ಸಿಎಂ ಬಾರದೇ ನಿರಾಶ್ರಿತರಿಗೆ ನಿರಾಸೆ
Team Udayavani, Aug 6, 2019, 12:35 PM IST
ಬೆಳಗಾವಿ: ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿರಾಶ್ರಿತರು.
ಅಥಣಿ: ಪ್ರವಾಹ ಪೀಡಿತ ಸಂತ್ರಸ್ತರ ಅಳಲು ಕೇಳಲು ಸೋಮವಾರ ಬರಬೇಕಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರಾಶ್ರಿತರನ್ನು ನಿರಾಸೆಗೊಳಿಸಿದ್ದಾರೆ.
ತಾಲೂಕಿನ ಸತ್ತಿ ಸಂತ್ರಸ್ತರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹವಾಮಾನ ವೈಪರೀತ್ಯದಿಂದ ಆಗಮಿಸದಿರುವುದಕ್ಕೆ ಇಲ್ಲಿಯ ನಿವಾಸಿಗಳು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣಾ ನದಿ ನೀರಿನ ಪ್ರವಾಹದಿಂದ ಸತ್ತಿ ಗ್ರಾಮದ ಕೆಲವು ಮನೆಗಳು ಮುಳುಗಡೆಯಾಗಿವೆ. 12-13 ವರ್ಷವಾದರೂ ಸಮಸ್ಯೆ ಬಗೆಹರಿದಿಲ್ಲ. ಪ್ರತಿ ಸಲ ನೀರು ಬಂದು ಕುಟುಂಬಗಳು ಮನೆ ಕಳೆದುಕೊಳ್ಳುತ್ತಿವೆ. ನೀರು ಕಡಿಮೆಯಾದಾಗ ಮತ್ತೆ ಮನೆ ನಿರ್ಮಿಸಲು ಪ್ರತಿ ವರ್ಷ ಕನಿಷ್ಠ 50 ಸಾವಿರ ರೂ. ಖರ್ಚು ಮಾಡಬೇಕಾಗಿದೆ. ಹೀಗಾಗಿ ಶಾಶ್ವತ ವಸತಿ ಕಲ್ಪಿಸಿಕೊಡುವಂತೆ ಇಲ್ಲಿಯ ನಿವಾಸಿಗಳು ಆಗ್ರಹಿಸಿದರು.
ಸತ್ತರೆ ಇಲ್ಲೇ ಸಾಯ್ತಿವಿ: ಮನೆ ಬಿಟ್ಟು ಗಂಜಿ ಕೇಂದ್ರಗಳಿಗೆ ಹೋಗುವಂತೆ ಅಧಿಕಾರಿಗಳು ಹೇಳುತ್ತಾರೆ. ಆದರೆ ಶಾಶ್ವತ ಪರಿಹಾರ ಮಾತ್ರ ಕೊಡಲು ಮುಂದೆ ಬರುವುದಿಲ್ಲ. ಮಳೆಯಲ್ಲಿ ಮನೆ ಮುಳುಗಡೆಯಾದವರಿಗೆ ಪರಿಹಾರ ಕೊಡುವ ಬದಲು ಬೇರೆಯವರಿಗೆ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುತ್ತಿದ್ದಾರೆ. ಆದರೆ ನಿಜವಾದ ಮುಳುಗಡೆಯಾದವರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಪರಿಹಾರ ಕಲ್ಪಿಸಬೇಕು. ಸತ್ತರೆ ಇಲ್ಲೇ ಸಾಯುತ್ತೇವೆ. ಆದರೆ ಮನೆ ಬಿಟ್ಟು ಮಾತ್ರ ಹೋಗುವುದಿಲ್ಲ ಎಂದು ಘೋಷಣೆ ಕೂಗಿದರು.
ಸಿಎಂ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ ಅಥಣಿಗೆ ಸೋಮವಾರ ಬಿ.ಎಸ್. ಯಡಿಯೂರಪ್ಪ ಆಗಮನಕ್ಕಾಗಿ ಬಹುತೇಕ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ದಿಢೀರ್ ಪ್ರವಾಸ ರದ್ದುಗೊಂಡಿದ್ದರಿಂದ ಅಥಣಿ ಜನತೆಗೆ ನಿರಾಸೆಯನ್ನುಂಟು ಮಾಡಿತು. ಯಡಿಯೂರಪ್ಪ ಬರುತ್ತಿದ್ದಾರೆ ಎಂಬ ವಿಷಯ ತಿಳಿದು ಶಾಸಕ ಉಮೇಶ ಕತ್ತಿ, ಮಾಜಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಆಗಮಿಸಿದ್ದರು. ಅಲ್ಲದೇ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ