ರೈತ ಹೋರಾಟವು ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರವಲ್ಲ: ಚುಕ್ಕಿ ನಂಜುಂಡಸ್ವಾಮಿ


Team Udayavani, Mar 13, 2021, 3:30 PM IST

ರೈತ ಹೋರಾಟವು ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರವಲ್ಲ: ಚುಕ್ಕಿ ನಂಜುಂಡಸ್ವಾಮಿ

ಬೆಳಗಾವಿ: ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ನಡೆಯುತ್ತಿರುವ ಹೋರಾಟ ರೈತ ಕುಲದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದ್ದೇ ಹೊರತು, ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರ ಅಲ್ಲ ಎಂದು ರೈತ ಸಂಘದ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಸ್ಪಷ್ಟಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ?ಎಂದು ಪ್ರಶ್ನಿಸಿದರು.

ಉತ್ತರ ಭಾರತದಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನರಿಗೆ ಗೊತ್ತಾಗಿದೆ. ಕೊರೆಯುವ ಚಳಿಯಲ್ಲೂ ದೆಹಲಿಯ ಗಡಿಗಳಲ್ಲಿ ಅವರು ಚಳವಳಿ ಮಾಡುತ್ತಿದ್ದಾರೆ. 230 ಮಂದಿ ಅಲ್ಲಿನ ವಾತಾವರಣ ತಾಳಲಾರದೆ ಪ್ರಾಣ ತ್ಯಾಗ ಮಾಡಿದ್ದಾರೆ. ಬೇರೆ ಬೇರೆ ಸ್ವರೂಪದಲ್ಲಿ ಹೋರಾಟ ಮುಂದುವರಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದರು.

ಇದನ್ನೂ ಓದಿ:ಆಂತರಿಕ ಕಲಹ ಮರೆಮಾಚಲು ಕಾಂಗ್ರೆಸ್ ನಿಂದ ಯಾತ್ರೆ ನಾಟಕ: ಜಗದೀಶ್ ಶೆಟ್ಟರ್

ಕೃಷಿಗೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವದು ರೈತರಿಗೆ ನೇರ ಹೊಡೆತ ಬಿದ್ದಿದೆ. ರೈತರೊಂದಿಗೆ ಕಾರ್ಮಿಕ ಸೇರಿದಂತೆ ವಿವಿಧ ಸಂಘಟನೆಗಳು ದನಿ ಎತ್ತಿದರೂ ಸರ್ಕಾರ ಸ್ಪಂದಿಸಿಲ್ಲ. ಚಳವಳಿ ನಡೆಸುತ್ತಿರುವವರ ರೈತರಲ್ಲ, ಅವರಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬಿತ್ಯಾದಿ ಮಾತುಗಳ ಮೂಲಕ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

ದೇಶದ ವಿವಿಧೆಡೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಿರುವುದು ಚಳವಳಿಯ ಗಟ್ಟಿತನವನ್ನು ತೋರಿಸುತ್ತಿದೆ ಎಂದರು.

ಈಗ ರೈತ ಸಂಘ ಸೇರಿದಂತೆ ಹಲವು ಸಂಘಗಳು ಸೇರಿ ದಕ್ಷಿಣ ಭಾರತಕ್ಕೂ ಚಳವಳಿಯನ್ನು ವಿಸ್ತರಿಸುತ್ತಿದ್ದೇವೆ. ಮೊದಲಿಗೆ ರಾಜ್ಯದ ಮೂರು ಕಡೆಗಳಲ್ಲಿ ರೈತರ ಮಹಾಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ರೈತರ ಉಳಿವಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಉಪ್ಪಿನಂಗಡಿ:ಮಗುಚಿಬಿದ್ದ ಡೀಸೆಲ್ ಟ್ಯಾಂಕರ್; ಬಿಟ್ಟಿ ಡೀಸೆಲ್ ಗೆ ನೂಕುನುಗ್ಗಲು,ಲಾಠಿ ಪ್ರಹಾರ

ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.