ಅಧಿಕಾರ ಹಿಡಿಯಲು ರಾಜಿ ಅನಿವಾರ್ಯ: ಮಾಧುಸ್ವಾಮಿ
Team Udayavani, Nov 13, 2019, 8:26 PM IST
ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಹಿಡಿಯಲು ಮತ್ತು ಪಕ್ಷ ಉಳಿಸಿಕೊಳ್ಳಲು ಪ್ರಯತ್ನ ನಡೆಸಬೇಕಾಗುತ್ತದೆ. ಇದಕ್ಕಾಗಿ ರಾಜಿ ಅನಿವಾರ್ಯ. ಅದನ್ನು ಅಸಮಾಧಾನಗೊಂಡವರು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ಭಾವನೆ ನನ್ನದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದರಿಂದಾಗಿ ನಮ್ಮ ಪಕ್ಷಕ್ಕೆ ತೊಂದರೆ ಆಗುವುದಿಲ್ಲ. ಈ ಸರಕಾರ ಮುಂದುವರಿಯಬೇಕು ಮತ್ತು ಉಳಿಸಬೇಕು ಎನ್ನುವುದು ಮತದಾರರ ಅಭಿಮತ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ನಮ್ಮವರನ್ನು ಗೆಲ್ಲಿಸುತ್ತಾರೆ. ಸ್ಪೀಕರ್ ಹುದ್ದೆಯ ಗೌರವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ನಿರ್ಧಾರವನ್ನು ನಾವು ಸ್ವಾಗತ ಮಾಡಲೇಬೇಕಾಗುತ್ತದೆ. ತೀರ್ಪು ವಿಳಂಬ ಆಗಿದ್ದರಿಂದ ಅನರ್ಹ ಶಾಸಕರಿಗೆ 2-3 ತಿಂಗಳು ಆತಂಕ ಆಗಿತ್ತು. ಆಗಲೇ ತೀರ್ಪು ಬಂದಿದ್ದರೆ ಕ್ಷೇತ್ರದಲ್ಲಿ ಓಡಾಡುತ್ತಿದ್ದರು. ಬಿಜೆಪಿಯಿಂದ ಬಿ ಫಾರಂ ಕೊಟ್ಟ ಕೂಡಲೇ ಅನರ್ಹ ಶಾಸಕರೆಲ್ಲರೂ ಪಕ್ಷ ಸೇರುತ್ತಾರೆ. ಅದನ್ನು ಕೊಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಬೇರೆಯವರಿಗೆ ಟಿಕೆಟ್ ಕೊಟ್ಟರೆ, ನಮ್ಮ ಪಕ್ಷ ಬೆಳೆಸಿದವರಿಗೆ ಅಸಮಾಧಾನ ಇರುವುದು ಸಹಜ. ಪಕ್ಷದ ಟಿಕೆಟ್ ಸಿಗದವರಿಗೆ ಬೇರೆ ಸ್ಥಾನಮಾನ ಕೊಟ್ಟು ಸಮಾಧಾನ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ