ಮಾರ್ಚ್ ವೇಳೆಗೆ ರೈಲ್ವೆ ನಿಲ್ದಾಣ ಕಾಮಗಾರಿ ಮುಗಿಸಿ
Team Udayavani, Jun 5, 2020, 11:46 AM IST
ಬೆಳಗಾವಿ: ನಗರದಲ್ಲಿ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಮುಂದಿನ ವರ್ಷ ಮಾರ್ಚ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ರೈಲು ನಿಲ್ದಾಣ ಕಾಮಗಾರಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಕಾಮಗಾರಿ ಇದೇ ವರ್ಷ ನವಂಬರ್ದಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಕೋವಿಡ್ ವೈರಸ್ ಹಾವಳಿ ತಡೆಗಟ್ಟಲು ಲಾಕ್ಡೌನ್ ಜಾರಿ ಮಾಡಿದ್ದರಿಂದ ವಿಳಂಬವಾಗಿದೆ ಎಂದರು.
ಈಗ ಎಲ್ಲ ಕಡೆ ಲಾಕ್ಡೌನ್ ಸಡಿಲಿಕೆ ಮಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅವಕಾಶ ನೀಡಲಾಗಿದೆ. ಆದ್ದರಿಂದ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು 2021ರ ಮಾರ್ಚ್ ವೇಳೆಗೆ ಇದನ್ನು ಪೂರ್ಣಗೊಳಿಸಬೇಕು ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳೆಯುತ್ತಿರುವ ಜನಸಂಖ್ಯೆ ಮತ್ತು ತಂತ್ರಜ್ಞಾನವನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗಿದೆ. ಈ ನಿಲ್ದಾಣವು ಇತಿಹಾಸದ ನೆನಪುಗಳಿಗೆ ಜೀವ ತುಂಬುವ ನಿಲ್ದಾಣವಾಗಿದೆ. ಇದು ಸಮಗ್ರ ಅಭಿವೃದ್ಧಿ ಹೊಂದಬೇಕು ಎಂಬುದು ಬಹಳ ದಿನಗಳ ಕನಸಾಗಿತ್ತು. ಅದು ಈಗ ಸಾಕಾರಗೊಳ್ಳುತ್ತಿದೆ ಎಂದು ಹೇಳಿದರು.
ಮಹಾತ್ಮಾಗಾಂಧಿ ಅವರು 1924 ರ ಕಾಂಗ್ರೆಸ್ ಅಧಿವೇಶನದ ಸಮಯದಲ್ಲಿ ಬೆಳಗಾವಿಯಲ್ಲಿ ನಡೆದಾಡಿದ ಇತಿಹಾಸವನ್ನು ನೆನಪಿಸುವಂತೆ ನಿಲ್ದಾಣದ ಮುಂಭಾಗವನ್ನು ವಿನ್ಯಾಸಗೊಳಿಸಲು ತಜ್ಞರು ಯೋಜನೆಯ ರೂಪರೇಷೆ ಸಿದ್ಧಪಡಿಸಿದ್ದಾರೆ. ಮುಂದಿನ ಮಾರ್ಚ್ ವೇಳೆಗೆ ಇದಕ್ಕೆ ಸ್ಪಷ್ಟರೂಪ ಸಿಗಲಿದೆ ಎಂದರು.
ಈ ಸಂದರ್ಭದಲ್ಲಿ ರೈಲ್ವೆ ವಿಕಾಸ ನಿಗಮ ಹಾಗೂ ನೈಋತ್ಯ ರೈಲ್ವೆ ಇಲಾಖೆ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದು ಕಾಮಗಾರಿಯ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ