ಚಿಕ್ಕೋಡಿಯಲ್ಲಿ ಸಿನಿಮೀಯ ಘಟನೆ: ಕೊಲ್ಲಲು ಬಂದವ ಹೆಣವಾದ
Team Udayavani, Nov 9, 2017, 12:31 PM IST
ಚಿಕ್ಕೋಡಿ: ಬೆಳಗಾವಿಯಲ್ಲಿ ನಡೆದ ಸಿನಿಮೀಯ ಘಟನೆಯೊಂದರಲ್ಲಿ ಮಹಿಳೆಯನ್ನು ಕೊಲ್ಲುವ ಸಂಚಿನೊಂದಿಗೆ ಬಂದಿದ್ದ ವ್ಯಕ್ತಿ ಪಾಳು ಬಾವಿಯಲ್ಲಿ ಬಿದ್ದು ಹೆಣವಾಗಿದ್ದು, 130 ಅಡಿ ಆಳದ ಬಾವಿಗೆ ಬಿದ್ದರೂ ಮಹಿಳೆ ಅದೃಷ್ಟವಷಾತ್ ಬುದುಕಿ ಉಳಿದಿದ್ದಾಳೆ.
ನವೆಂಬರ್ 7 ರಂದು ರಾತ್ರಿ ಮೀರಾಪುರ ಹಟ್ಟಿಯಲ್ಲಿ ಘಟನೆ ನಡೆದಿದ್ದು,ಲಕ್ಕಪ್ಪ ಅರಮಾನ ಎನ್ನುವಾತ ಬೈಕ್ನಲ್ಲಿ ಬಂದು ತನ್ನ ಪರಿಚಯಸ್ಥಳೇ ಆಗಿರುವ ಅಕ್ಕವ್ವ ಖೋತಾ ರನ್ನು ಮೆಕ್ಕಜೋಳ ಕಟಾವು ಮಾಡಲೆಂದು ಕೆರೆದುಕೊಂಡು ಹೋಗಿದ್ದಾನೆ.
ಪಾಳು ಬಾವಿಯೊಂದರ ಬಳಿ ತೆರಳಿ ಅಕವ್ವನೊಂದಿಗೆ ಕೆಲ ಕಾಲ ಜಗಳವಾಡಿದ್ದು,ಬಳಿಕ ಆಕೆಯನ್ನು ತಳ್ಳಿ ತಾನು ಪರಾರಿಯಾಗಲು ಮುಂದಾಗಿದ್ದಾನೆ. ಯತ್ನದಲ್ಲಿ ಲಕ್ಕಪ್ಪ ಮೊದಲು ಬಾವಿಗೆ ಬಿದ್ದು ಮೈಮೇಲೆಯೇ ಬೈಕ್ ಬಿದ್ದು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಕ್ಕವ್ವ 130 ಅಡಿ ಆಳದ ಬಾವಿಗೆ ಬಿದ್ದರೂ ಅದೃಷ್ಟವಷಾತ್ ಪಾರಾಗಿದ್ದು ಪೊಲೀಸರು, ಅಗ್ನಿ ಶಾಮಕ ದಳದ ಸಿಬಂದಿಗಳು ಮತ್ತು ಸ್ಥಳೀಯರು ತಡರಾತ್ರಿ 1 ಗಂಟೆಯ ವೇಳೆಗೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಲಕ್ಕವ್ವ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ನನ್ನನ್ನು ಕೊಲ್ಲುವ ಸಂಚಿನೊಂದಿಗೆ ಕೃತ್ಯ ಎಸಗಿದ್ದ’ ಎಂದಿ ದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ