ಬೆಳಗಾವಿ ಪಾಲಿಕೆಯ ಮೇಲೆ ಯಾರ ಹಿಡಿತವೂ ಇಲ್ಲ: ಬಿಜೆಪಿ ವಿರುದ್ಧ ಹೆಬ್ಬಾಳ್ಕರ್ ಟೀಕೆ
Team Udayavani, Sep 3, 2021, 2:26 PM IST
ಬೆಳಗಾವಿ: ಪಾಲಿಕೆ ಆಯುಕ್ತರ ಮನೆಯ ಮುಂದೆ ಬಿಜೆಪಿ ಶಾಸಕರೇ ಕಸ ತಂದು ಚೆಲ್ಲುವಂತಹ ಪರಿಸ್ಥಿತಿ ಬರುತ್ತದೆ ಎಂದರೆ ಮಹಾನಗರ ಪಾಲಿಕೆಯ ಮೇಲೆ ಯಾರ ಹಿಡಿತವೂ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.
ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಬೆಳಗಾವಿ ನಗರದಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದಾರೆ. ಆದರೆ ಈ ಶಾಸಕರೇ ಪಾಲಿಕೆ ಆಯುಕ್ತರ ಮನೆಯ ಮುಂದೆ ಕಸ ಚೆಲ್ಲುತ್ತಾರೆ ಎಂದರೆ ಪರಿಸ್ಥಿತಿ ಹೇಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸ್ಮಾರ್ಟ್ ಸಿಟಿ ಯೋಜನೆ ಹೇಗಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಾವಿರ ಕೋಟಿ ರೂ. ಯೋಜನೆ ಮೇಲೆ ಇದ್ದ ನಿರೀಕ್ಷೆ ಹುಸಿಯಾಗಿದೆ. ಸಿದ್ದರಾಮಯ್ಯ ಸರಕಾರವಿದ್ದಾಗ 3 ವರ್ಷ ಪಾಲಿಕೆಗೆ ತಲಾ 120 ಕೋಟಿ ರೂ. ಅನುದಾನ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಇದನ್ನೂ ಓದಿ:ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ : ಪ್ರಹ್ಲಾದ ಜೋಶಿ
ಜನರು ಇಂದು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಬಿಜೆಪಿ ನಂಬಿ ಮೋಸ ಹೋಗಿದ್ದಾರೆ. ಹಾಗಾಗಿ ಈ ಬಾರಿ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಮಯ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ