1,500 ಕಂಕಣ ಭಾಗ್ಯಕ್ಕೆ ಕೋವಿಡ್ 19 ಅಡ್ಡಿ


Team Udayavani, Apr 6, 2020, 1:52 PM IST

1,500 ಕಂಕಣ ಭಾಗ್ಯಕ್ಕೆ ಕೋವಿಡ್ 19 ಅಡ್ಡಿ

ಸಾಂದರ್ಭಿಕ ಚಿತ್ರ

ಬೆಳಗಾವಿ: ಮಹಾಮಾರಿ  ಕೋವಿಡ್ 19 ಹೊಡೆತ ಕಂಕಣಭಾಗ್ಯಕ್ಕೂ ಬಿದ್ದಿದ್ದು, ನಗರ ಸೇರಿದಂತೆ ಜಿಲ್ಲಾದ್ಯಂತ ನಡೆಯಬೇಕಾಗಿದ್ದ ಸುಮಾರು ಒಂದೂವರೆ ಸಾವಿರಕ್ಕೂ ಹೆಚ್ಚು ಮದುವೆ ಸಮಾರಂಭಗಳ ಮೇಲೆ ಕರಿನೆರಳು ಬಿದ್ದಿದೆ.

ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ಮಾಡಬೇಕು, ಸಾವಿರಾರು ಮಂದಿಗೆ ಊಟ ಹಾಕಿಸಬೇಕು, ಬ್ಯಾಂಡ್‌ ಬಾಜಾ ಹಚ್ಚಿ ಕುಣಿದು ಸಂಭ್ರಮಿಸಬೇಕು ಎನ್ನುವವರಿಗೆ ಕೋವಿಡ್ 19  ಮಹಾಮಾರಿಯಿಂದ ನಿರಾಸೆಯುಂಟಾಗಿದ್ದು, ಜಿಲ್ಲಾದ್ಯಂತ ನಡೆಸಲು ಉದ್ದೇಶಿಸಿದ್ದ ಮದುವೆ ಸಮಾರಂಭಗಳ ದಿನಾಂಕವನ್ನು ಮುಂದೂಡಲಾಗಿದೆ.

ಹೋಳಿ ಹುಣ್ಣಿಮೆ ಮುಗಿಯಿತೆಂದರೆ ವಿವಾಹ ಮುಹೂರ್ತಗಳು ಹೆಚ್ಚಾಗಿ ಇರುತ್ತವೆ. ಮಾರ್ಚ್‌, ಏಪ್ರಿಲ್‌, ಮೇ ತಿಂಗಳಲ್ಲಿ ಅಂತೂ ಮದುವೆ ಸೀಸನ್‌ ಜೋರಾಗಿಯೇ ಇರುತ್ತದೆ. 2020ರ ಮದುವೆ ಸೀಸನ್‌ ಆರಂಭಗೊಳ್ಳುತ್ತಿದ್ದಂತೆ ಕೋವಿಡ್‌ -19 ಬಂದು ಅಪ್ಪಳಿಸಿದೆ. ಇಡೀ ದೇಶ ಲಾಕ್‌ಡೌನ್‌ ಆಗಿದ್ದರಿಂದ ಎಲ್ಲ ಕಾರ್ಯಕ್ರಮಗಳು ರದ್ದಾಗುತ್ತಿವೆ. ಲಾಕ್‌ಡೌನ್‌ ಆದೇಶ ಮದುವೆಗೂ ತಟ್ಟಿದೆ.

ಮೊದಲೇ ಬುಕಿಂಗ್‌ ಮಾಡಿದ್ದ ಜನ: ಜಿಲ್ಲೆಯಲ್ಲಿರುವ ಸುಮಾರು 300ಕ್ಕೂ ಹೆಚ್ಚು ಮಂಗಲ ಕಾರ್ಯಾಲಯಗಳನ್ನು ಜನರು ಬುಕಿಂಗ್‌ ಮಾಡಿದ್ದರು. ಅನೇಕ ಮದುವೆ ದಿನಾಂಕಗಳನ್ನು ಫಿಕ್ಸ್‌ ಮಾಡಿದ್ದರು. 7-8 ತಿಂಗಳ ಮುಂಚೆಯೇ ಬಂದು ಕಾರ್ಯಾಲಯಗಳನ್ನು ಕಾಯ್ದಿರಿಸುತ್ತಾರೆ. ನಗರ ಸೇರಿದಂತೆ ಜಿಲ್ಲೆಯಲ್ಲಿ ಅನೇಕ ಕಾರ್ಯಾಲಯಗಳಲ್ಲಿ ನಡೆಯಬೇಕಿದ್ದ ಮದುವೆಗಳಿಗೆ ಈಗ ಬ್ರೇಕ್‌ ಬಿದ್ದಂತಾಗಿದೆ.

ಉದ್ಯೋಗಗಳಿಗೂ ಬರೆ: ಈ ಶುಭ ಮಂಗಲ ಕಾರ್ಯಕ್ರಮದ ಮೇಲೆ ಅವಲಂಬಿತರಾಗಿರುವ ಅಡುಗೆ ಭಟ್ಟರು, ಪುರೋಹಿತರು, ಪೆಂಡಾಲ್‌ದವರು, ಬ್ಯಾಂಡ್‌ ಬಾಜಾದವರು, ಪೇಂಟರ್‌, ಗಾಯಕರು, ಕೆಲಸಗಾರರು ಸೇರಿದಂತೆ ಅನೇಕದ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ. ಪ್ರತಿ ವರ್ಷ ಮದುವೆ ಸೀಸನ್‌ಗಳನ್ನೇ ನಂಬಿಕೊಂಡು ಉದ್ಯೋಗ ಮಾಡುತ್ತಿರುವವರಿಗೆ ಕೋವಿಡ್ 19 ಭಾರೀ ಹೊಡೆತ ನೀಡಿದೆ. ಲಕ್ಷಾಂತರ ರೂ. ಬಂಡವಾಳ ವಿನಿಯೋಗಿಸಿ ಉದ್ಯೋಗ ನಡೆಸುತ್ತಿರುವ ಇವರಿಗೆ ಈಗ ದಿಕ್ಕು ತೋಚದಂತಾಗಿದೆ.

ಈ ಸಲ ಅಧಿಕ ತಿಂಗಳು ಬಂದಿದ್ದರಿಂದ ಜುಲೈದಿಂದ ನವೆಂಬರ್‌ವರೆಗೆ ಮದುವೆ ಮುಹೂರ್ತಗಳೇ ಇಲ್ಲ. ನಾಲ್ಕು ತಿಂಗಳ ಅವ ಧಿಯಲ್ಲಿ ಮುಹೂರ್ತ ಇಲ್ಲದ್ದಕ್ಕೆ ಜನರು ಹೆಚ್ಚಾಗಿ ಏಪ್ರಿಲ್‌, ಮೇ ತಿಂಗಳಲ್ಲಿ ಹೆಚ್ಚಿನ ಮುಹೂರ್ತಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಮಂಗಲ ಕಾರ್ಯಾಲಯಕ್ಕೆ ಮೊದಲೇ ಹಣ ನೀಡಿ ಕಾಯ್ದಿರಿಸಲಾಗಿರುತ್ತದೆ. ಆಡ್ವಾನ್ಸ್‌ ಹಣ ನೀಡುವುದರ ಜತೆಗೆ ಹೂವಿನ ಅಲಂಕಾರದವರನ್ನೂ ಬುಕಿಂಗ್‌ ಮಾಡಲಾಗಿತ್ತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದುವೆಗಳೆಲ್ಲವೂ ಲಾಕ್‌ ಆಗಿವೆ.

 

ಯಾದಿ ಪೇ ಶಾದಿಗಳೂ ಹೆಚ್ಚು :  ಲಾಕ್‌ಡೌನ್‌ ವೇಳೆ ಸಮಾರಂಭಗಳಲ್ಲಿ ಜನದಟ್ಟನೆ ಮಾಡಬಾರದು ಎಂಬ ಸರ್ಕಾರದ ಸೂಚನೆಯಂತೆ ಕೆಲವು ಕಡೆಗೆ ಯಾದಿ ಪೇ ಶಾದಿ ಸಂಪ್ರದಾಯಗಳೂ ನಡದಿವೆ. ವರನ ಕಡೆಗೆ ನಾಲ್ವರು ಹಾಗೂ ವಧು ಕಡೆಯವರು ನಾಲ್ವರು ಸೇರಿ ಪುರೋಹಿತರ ಸಮ್ಮುಖದಲ್ಲಿ ಮದುವೆಗಳೂ ಅಲ್ಲಲ್ಲಿ ನಡೆದಿವೆ. ಒಂದು ಕಡೆ ಕೋವಿಡ್ 19  ಹೊಡೆತ ಬಿದ್ದರೂ ಇನ್ನೊಂದೆಡೆ ಆಡಂಬರದ ಮದುವೆಗಳಿಗೂ ಬ್ರೇಕ್‌ ಬಿದ್ದಂತಾಗಿದೆ.

 

ಸಪ್ತಪದಿ ಯೋಜನೆಗೆ ತಟ್ಟಿದ ಬಿಸಿ :  ಮದುವೆಗೆ ದುಂದು ವೆಚ್ಚ ಮಾಡಿ ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಆರಂಭಿಸಿದ್ದ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆಗೂ ಕೋವಿಡ್ 19  ಬಿಸಿ ತಟ್ಟಿದೆ. ಸವದತ್ತಿಯ ಯಲ್ಲಮ್ಮ ದೇವಸ್ಥಾನದಲ್ಲಿ ಏ. 26ರಂದು ನಡೆಯಬೇಕಾಗಿದ್ದ ಸಾಮೂಹಿಕ ವಿವಾಹ ಸಮಾರಂಭವನ್ನು ಸರ್ಕಾರ ಸದ್ಯದ ಮಟ್ಟಿಗೆ ರದ್ದುಗೊಳಿಸಿದೆ. ಈಗಾಗಲೇ ಬಹುತೇಕ ತಯಾರಿ ಮಾಡಿಕೊಂಡು ಸಪ್ತಪದಿ ಯೋಜನೆಯಡಿ ಸಾಮೂಹಿಕ ವಿವಾಹಗಳು ನೋಂದಣಿ ಆಗುತ್ತಿದ್ದವು.

ಈವರೆಗೆ ಏಪ್ರಿಲ್‌ ತಿಂಗಳಲ್ಲಿ ನಡೆಯಬೇಕಾಗಿದ್ದ 18 ಮದುವೆ ದಿನಾಂಕಗಳನ್ನು ಬುಕಿಂಗ್‌ ಮಾಡಲಾಗಿತ್ತು. ಆದರೆ ದೇಶಾದ್ಯಂತ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗ ಯಾವುದೇ ಸಮಾರಂಭ ಇಲ್ಲ. ಬುಕಿಂಗ್‌ ಮಾಡಿದವರು ದಿನಾಂಕ ಮುಂದೂಡಬಹುದು ಅಥವಾ ಅಡ್ವಾನ್ಸ್‌ ನೀಡಿದ್ದನ್ನು ವಾಪಸ್‌ ಕೊಡಲಾಗುವುದು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಾಗ ಮತ್ತೆ ಬುಕಿಂಗ್‌ ಆರಂಬಿಸಲಾಗುವುದು. -ಶಿವಾಜಿ ಹಂಗೀರಕರ, ಅಧ್ಯಕ್ಷರು, ಮರಾಠಾ ಮಂದಿರ

 

 

 -ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.