಸ್ಟ್ ಚಿಕ್ಕೋಡಿ ಆಶ್ರಯದಲ್ಲಿ ನಿರ್ಮಿಸಿದ ಕೊರೊನಾ ಹರಡುವಿಕೆ ತಡೆಗಟ್ಟುವ ನೈರ್ಮಲೀಕರಣ ಮೂರು ಘಟಕಗಳ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಕೊರೊನಾ ತಡೆಗಟ್ಟಲು ಇಂತಹ ನೈರ್ಮಲೀಕರಣ ಘಟಕಗಳ ಪಾತ್ರ ಮುಖ್ಯವಾಗಿವೆ ಎಂದರು. ಬಸವ ಪ್ರಸಾದ ಜೊಲ್ಲೆ ಮಾತನಾಡಿ, ದೇಶಾದ್ಯಂತ ಮತ್ತು ರಾಜ್ಯದಲ್ಲಿ ಕೂಡ ಕೊರೊನಾ ವೈರಸ್ ಮಹಾಮಾರಿ ಹಾವಳಿ ಹೆಚ್ಚಾಗಿದ್ದರಿಂದ ಎಲ್ಲರಿಗೂ ಸ್ಯಾನಿಟೈಸರ್ ಮುಖ್ಯ. ಪೊಲೀಸರು, ವೈದ್ಯರು ಹಾಗೂ ಪೌರ ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ. ಅಂಥವರು ಈ ಘಟಕಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.
ಧುರೀಣ ಜಗದೀಶ ಕವಟಗಿಮಠ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಳಗಾವಿ ವಿಭಾಗದ ಸಂಜಯ ಅಡಕೆ, ಮನೋಜ ನಾಯಿಕ, ವಿಠ್ಠಲ ಶಿಂಧೆ, ಸಿಎಂಒ ಸಂತೋಷ ಕೊಣ್ಣೂರೆ, ಡಾ| ಸುಂದರ ರೋಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ