ಮೇಲ್ಮನೆಯಲ್ಲಿ ಧರ್ಮದ ವಾಕ್ಸಮರ


Team Udayavani, Dec 29, 2022, 6:35 AM IST

ಮೇಲ್ಮನೆಯಲ್ಲಿ ಧರ್ಮದ ವಾಕ್ಸಮರ

ಬೆಳಗಾವಿ: ರಾಜ್ಯಗಳಲ್ಲಿ ಈಚೆಗೆ ನಡೆದ ಕೊಲೆ ಪ್ರಕರಣಗಳ ಮೇಲಿನ ಚರ್ಚೆಯು ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವಿನ “ಧರ್ಮದ ವಾಕ್ಸಮರ’ಕ್ಕೆ ಮೇಲ್ಮನೆ ಸಾಕ್ಷಿಯಾಯಿತು.

ಆಯಾ ಪಕ್ಷಗಳ ಆಡಳಿತದಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಪ್ರಸ್ತಾವಿಸಿದ ಎರಡೂ ಪಕ್ಷಗಳ ನಾಯಕರ ಆರೋಪ- ಪ್ರತ್ಯಾರೋಪಗಳು ತಾರಕಕ್ಕೇರಿ ಕೊನೆಗೆ ಸದನವನ್ನು ಗುರುವಾರಕ್ಕೆ ಮುಂದೂಡಲಾಯಿತು.

ನಿಯಮ 330ರ ಅಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತ ಚರ್ಚೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಇತ್ತೀಚಿನ ಬೆಳವಣಿಗೆಗಳಿಂದ ಧರ್ಮದ ಅಮಲಿನಲ್ಲಿ ತೇಲುತ್ತಿದೆ. ಒಂದು ಕೋಮಿನ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿದರೆ, ಅಂಥದ್ದೇ ಪ್ರಕರಣಗಳಲ್ಲಿ ಮತ್ತೂಂದು ಕೋಮಿನವರ ವಿರುದ್ಧ ದುರ್ಬಲ ಸೆಕ್ಷನ್‌ಗಳನ್ನು ಹಾಕಲಾಗುತ್ತದೆ. ಸರಕಾರದ ಈ ರೀತಿಯ ಧೋರಣೆಗಳಿಂದಲೇ ಈ ಕೊಲೆಗಳಾಗುತ್ತಿವೆ ಎಂದು ನೇರ ಆರೋಪ ಮಾಡಿದರು.

ಟಿಪ್ಪು ಜಯಂತಿಗೆ ಎಷ್ಟು ಹತ್ಯೆಯಾದವು?
ಇದಕ್ಕೆ ತಿರುಗೇಟು ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಧರ್ಮದ ಆಧಾರದಲ್ಲಿ ಕೇಸುಗಳನ್ನು ಹಾಕುವುದಿಲ್ಲ; ಅಪರಾಧದ ಆಧಾರದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಈ ರಾಜ್ಯದಲ್ಲಿ ಎಲ್ಲ ಧರ್ಮದವರಿಗೂ ಒಂದೇ ಕಾನೂನು. ಪೊಲೀಸರು ನಾವು-ನೀವು ಹೇಳಿದಂತೆ ಪ್ರಕರಣ ದಾಖಲಿಸುವುದಿಲ್ಲ. ಅಷ್ಟಕ್ಕೂ ಪಿಎಫ್ಐ ಇಷ್ಟು ಬೆಳೆಯಲು ಯಾರು ಕಾರಣ? ಟಿಪ್ಪು ಜಯಂತಿಯಿಂದ ಎಷ್ಟು ಕೊಲೆಗಳಾದವು ಎಂದು ತರಾಟೆಗೆ ತೆಗೆದುಕೊಂಡರು.

ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಿದ್ದರಾಮಯ್ಯ ಅವಧಿಯಲ್ಲಿ ಹಿಂದೂಗಳ ಸರಣಿ ಕೊಲೆಗಳಾದವು. ಅವರು ಯಾವೊಂದು ಕುಟುಂಬಕ್ಕೆ ಸಾಂತ್ವನ ಹೇಳುವುದು ಒತ್ತಟ್ಟಿಗಿರಲಿ, ಹತ್ಯೆಯಾದ ಎಂದು ಘೋಷಿಸಲೂ ಇಲ್ಲ. ಪರಿಹಾರ ದೂರದ ಮಾತು. 175 ಪ್ರಕರಣಗಳನ್ನು ಹಿಂ ಪಡೆದು, 1,600 ಆರೋಪಿಗಳನ್ನು ಬಿಡುಗಡೆ ಮಾಡಲಾಯಿತು.

ಅವರೆಲ್ಲರೂ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ವಿಪಕ್ಷದ ಮುಖ್ಯ ಸಚೇತಕ ಪ್ರಕಾಶ್‌ ರಾಠೊಡ್‌ ಮಾತನಾಡಿ, ಚುನಾವಣೆ ದೃಷ್ಟಿಯಿಂದ ಬಿಜೆಪಿ ಸರಕಾರ ಮತ್ತು ತನ್ನ ಅಂಗ ಸಂಸ್ಥೆಗಳಿಂದ ಈ ಕೊಲೆ ಪ್ರಕರಣಗಳು ಮತ್ತು ಪಕ್ಷಪಾತಿ ಧೋರಣೆ ಆಗುತ್ತಿದೆ. ಇದು ಮುಂದೆಯೂ ಆಗಲಿದೆ ಎಂದರು.

ಬಿಜೆಪಿಯ ಭಾರತಿ ಶೆಟ್ಟಿ ಮಾತನಾಡಿ, ಅಪರಾಧ ಹಿಂದೂ ಮಾಡಿದರೂ ತಪ್ಪು, ಮುಸ್ಲಿಂ ಮಾಡಿದರೂ ತಪ್ಪು. ಆ ಕೃತ್ಯಗಳನ್ನು ಪೋಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ನಜೀರ್‌ ಅಹಮ್ಮದ್‌ ಮಾತನಾಡಿ, ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಟೀಕಿಸುವುದು ಎಷ್ಟು ಸರಿ? ಯಾವ ಸಂದೇಶ ನಾವು ಸಮಾಜಕ್ಕೆ ನೀಡುತ್ತಿದ್ದೇವೆ? ಎರಡೂ ಪಕ್ಷಗಳ ಸದಸ್ಯರ ಸಭೆ ಕರೆದು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಸಲಹೆ ಮಾಡಿದರು.

ನಿಮ್ಮದು ರೌಡಿ ರಾಜ್ಯವಾಗಿತ್ತೇ?
ರಾಜ್ಯದಲ್ಲಿ 2017 ಚುನಾವಣ ವರ್ಷ. ಆಗ ಒಂದೇ ವರ್ಷದಲ್ಲಿ 30 ಸಾವಿರ ಜನರನ್ನು ರೌಡಿ ಪಟ್ಟಿಯಲ್ಲಿ ಸೇರಿಸಲಾಯಿತು. ಅದರಲ್ಲಿ ಬಹುತೇಕರು ಹಿಂದೂಗಳೇ ಆಗಿದ್ದರು. ಹಾಗೆ ಮಾಡಲು ನಿಮಗೆ (ವಿಪಕ್ಷ ಕಾಂಗ್ರೆಸ್‌ಗೆ) ನಾಚಿಕೆ ಆಗುವುದಿಲ್ಲವೇ?’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆಗೆ ತೆಗೆದುಕೊಂಡರು.
ಚುನಾವಣೆ ವರ್ಷ ಆಗಿದ್ದರಿಂದಲೇ ಆ ವರ್ಷ ಅಷ್ಟೊಂದು ಜನರನ್ನು ರೌಡಿಗಳ ಲಿಸ್ಟ್‌ಗೆ ಸೇರಿಸಲಾಯಿತು. ಮರ್ಯಾದಸ್ಥರನ್ನೆಲ್ಲ ಪಟ್ಟಿಗೆ ಸೇರಿಸಲಾಯಿತು. ಹಾಗಾದರೆ ನಿಮ್ಮದು ರೌಡಿ ರಾಜ್ಯವಾಗಿತ್ತಾ ಎಂದು ಕೇಳಿದರು.
ಯಾವುದೇ ನೋಟಿಸ್‌ ನೀಡಿದರೂ ಉತ್ತರ ನೀಡಲು ನಾವು ಸಿದ್ಧ. ಯಾವ ಚರ್ಚೆಗೂ ತಯಾರಿದ್ದೇವೆ ಎಂದೂ ಸಚಿವರು ಸವಾಲು ಹಾಕಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.