ಚಿಕ್ಕೋಡಿ-ನಿಪ್ಪಾಣಿ ಗಡಿಯಲ್ಲಿ ಭದ್ರತೆ

ಲಾಕ್‌ಡೌನ್‌ ಉಲ್ಲಂಘಿಸಿದ 210 ಬೈಕ್‌ ವಶ | ಗಡಿ ಭಾಗದ ರಸ್ತೆ ಮಾರ್ಗ ಸಂಪೂರ್ಣ ಬಂದ್‌

Team Udayavani, Apr 13, 2020, 1:41 PM IST

13-April-16

ಚಿಕ್ಕೋಡಿ: ಲಾಕ್‌ಡೌನ್‌ ಉಲ್ಲಂಘಿಸಿದವರರಿಂದ ವಶಪಡಿಸಿಕೊಂಡ ಬೈಕ್‌ಗಳು

ಚಿಕ್ಕೋಡಿ: ಶೈಕ್ಷಣಿಕ ಚಿಕ್ಕೋಡಿ ಜಿಲ್ಲೆ ವ್ಯಾಪ್ತಿಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಚಿಕ್ಕೋಡಿ ಮತ್ತು ನಿಪ್ಪಾಣಿ ಗಡಿ ಭಾಗದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಅನಾವಶ್ಯಕ ಓಡಾಡುವ ಪ್ರಯಾಣಿಕರ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡು ಜನರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ನಿಯೋಜಿತ ಚಿಕ್ಕೋಡಿ ಜಿಲ್ಲೆ ನೆರೆಯ ಮಹಾರಾಷ್ಟ್ರದ ಗಡಿ ಭಾಗಕ್ಕೆ ಹೊಂದಿಕೊಂಡಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರಿಂದ ಮಹಾರಾಷ್ಟ್ರದಿಂದ ಯಾರು ರಾಜ್ಯಕ್ಕೆ ಬರಬಾರದು ಮತ್ತು ಇಲ್ಲಿಂದ ಯಾರು ಮಹಾರಾಷ್ಟ್ರಕ್ಕೆ ತೆರಳದಂತೆ ರಾಷ್ಟ್ರೀಯ ಹೆದ್ದಾರಿ-4ರ ಕೊಗನ್ನೊಳ್ಳಿ ಟೋಲ್‌ ನಾಕಾ ಬಳಿ, ನಿಪ್ಪಾಣಿ ಹೊರವಲಯದ ದೇವಚೆಂದ ಕಾಲೇಜ ಬಳಿ, ರಾಧಾನಗರಿ ರಸ್ತೆ ಹಾಗೂ ಇಚಲಕರಂಜಿ ಚಿಕ್ಕೋಡಿ ರಸ್ತೆಯ ಬೋರಗಾಂವ ಬಳಿ ಸಂಪೂರ್ಣ ಬಂದ್‌ ಮಾಡಲಾಗಿದೆ.

ಇತ್ತ ಸಾಂಗ್ಲಿ-ಮಿರಜ್‌ ಕಡೆಯಿಂದ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಸಾಂಗ್ಲಿ-ಬಾಗಲಕೋಟೆ ರಸ್ತೆಯನ್ನು ಕಾಗವಾಡ ಚೆಕ್‌ಪೋಸ್ಟ್‌ ಬಳಿ ಬಂದ್‌ ಮಾಡಲಾಗಿದೆ. ದಿನಸಿ ಮಾರಾಟಗಾರರು ಬೆಳಗ್ಗೆ ಅಥವಾ ಸಂಜೆ ಒಂದು ಬಾರಿ ಜನರ ಮನೆ ಬಾಗಿಲಿಗೆ ಹೋಗಿ ಮಾರಾಟ ಮಾಡಿಕೊಂಡು ಮನೆಯಲ್ಲಿ ಇರಬೇಕೆಂದು ಪೊಲೀಸರು ಸೂಚನೆ ನೀಡುತ್ತಿದ್ದಾರೆ.

210 ಬೈಕ್‌ ವಶ: ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಬೈಕ್‌ಗಳ ಮೇಲೆ ಸಂಚರಿಸುತ್ತಿರುವ ಪುಂಡ ಪೋಕರಿಗಳ ಬೈಕ್‌ ಗಳನ್ನು ಚಿಕ್ಕೋಡಿ ಹಾಗೂ ನಿಪ್ಪಾಣಿ ಪೊಲೀಸರು ಜಪ್ತಿ ಮಾಡಿದ್ದಾರೆ. ಕೆಲ ಯುವಕರು ಅನಾವಶ್ಯಕ ಬೈಕ್‌ಗಳಲ್ಲಿ ತಿರುಗುತ್ತಿದ್ದಾರೆ. ಇದನ್ನು ತಡೆಯಲು ಚಿಕ್ಕೋಡಿ ಉಪವಿಭಾಗ ಮಟ್ಟದಲ್ಲಿ ಸುಮಾರು 210 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿ ವಾಹನ ತಪಾಸಣೆ: ಚಿಕ್ಕೋಡಿ ಗಡಿ ಭಾಗದಲ್ಲಿ ಕೆಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರತಿ ಹಳ್ಳಿಯಿಂದ ನಗರ ಪ್ರದೇಶ ವ್ಯಾಪ್ತಿಗೆ ಬರುವ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಅದರಲ್ಲಿಯೂ ಚಿಕ್ಕೋಡಿ ಹಾಲಟ್ಟಿ ಬಳಿ, ಅಂಕಲಿ ಕೂಟ ಬಳಿ, ಯಕ್ಸಂಬಾ ತೆಗಡಿತೆಕ್ಕಿ ಬಳಿ, ಮಹಾವೀರ ನಗರ ಬಳಿ ಪೊಲೀಸರು ಹದ್ದಿಕಣ್ಣು ಇಟ್ಟಿದ್ದಾರೆ. ಪ್ರತಿ ವಾಹನ ತಪಾಸಣೆ ಮಾಡುತ್ತಿದ್ದಾರೆ.

ಪಾಸ್‌ ಇದ್ದವರಿಗೆ ಮಾತ್ರ ಪ್ರವೇಶ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅನಾವಶ್ಯಕ ಜನರು ಓಡಾಡದಂತೆ ಬ್ರೆಕ್‌ ಹಾಕಲು ಪೊಲೀಸರು ಅವಶ್ಯಕ ಇರುವ ಜನರಿಗೆ ಪಾಸ್‌ ನೀಡಿದ್ದಾರೆ. ದಿನಸಿ ಮಾರಾಟ, ಕಿರಾಣಿ, ಹಾಲಿನ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಮಾಡುವ ಜನರಿಗೆ ಪೊಲೀಸ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪಾಸ್‌ ನೀಡಿದ್ದಾರೆ. ಪಾಸ್‌ ಇದ್ದವರಿಗೆ ಮಾತ್ರ ಪೊಲೀಸರು ವಿನಾಯಿತಿ ನೀಡುತ್ತಿದ್ದಾರೆ. ಪಾಸ್‌ ಇಲ್ಲದೇ ನಗರ ಪ್ರವೇಶ ಮಾಡಿದರೇ ಅಂತವರ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಚಿಕ್ಕೋಡಿ ಪಿಎಸ್‌ಐ ರಾಕೇಶ ಬಗಲಿ ತಿಳಿಸಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅನಾವಶ್ಯಕ ಓಡಾಡುವ ಜನರಿಗೆ ಬಿಸಿ ಮುಟ್ಟಿಸಲು ಚಿಕ್ಕೋಡಿ ಉಪವಿಭಾಗ ಮಟ್ಟದ ವ್ಯಾಪ್ತಿ ಸುಮಾರು 210 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಮಾಡುವವರಿಗೆ ಪಾಸ್‌ ನೀಡಲಾಗಿದ್ದು, ಪಾಸ್‌ ಇಲ್ಲದೇ ಚಿಕ್ಕೋಡಿ ನಗರಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಸರ್ಕಾರ ನಿಯಮ ಮೀರಿ ಯಾರು ಹೊರಗೆ ತಿರುಗಾಡಬಾರದು.
 ಮನೋಜಕುಮಾರ ನಾಯಿಕ,
ಡಿವೈಎಸ್‌ಪಿ ಚಿಕ್ಕೋಡಿ

ಮಹಾದೇವ ಪೂಜೇರಿ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.