ಪ್ರವಾಹ ಪರಿಹಾರಕ್ಕಾಗಿ ಮುಖ್ಯಮಂತ್ರಿ ಭೇಟಿ ಮಾಡಿದ ಮಾಜಿ ಸಚಿವ ಹುಕ್ಕೇರಿ ನೇತೃತ್ವದ ನಿಯೋಗ


Team Udayavani, Aug 18, 2021, 5:52 PM IST

CM Bassavaraja Bommai

ಚಿಕ್ಕೋಡಿ : ಕೃಷ್ಣಾ ಮತ್ತು ಉಪನದಿಗಳ ಭೀಕರ ಪ್ರವಾಹದಿಂದ ಆದ ನಷ್ಟಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ನೇತೃತ್ವದಲ್ಲಿ, ನದಿ ತೀರದ ಮುಖಂಡರ ನಿಯೋಗ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಅವರ ಗೃಹ ಕಚೇರಿಯಲ್ಲಿ  ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರತಿ ವರ್ಷ ಸಂಭವಿಸುವ ಅತಿವೃಷ್ಟಿ ಹಾಗೂ ಪ್ರವಾಹದಿಂದ ಅನೇಕ ಸೇತುವೆಗಳು ಬೇಗನೆ ಮುಳುಗಡೆ ಆಗುತ್ತವೆ. ಮಲಿಕವಾಡ, ಇಂಗಳಿ, ಯಡೂರ ಸೇರಿದಂತೆ ಚಿಕ್ಕೋಡಿ ಸದಲಗಾ ಕ್ಷೇತ್ರಕ್ಕೆ ಒಳಪಡುವ ಅನೇಕ ಸೇತುವೆಗಳನ್ನು ಎತ್ತರಿಸಿದರೆ ಪ್ರವಾಹ ಬಂದಾಗ ಜನರು ಒಡಾಟ ಮಾಡಲು ಕಷ್ಟ ಆಗುವುದಿಲ್ಲ ಎಂಬುವುದನ್ನ ಶಾಸಕ ಗಣೇಶ್ ಹುಕ್ಕೇರಿಯವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ಇದನ್ನೂ ಓದಿ : ಉಪರಾಷ್ಟಪತಿ ವೆಂಕಯ್ಯನಾಯ್ಡು ಹಂಪಿಗೆ ಆಗಮನ : ವಾಯುಸೇನೆ  ಹೆಲಿಕ್ಯಾಪ್ಟರ್  ಪೂರ್ವಭ್ಯಾಸ

ಇನ್ನು, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಅನೇಕ ರಸ್ತೆಗಳು ಹಾಳಾಗಿವೆ, ಕೆಲವು ರಸ್ತೆಗಳಂತೂ ಪ್ರವಾಹದ ಅಬ್ಬರಕ್ಕೆ ಕೊಚ್ಚಿ ಹೊಗಿವೆ, ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಕಬ್ಬು ಬೆಳೆಯುವ ಹಿನ್ನೆಲೆ, ಅಕ್ಟೊಬರ್ ತಿಂಗಳಲ್ಲಿ ಕಬ್ಬು ಸಾಗಣಿಕೆ ಪ್ರಾರಂಭ ಆಗುತ್ತದೆ ಅಷ್ಟರೊಳಗೆ ಈ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸಿಬೇಕು, ಇಲ್ಲದಿದ್ದರೆ ರೈತರು ಬೆಳೆದ  ಕಬ್ಬು,  ಕಾರ್ಖಾನೆಗೆ ಕಳುಹಿಸಲು ಸಮಸ್ಯೆ ಆಗುತ್ತದೆ, ರಸ್ತೆ ಅಭಿವೃದ್ಧಿಗಾಗಿ ಆದಷ್ಟು ಬೇಗ ಅನುದಾನ ಮಂಜೂರು ಮಾಡಬೆಕೇಂದು ಶಾಸಕ ಗಣೇಶ್ ಹುಕ್ಕೇರಿಯವರು ಮುಖ್ಯಂತ್ರಿಗಳಿಗೆ ಮನವಿ ಮಾಡಿದರು.

ಇನ್ನೂ ಅತಿವೃಷ್ಟಿಯಿಂದ ಕೆವಲ ನದಿ ಪಾತ್ರದ ಜನರ ಬೆಳೆಹಾನಿ ಆಗಿಲ್ಲ, ಬೆಳಗಾವಿ ಜಿಲ್ಲೆಯ ಅನೇಕ ರೈತರು ಅಧಿಕ ಇಳುವರಿಗಾಗಿ ಹೆಚ್ಚು ಖರ್ಚು ಮಾಡಿ ಬೆಳೆದ  ಸೋಯಾಬಿನ್, ಮೆಕ್ಕೆ, ಕಬ್ಬು, ಜೋಳ ಹೀಗೆ ಬಹಳಷ್ಟು ಬೆಳೆ ನಾಶವಾಗಿರುವ ಹಿನ್ನಲೆ ರೈತರು ಕಂಗಾಲಾಗಿದ್ದೂ,   ಸೂಕ್ತ ಅನುದಾನವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಯವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲುಸಿದರು.

ಈ ಬಾರಿ ಸೇರಿದಂತೆ ಕಳೆದ 2019 ರ ಪ್ರವಾಹದಲ್ಲಿ ಮನೆ ಕಳೆದುಕೊಂಡ ಒಂದು ಸಾವಿರಕ್ಕೂ ಅಧಿಕ ಜನರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ, ಅನೇಕ ಜನರು ಸಾರ್ವಜನಿಕ ಕಟ್ಟಡ ಗಳನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ, ಅಲ್ಲಿನ ಹೃದಯ ವಿದ್ರಾವಕ ದೃಶ್ಯಗಳನ್ನು ಉಹಿಸಲು ಸಾಧ್ಯವಿಲ್ಲ, ದಯವಿಟ್ಟು ಪಾರದರ್ಶಕವಾಗಿ ಸರ್ವೇ ಕಾರ್ಯ ಮಾಡಿ ಮನೆ ಕಳೆದುಕಡ ಪ್ರತಿಯೊಬ್ವರಿಗೂ ಮನೆ ಸಿಗುವಂತಾಗಬೇಕು ಎಂದು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಯವರು ಸಿಎಂ ಗಮನ ಸೆಳೆದರು.

ಈ ಸಂದರ್ಭದಲ್ಲಿ ರವೀಂದ್ರ ಮಿರ್ಜೆ. ಅನಿಲ ಪಾಟೀಲ. ಪೀರಗೌಡ ಪಾಟೀಲ ಮುಂತಾದವರು ಇದ್ದರು.

ಇದನ್ನೂ ಓದಿ : ಯಾದಗಿರಿ ಜನಾಶೀರ್ವಾದ ಯಾತ್ರೆ ವೇಳೆ ಸುಡುಮದ್ದು ಸದ್ದು: ಪ್ರಕರಣ ದಾಖಲು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.