ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

ವೈದಿಕರ ಮಾತುಗಳನ್ನು ನಂಬಿ ದೇವರುಗಳಿಗೆ ಪ್ರಾಣಿ ಬಲಿಕೊಡುವ ಕೆಲಸವನ್ನು ತಕ್ಷಣವೇ ಕೈಬಿಡಬೇಕು.

Team Udayavani, Jan 5, 2023, 6:23 PM IST

ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್‌ ಸೊಸೈಟಿ ಆಫ್‌ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್‌.ಅಂಬೇಡ್ಕರ್‌ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್‌ ಹೇಳಿದರು.

ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್‌.ಅಂಬೇಡ್ಕರ್‌ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸದ್ಯ ದೇಶದಲ್ಲಿ ಡಾ| ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನ ಬದಲಿಸುವ ಪ್ರಯತ್ನಗಳು ನಡೆದಿವೆ. ದಲಿತರಿಗಾಗಿ ಡಾ. ಅಂಬೇಡ್ಕರ್‌ ಅವರು ಪಟ್ಟಿರುವ ಶ್ರಮವನ್ನು ನಾವಿಂದು ನೆನಪಿಸಿ ಮುನ್ನಡೆಯಬೇಕಿದೆ. ಡಾ| ಅಂಬೇಡ್ಕರರು ಇಲ್ಲವಾಗಿದ್ದರೆ ನಾವು ಎಲ್ಲಿ ಇರುತ್ತಿದ್ದೇವೆ ಎಂದು ಗೊತ್ತಾಗುತ್ತಿರಲಿಲ್ಲ ಎಂದು ನುಡಿದರು.

ಡಾ| ಅಂಬೇಡ್ಕರ್‌ ಅವರಿಗೆ ಶಾಹು ಮಹಾರಾಜ, ಮಹಾತ್ಮ ಫುಲೆ, ಶಿವಾಜಿ ಮಹಾರಾಜರು ನೀಡಿದ ಪ್ರೇರಣೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯಇಲ್ಲ. ಅಲ್ಲದೆ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಯಾರು ಮರೆಯುವಂತಿಲ್ಲ. ಸದ್ಯ ಭಾರತ ಸರಕಾರ 5ನೇ ತರಗತಿ ಮೇಲಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ ಮಾಡಲು ಹೊರಟಿದೆ. ವೇದ ಕಲಿಸಿ ನಮ್ಮನ್ನು ಮತ್ತೆ ಶೂದ್ರರಾಗಿ ಕಾಣುವ ಕಾಲ ಬರಬಹುದು. ಸದ್ಯ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲವನ್ನು ವ್ಯಾಪಾರೀಕರಣ ಮಾಡಲಾಗುತ್ತಿದೆ.

ದೇಶದಲ್ಲಿ ಶಿಕ್ಷಣವನ್ನು ಹಿಂದಿ ಭಾಷೆಯಲ್ಲಿ ಕಲಿಸುವ ಹುನ್ನಾರ ನಡೆಯುತ್ತಿದೆ. ಇದರಿಂದ ನಮ್ಮ ಹಿಂದೂಳಿದ ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ನುಡಿದರು. 205 ವರ್ಷಗಳ ಹಿಂದೆ ಪೇಶ್ವೆಗಳ ವಿರುದ್ದ ಮಹಾರರು ಗಳಿಸಿದ ವಿಜಯವು ಭಾರತದ ಇತಿಹಾಸದಲ್ಲಿ ದಾಖಲು ಆಗಲೇ ಇಲ್ಲ. ಮನುವಾದಿಗಳು ಅಂಥ ಸತ್ಯವನ್ನು ದಾಖಲಿಸಲೇ ಇಲ್ಲ. ಈಗ ಪುಃನ ಸತ್ಯವನ್ನು ದೇಶದ ಜನರಿಗೆ ತಿಳಿಸುವ ಕಾಲ ಬಂದಿದೆ ಎಂದು ಅವರು ಹೇಳಿದರು.

ದೇಶದ ಸಂವಿಧಾನದಂತೆ ಅನೇಕ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತರಿಗಾಗಿ ರೂಪಿಸಿದ್ದು, ಅವುಗಳ ಲಾಭ ಪಡೆಯಬೇಕು. ಇದರಿಂದ ದಲಿತರ ಒಟ್ಟು ಅಭಿವೃದ್ಧಿ ಆಗುತ್ತದೆ. ಪ್ರಧಾನಿ ಮೋದಿ ಅವರು ದೇಶದಲ್ಲಿ ಒನ್‌ ನೇಶನ್‌, ಒನ್‌ ಎಜ್ಯುಕೇಶನ್‌ ನೀತಿಯನ್ನು ಜಾರಿ ತರಲಿ ಎಂದು ಒತ್ತಾಯಿಸಿದರು. ಸಾನ್ನಿಧ್ಯ ವಹಿಸಿದ್ದ ಹೆಬ್ಟಾಳದ ಬಸವ ಚೇತನ ದೇವರು ಮಾತನಾಡಿ, ದಲಿತರು ವೈದಿಕರ ಮಾತುಗಳನ್ನು ನಂಬಿ ದೇವರುಗಳಿಗೆ ಪ್ರಾಣಿ ಬಲಿಕೊಡುವ ಕೆಲಸವನ್ನು ತಕ್ಷಣವೇ ಕೈಬಿಡಬೇಕು. ಪ್ರತಿಯೊಬ್ಬ ದಲಿತರು ತಮ್ಮ ಬದುಕಿಗೆ ಪುನಶ್ಚೆತನ ತಂದು ಕೊಟ್ಟ ಅಂಬೇಡ್ಕರರ ಭಾವಚಿತ್ರವನ್ನು ಮನೆಯಲ್ಲಿ ಹಾಕಿ ಅವರ ತತ್ವಗಳನ್ನು ಬದುಕಿನುದ್ದಕ್ಕೂ ಪಾಲಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ ಜನಜಾಗ್ರತಿ ವೇದಿಕೆಯ ವತಿಯಿಂದ 1 ಲಕ್ಷ ರೂಗಳನ್ನು ಡಾ. ರಾಜರತ್ನ ಅಂಬೇಡ್ಕರ ಅವರಿಗೆ ನೀಡಲಾಯಿತು. ವೇದಿಕೆಯ ಅಧ್ಯಕ್ಷ ದಿಲೀಪ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಕಾರಿ ಧುರೀಣರಾದ ಎಸ್‌.ಎಸ್‌. ಶಿರಕೋಳಿ, ಶ್ರೀಕಾಂತ ಹತನೂರಿ, ಪುರಸಭೆ ಸದಸ್ಯ ಜಿತೇಂದ್ರ ಮರಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ವಿಕ್ರಂ ಕರನಿಂಗ, ಬಸವರಾಜ ಕೋಳಿ, ಆನಂದ ಕೆಳಗಡೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.