ನೆರೆ ಇಳಿದ ಮೇಲೆ.. ಚಿಕ್ಕೋಡಿ ತಾಲೂಕಿನಲ್ಲಿ ಬದುಕು ಬರ್ಬಾದ್‌  


Team Udayavani, Jul 31, 2021, 5:54 PM IST

trr

ವರದಿ : ಮಹಾದೇವ ಪೂಜೇರಿ

ಚಿಕ್ಕೋಡಿ: ಕಳೆದ 2019ರ ಭೀಕರ ಪ್ರವಾಹ ಮತ್ತು ಕೊರೊನಾದ ಎರಡು ಲಾಕಡೌನ್‌ ನೋವು ಮಾಸುವ ಮುನ್ನವೇ ಮತ್ತೆ ಪ್ರಸಕ್ತ ವರ್ಷದಲ್ಲಿ ಪ್ರವಾಹದಿಂದ ಮನೀ..ಬೆಳಿ ಹಾಳಾಗಿ ಹೋಯಿತು. ಪ್ರವಾಹದಿಂದ ನಮ್ಮ ಮಗ್ಗಲು ಮುರಿದು ಹೋಗಿದೆ. ಕೃಷ್ಣಾ ನದಿ ಭೀಕರ ಪ್ರವಾಹದಲ್ಲಿ ನಮ್ಮ ಬದುಕು ಕೊಚ್ಚಿ ಹೋಗಿದೆ. ಈಗ ಪ್ರವಾಹ ಕಡಿಮೆಯಾದ ಮೇಲೆ ಗ್ರಾಮಸ್ಥರ ನೋವಿನ ನುಡಿಗಳಿವು.

ಹೌದು…ಕೃಷ್ಣಾ ನದಿ ಒಡಲಿನ ಚಿಕ್ಕೋಡಿ ತಾಲೂಕಿನ ಯಡೂರ, ಚೆಂದೂರ, ಮಾಂಜರಿ, ಅಂಕಲಿ ಗ್ರಾಮಗಳು ಪ್ರವಾಹಕ್ಕೆ ಸಿಕ್ಕು ನಲುಗಿ ಹೋಗಿವೆ. ಕಳೆದ ಒಂದು ವಾರದ ಹಿಂದೆ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆ ಮತ್ತು ಕೊಯ್ನಾ ಹಾಗೂ ವಿವಿಧ ಜಲಾಶಯಗಳಿಂದ ಹರಿದು ಬಂದಿರುವ ಅಪಾರ ಪ್ರಮಾಣದ ನೀರಿನಿಂದ ಕೃಷ್ಣಾ ನದಿಯು ತೀರದ ಗ್ರಾಮಗಳಿಗೆ ನುಗ್ಗಿದೆ. ಇದರಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಕಳೆದುಕೊಂಡ ನಿರಾಶ್ರಿತರು ಮರಳಿ ಸ್ವಗ್ರಾಮಗಳಿಗೆ ತೆರಳಿ ಪ್ರವಾಹದಿಂದ ಉಂಟಾದ ಹಾನಿ ಕಂಡು ಅತೀ ನೋವಿನಿಂದ ಹೇಳಿದ ಮಾತುಗಳು ಹೃದಯಕ್ಕೆ ತಟ್ಟಿದಂತಿದ್ದವು.

ಪ್ರತಿ ವರ್ಷ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಆಗುತ್ತದೆ. ನದಿಗಳು ಅಪಾಯ ಮಟ್ಟ ಮೀರಿ ಹರಿದು ನಂತರ ಕಡಿಮೆ ಆಗುತ್ತದೆ ಅಂತ ಅನಕೊಂಡಿದ್ದೇವು. ಆದರೆ ನಮ್ಮ ಬದುಕಿಗೆ ದೇವರು ತುಂಬಾ ಮೋಸ ಮಾಡಿದ್ದಾನೆ. ಕಳೆದ 2005 ಮತ್ತು 2006, 2019 ಮತ್ತು ಈ ವರ್ಷದ ಪ್ರವಾಹಕ್ಕೆ ನಮ್ಮ ಬದುಕು ಮೂರಾಬಟ್ಟೆಯಾಗಿ ಹೋಯಿತು. ಎರಡು ವರ್ಷದ ಹಿಂದೆ ಆದ ಹಾನಿ ಇಂದಿನವರೆಗೂ ಮೆರೆಯಲಿಕ್ಕೆ ಆಗಿಲ್ಲ. ಆದರೆ ಈ ರೀತಿ ಪ್ರವಾಹ ಬಂದು ನಮ್ಮ ಹೊಟ್ಟೆ ಮೇಲೆ ಕಲ್ಲು ಹಾಕುತ್ತಿದ್ದರೆ ನಾವು ಬದುಕು ಕಟ್ಟಿಕೊಳ್ಳುವುದಾದರೂ ಹೇಗೆ ಎಂದು ಪ್ರವಾಹ ಸಂತ್ರಸ್ತ ಡಿ.ಕೆ.ಉಪ್ಪಾರ ಬಹಳ ನೋವಿನಿಂದ ಪ್ರಶ್ನಿಸಿದರು.

ಕೃಷ್ಣಾ ನದಿ ದಡದ ಗ್ರಾಮಗಳು ಪ್ರವಾಹದಲ್ಲಿ ಸಂಪೂರ್ಣ ಮುಳುಗಡೆಗೊಂಡಿವೆ. ಕೆಲ ಮನೆಗಳು ಧರೆಗೆ ಉರುಳಿದರೆ ಕೆಲವು ಮನೆಗಳಿಗೆ ಹಾನಿಯಾಗಿದೆ. ಮನೆಗಳಲ್ಲಿ ನೀರು ಹೋಗಿ ಮನೆ ತುಂಭಾ ಕೆಸರು, ರಾಡಿ ಆವರಿಸಿಕೊಂಡಿದೆ. ಮನೆಗಳಲ್ಲಿರುವ ದಿನಸಿ ವಸ್ತುಗಳು ನೀರಲ್ಲಿ ತೇಲಾಡುತ್ತಿವೆ. ಕಾಳು ಕಡಿಗಳು ಮೊಳಕೆ ಒಡೆದಿವೆ. ಬಟ್ಟೆ, ಬರೆಗಳು ಗಬ್ಬು ವಾಸನೆಯಿಂದ ಕೂಡಿವೆ. ಗ್ರಾಮದ ರಸ್ತೆಗಳೆಲ್ಲ ಹಾಳಾಗಿವೆ, ಗಟಾರ ಕಿತ್ತು ಹೋಗಿವೆ. ಗ್ರಾಮದಲ್ಲೆಲ್ಲ ಗಬ್ಬು ವಾಸನೆ ಬರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕೂಡ ಸಂತ್ರಸ್ತರು ಮನೆಗೆ ಮರಳಿ ಮನೆಗಳನ್ನು ಸ್ವತ್ಛ ಮಾಡುವಲ್ಲಿ ನಿರತರಾಗಿದ್ದಾರೆ. ಮತ್ತೂಮ್ಮೆ ಹೊಸ ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿರುವ ದೃಶ್ಯ ಹೃದಯ ಕಲಕುವಂತಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.