ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

ಕರ್ನಾಟಕ ನಗರ ನೀರು ಸರಬರಾಜು ವಲಯ ಸುಧಾರಣಾ ಯೋಜನೆಯಡಿ ಕೈಗೊಳ್ಳಲಾಗಿದೆ

Team Udayavani, Oct 28, 2021, 6:53 PM IST

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

ಬೆಳಗಾವಿ: ನಗರದ ಜನರ ಬಹು ದಿನದ ಬೇಡಿಕೆಯಾದ ನಿರಂತರ ನೀರು ಪೂರೈಸುವ ಯೋಜನೆಗೆ ಕರ್ನಾಟಕ ಸರ್ಕಾರವು ಸ್ಪಂದಿಸಿದ್ದು ವಿಶ್ವ ಬ್ಯಾಂಕ್‌ನ ನೆರವಿನೊಂದಿಗೆ ಕರ್ನಾಟಕ ನಗರ ನೀರು ಸರಬರಾಜು ವಲಯ ಸುಧಾರಣಾ ಯೋಜನೆ ನೀರು ಪೂರೈಕೆಯಡಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಒಂಬತ್ತು ಲಕ್ಷ ಜನರು ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ಶಾಸಕ ಅನಿಲ ಬೆನಕೆ ಹೇಳಿದರು.

ನಗರದ ಹೊರವಲಯದ ಬಸವನಕೊಳ್ಳದ ಬಳಿ ನೂತನವಾಗಿ ಆರಂಭಿಸಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬುಧವಾರ ಸಂಸದೆ ಮಂಗಲಾ ಅಂಗಡಿ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಗರದ ಜನರಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡಿದ್ದೇವೆ ಎಂದರು.

ಈಗಾಗಲೇ ಹಿಡಕಲ್‌ ಜಲಾಶಯದಿಂದ ಬೆಳಗಾವಿಗೆ 31 ಕೋಟಿ ವೆಚ್ಚದಲ್ಲಿ ಪೈಪ್‌ ಲೆ„ನ್‌ ಅಳವಡಿಸುವ ಮೂಲಕ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಅತಿ ಶೀಘ್ರದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈಗಾಗಲೇ 30 ಎಂ ಎಲ್‌ ಡಿ ಗಾತ್ರದ ನೀರಿನ ಶುದ್ಧೀಕರಣ ಕೇಂದ್ರವಿದ್ದು, ಈಗ 31 ಎಂಎಲ್‌ಡಿ ಕೇಂದ್ರದ ಶುದ್ಧೀಕರಣ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ಸಂಸದೆ ಮಂಗಲಾ ಅಂಗಡಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಶೀಘ್ರ ಪೂರ್ಣಗೊಂಡು ನಗರದ ಎಲ್ಲ ವಾರ್ಡ್‌ಗಳ ಜನರು ನಿರಂತರ ನೀರಿನ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೆ.ಆರ್‌.ಡಿ.ಎಸ್‌ ವ್ಯವಸ್ಥಾಪಕ ಅಭಿಯಂತರ ಪ್ರಭಾಕರ್‌ ಶೆಟ್ಟಿ ಮಾತನಾಡಿ, ಈ ಯೋಜನೆಯನ್ನು ವಿಶ್ವ ಬ್ಯಾಂಕ್‌ ನ ನೆರವಿನೊಂದಿಗೆ ಕರ್ನಾಟಕ ನಗರ ನೀರು ಸರಬರಾಜು ವಲಯ ಸುಧಾರಣಾ ಯೋಜನೆಯಡಿ ಕೈಗೊಳ್ಳಲಾಗಿದೆ. ಈಯೋಜನೆ ಅಡಿಯಲ್ಲಿ ಪ್ರಾಯೋಗಿಕವಾಗಿ ಈಗಾಗಲೇ ಪಾಲಿಕೆಯ 10 ವಾರ್ಡ್‌ ಗಳಲ್ಲಿ ನಿರಂತರ ನೀರು ಪೂರೈಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಯೋಜನೆಯಲ್ಲಿ 2008 ರಿಂದ ಇದುವರೆಗೂ 11378 ನೀರಿನ ಸಂಪರ್ಕವನ್ನು ನೀಡಿದ್ದು, 117246 ಜನರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.

ಯೋಜನೆಯಡಿ ಎಲ್ಲ 58 ವಾರ್ಡ್‌ ಗಳಿಗೆ ನೀರು ಪೂರೈಸಲಾಗುವುದು 2011ರ ಜನಗಣತಿಯ ಪ್ರಕಾರ 4.8 ಲಕ್ಷ ಜನರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲಿದ್ದು 2053 ನೇ ಸಾಲಿನ ಜನಗಣತಿಗೆ ಅನುಗುಣವಾಗಿ ಯೋಜನೆಯ ಪ್ರಕಾರ 9.67 ಲಕ್ಷ ಜನ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ ಎಂದರು.

ಈ ಯೋಜನೆಯನ್ನು 2053ನೇ ಸಾಲಿನ ಜನಸಂಖ್ಯೆಗೆ ಅನುಗುಣವಾಗಿ ತಯಾರಿಸಲಾಗಿದ್ದು 2053 ರ ವೇಳೆಗೆ 9.67 ಲಕ್ಷ ಜನಸಂಖ್ಯೆಗೆ 184 ಎಂ.ಎಲ್‌. ಡಿ ರಷ್ಟು ನೀರಿನ ಬೇಡಿಕೆ ಇದ್ದು ಈಗ ಇರುವ ಎರಡು ಜಲಾಶಯಗಳಿಂದ 136 ಎಂ.ಎಲ್‌.ಡಿ ನೀರು ಲಭ್ಯವಿದೆ. ಉಳಿದ 48 ಎಂ.ಎಲ್‌.ಡಿ ನೀರನ್ನು ಹಿಡಕಲ್‌ ಜಲಾಶಯದಿಂದ ಹಂಚಿಕೆ ಮಾಡಲು ನೀರಾವರಿ ಇಲಾಖೆಯಿಂದ ಅನುಮೋದನೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಗಟು ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆಯನ್ನು ಸಾಧಿಸಲಾಗಿದೆ.ವಿತರಣಾ ವ್ಯವಸ್ಥೆಯಲ್ಲಿ ನೀರಿನ ಪೈಪ್‌ಗ್ಳನ್ನು ಬದಲಾಯಿಸಿ ನೀರಿನ ಸೋರಿಕೆಯನ್ನು ಕಡಿಮೆ ಮಾಡಲಾಗಿದೆ. ಕಂದಾಯ ವಸೂಲಿಗಾಗಿ ಶೇ.100 ರಷ್ಟು ಗ್ರಾಹಕರಿಗೆ ಮೀಟರ ಅಳವಡಿಸಲಾಗಿದ್ದು, ನಿಯಮಿತ ಬಿಲ್ಲುಗಳನ್ನು ವಿತರಿಸಿ ಶೇ. 90 ರಷ್ಟು ನೀರಿನ ಕರ ವಸೂಲಾತಿ ಮಾಡಲಾಗಿದೆ ಎಂದರು. ನೀರಿನ ಬಳಕೆ ಪ್ರಮಾಣದಲ್ಲಿ ಉಳಿತಾಯದ ಪ್ರಾತ್ಯಕ್ಷಿಕ ವಲಯದ ಅನುಭವದ ಪ್ರಕಾರ ನೀರಿನ ಬಳಕೆ ಪ್ರಮಾಣ ಪ್ರತಿ ದಿನ ಪ್ರತಿ ವ್ಯಕ್ತಿಗೆ 90 ಲೀಟರ್‌ ಇದೆ. ಇದರಿಂದ ನೀರಿನ ಬಳಕೆಯ ಪ್ರಮಾಣದಲ್ಲಿ ಶೇ. 32 ರಷ್ಟು ಉಳಿತಾಯ ಸಾಧಿಸಲಾಗಿದೆ.

ನೀರು ಸರಬರಾಜು ಯೋಜನೆಗೆ ಸಂಬಂಧಪಟ್ಟ ದೂರುಗಳನ್ನು ನಿರ್ವಾಹಕರು ನಿರ್ದಿಷ್ಟ ಅವಧಿಯಲ್ಲಿ ಸರಿಪಡಿಸುವ ಗುರಿ ಇರುವುದರಿಂದ ನಿಗದಿತ ಅವಧಿಯಲ್ಲಿ ದೂರುಗಳಿಗೆ ಸ್ಪಂದಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ, ನಗರ ಸೇವಕರಾದ ರಾಜಶೇಖರ ಡೋಣಿ, ಬಿಜೆಪಿ ಮುಖಂಡರಾದ ಮಹಾದೇವ ಕೆ. ರಾಠೊಡ, ಮುರುಘೇಂದ್ರಗೌಡಾ ಪಾಟೀಲ, ಭೆ„ರಗೌಡ ಪಾಟೀಲ, ಮಾಜಿ ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಎಲ್‌ ಆ್ಯಂಡ್‌ ಟಿ ಕಂಪನಿಯ ಅಧಿಕಾರಿಗಳಾದ ಹರಿಕಾಂತ ದೇಸಾಯಿ, ದುರ್ಗೇಶ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.