ಗಾಣಿಗ ಸಮಾಜದ ಮಕ್ಕಳು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಬೇಕು: ಬಿಎಸ್ ವೈ


Team Udayavani, Sep 18, 2022, 7:49 PM IST

1-dsdd

ಬೈಲಹೊಂಗಲ: ಗಾಣಿಗ ಸಮಾಜದ ಮಕ್ಕಳು ವಿದ್ಯಾವಂತರಾಗಿ ಸಮಾಜಕ್ಕೆ ದೊಡ್ಡ ಕೊಡುಗೆ ನೀಡುವಂತೆ ಪಾಲಕರು ಪ್ರೇರೆಪಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದ ಮುರಗೋಡ ರಸ್ತೆಯ ಪೃಥ್ವಿ ಗಾರ್ಡನಲ್ಲಿ ಭಾನುವಾರ ಬೆಳಗಾವಿ ಜಿಲ್ಲಾ ಗಾಣಿಗ ಸಂಘ, ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಮತ್ತು ತಾಲೂಕಾ ಘಟಕದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಗಾಣಿಗ ಸಮಾಜ ಹಾಗೂ ನೌಕರರ ಸಮ್ಮೇಳನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಗಾಣಿಗ ಸಮಾಜವನ್ನು 3ಬಿ ವರ್ಗದಿಂದ 2 ಎ ವರ್ಗಕ್ಕೆ ತರಲು ಪ್ರಯತ್ನಿಸಿದೆನು. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಹೆಣ್ಣು ಮಕ್ಕಳ ಅಭಿವೃದ್ದಿಗೆ ಕಾರ್ಯಕ್ರಮ ರೂಪಿಸಿದ್ದೇನು. ಯಾವುದೇ ಸಮಾಜಕ್ಕೆ ನಿಗಮ, ಮಂಡಳಿ ನಿರ್ಮಾಣ ಮಾಡದೆ ಸಮಾಜಕ್ಕೆ ಕೆಲಸ ಮಾಡಬಹುದು. ಗಾಣಿಗ ಸಮಾಜಕ್ಕೆ ಶಿವಮೊಗ್ಗ, ಮುದೋಳದಲ್ಲಿ ನಿವೇಶನ ದೊರಕಿಸಿ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಿದ್ದೇನೆ. ಬೈಲಹೊಂಗಲದಲ್ಲಿ ಪುರಸಭೆಯಿಂದ ಗಾಣಿಗ ಸಮಾಜ ಭವನ ನಿರ್ಮಾಣಕ್ಕೆ 8 ಗುಂಟೆ ಜಮೀನು ನೀಡಿದೆ. ಇಲ್ಲಿ ಎರಡು ಕೋಟಿ ವೆಚ್ಚದಲ್ಲಿ ಭವನ ನಿರ್ಮಾಣ ಮಾಡಬೇಕೆಂದು ಸರಕಾರಕ್ಕೆ ನಿವೇದಿಸಿಕೊಂಡು ಪ್ರಾಮಾಣಿಕ ಕಾರ್ಯ ಮಾಡುತ್ತೇನೆಂದರು.

ವಿಜಯಪುರದ ಗಾಣಿಗ ಗುರು ಪೀಠದ ಪೀಠಾಧ್ಯಕ್ಷ ಡಾ.ಜಯಬಸವ ಕುಮಾರಸ್ವಾಮಿಗಳು, ಕೋಲ್ಹಾರ ಜಗದ್ಗುರು ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು, ಭಗಳಾಂಬಾದೇವಿ ದೇವಸ್ಥಾನದ ವೀರಯ್ಯಾ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿದರು.

ಸಂಸದೆ ಮಂಗಲಾ ಅಂಗಡಿ, ಶಾಸಕ ಮಹಾಂತೇಶ ಕೌಜಲಗಿ, ಗಾಣಿಗ ಸಂಘದ ರಾಜ್ಯ ಉಪಾಧ್ಯಕ್ಷ ಸೋಮಲಿಂಗ ಮೆಟಗಟ್ಟಿ, ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ರಮೇಶ ಉಟಗಿ, ಸಂಘದ ಜಿಲ್ಲಾಧ್ಯಕ್ಷ ಪ್ರವೀಣ ಗಾಣಿಗೇರ, ತಾಲೂಕಾಧ್ಯಕ್ಷ ಗಂಗಾಧರ ಗಿರಿಜಣ್ಣವರ, ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಮಹಾಂತೇಶ ದೊಡಗೌಡ್ರ, ರಮೇಶ ಬೂಸನೂರ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ, ಎಸ್.ಕೆ.ಬೆಳ್ಳುಬ್ಬಿ, ಬಿ.ಜಿ.ಪಾಟೀಲ ಹಲಸಂಗಿ, ಗೂಳಪ್ಪ ಹೊಸಮನಿ, ಶೇಖರ ಸಜ್ಜನ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ,ಬಾಬು ಕುಡಸೋಮನ್ನವರ, ಜ್ಯೋತಿ ಕೋಲ್ಹಾರ, ಶೋಭಾ ಗಾಣಿಗೇರ, ಮಲ್ಲಪ್ಪ ಗಾಣಿಗೇರ ,ಅಶೋಕ ಮುಗದುಮ್ಮ, ಯಲ್ಲಪ್ಪ ಕಡಕೋಳ, ಬಸವರಾಜ ಗಾಣಿಗೇರ, ವಿರೂಪಾಕ್ಷ ಕಟ್ಟಿಮನಿ, ಶಂಕರ ಗಾಣಿಗೇರ, ಶಿವಪುತ್ರ ಹತ್ತರಕಿ,ಗೋಪಾಲ ಕಟ್ಟಿಮನಿ, ರೇವಪ್ಪ ಗಾಣಿಗೇರ, ಮಲ್ಲಿಕಾರ್ಜುನ ಗಾಣಿಗೇರ, ಪ್ರಕಾಶ ಗಾಣಿಗೇರ, ಯಲ್ಲಪ್ಪ ಗಾಣಗಿ, ಗಂಗಾಧರ ಕಲ್ಯಾಣಿ, ರಾಜು ಗಾಣಗಿ, ಅಶೋಕ ಗಾಣಗಿ , ಮಡ್ಡೆಪ್ಪ ಗಾಣಿಗೇರ, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಗಾಣಿಗ ಸಮಾಜ ಭಾಂದವರು ಉಪಸ್ಥಿತರಿದ್ದರು. ಸೌಭಾಗ್ಯಗೌಡ ಪ್ರಾರ್ಥಿಸಿದರು. ಲೀನಾ ವಕ್ಕುಂದ, ಪ್ರವೀಣ ಗಾಣಿಗೇರ ನಿರೂಪಿಸಿದರು.

ಸಾಧಕ ಪ್ರಗತಿಪರ ರೈತರು, ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ವೈದ್ಯರನ್ನು, ಗಣ್ಯರನ್ನು ಸನ್ಮಾನಿಸಲಾಯಿತು.

ಗಾಣಿಗ ಸಮಾಜದ ನಿಗಮ ಸ್ಥಾಪಿಸಬೇಕೆಂದು ಬಿ.ಎಸ್.ಯಡಿಯೂರಪ್ಪನವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಇದಕ್ಕೂ ಮೊದಲು ಪಟ್ಟಣದ ಶಿವಬಸವ ಕಲ್ಯಾಣಮಂಟಪದಿಂದ ಶ್ರೀಗಳ ಬೆಳ್ಳಿ ಸಾರೋಟಿನ ಮೆರವಣಿಗೆ ಮುರಗೋಡ ರಸ್ತೆಯ ವೇದಿಕೆ ವರೆಗೆ ಜರುಗಿತು. ಮೆರವಣಿಗೆಯಲ್ಲಿ ಸುಮಂಗಲೆಯರ ಕುಂಭಮೇಳ, ಕುದುರೆ ಕುಣಿತ ನೋಡುಗರ ಗಮನ ಸೆಳೆದವು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.