50ಕ್ಕೂ ಹೆಚ್ಚು ಗ್ರಾಮದಲ್ಲಿ ಕೊಳೆಯುತ್ತಿದೆ ಕ್ಯಾಬೀಜ್‌


Team Udayavani, Apr 28, 2020, 7:24 PM IST

bg-tdy-2

ಬೆಳಗಾವಿ: ಲಾರಿಗಳಲ್ಲಿ ಟನ್‌ಗಟ್ಟಲೇ ಹೋಗುತ್ತಿದ್ದ ಕ್ಯಾಬೀಜ್‌ ಈಗ ಸೈಕಲ್‌ ಮೇಲೆ ಕೆಜಿ ಲೆಕ್ಕದಲ್ಲಿ ಸಣ್ಣ-ಸಣ್ಣ ಚೀಲಗಳಲ್ಲಿ ಸಾಗಾಟ ಆಗುತ್ತಿದೆ. ಕೈತುಂಬ ಸಿಗುತ್ತಿದ್ದ ಹಣ ಬೆರಣಿಕೆಯಲ್ಲಿ ಬರುತ್ತಿದೆ. ಮಾರಾಟವಾಗದೆ ಹೊಲದಲ್ಲೇ ಕೊಳೆಯುತ್ತಿರುವ ಬೆಳೆ ಎಷ್ಟೋ ಜನರ ಮನೆಗೆ ಉಚಿತವಾಗಿ ಸೇರುತ್ತಿದೆ. ಇದು ಬೆಳಗಾವಿ ಜಿಲ್ಲೆಯ ತರಕಾರಿ ಬೆಳೆಗಾರರ ಶೋಚನೀಯ ಕಥೆ.

ಕೋವಿಡ್ 19 ವೈರಸ್‌ ಎಂಬ ಮಹಾಮಾರಿ ತರಕಾರಿ ಬೆಳೆಗಾರರ ಸಂಕಷ್ಟದ ಜೀವನಕ್ಕೆ ಮತ್ತಷ್ಟು ಕಷ್ಟದ ಲೇಪನ ಮಾಡಿದೆ. ಖರೀದಿದಾರರೂ ಇಲ್ಲ. ನಿರೀಕ್ಷೆ ಮಾಡಿದಷ್ಟು ಬೆಲೆಯೂ ಇಲ್ಲ. ಇದರಿಂದ ಕ್ಯಾಬೀಜ್‌ ದಂತಹ ಎಷ್ಟೋ ತರಕಾರಿಗಳು ಹೊಲದಲ್ಲೇ ಹಾಳಾಗುತ್ತಿವೆ. ಉಚಿತವಾಗಿ ತೆಗೆದುಕೊಂಡು ಹೋಗಿ ಎಂದರೂ ಜನರು ಕಾಣಿಸುತ್ತಿಲ್ಲ. ಲಾಕ್‌ಡೌನ್‌ ಹತ್ತಾರು ಸಂಕಷ್ಟಗಳನ್ನು ತಂದೊಡ್ಡಿದೆ. ತರಕಾರಿಗಳಿಗೆ ಬೆಲೆಯೇ ಬಾರದೇ ಸಾವಿರಾರು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯಲಾಗದೇ ಒದ್ದಾಡುತ್ತಿದ್ದಾರೆ. ಅನಿವಾರ್ಯವಾಗಿ ಹೊಲದಲ್ಲಿನ ಬೆಳೆ ನಾಶ ಮಾಡಲು ರೈತರು ಮುಂದಾಗಿದ್ದಾರೆ. ಈಗಾಗಲೇ ಎಷ್ಟೋ ಕಡೆ ಸ್ವತಃ ರೈತರೇ ಕ್ಯಾಬೀಜ್‌ ಮೊದಲಾದ ಬೆಳೆ ಮೇಲೆ ಟ್ರ್ಯಾಕ್ಟರ್‌ ಹಾಯಿಸಿದ್ದಾರೆ.

ಇನ್ನು ಕೆಲ ರೈತರು ಕುರಿಗಳಿಗೆ ಮೇಯಲು ಬಿಟ್ಟಿದ್ದಾರೆ. ಬೆಳಗಾವಿ ತಾಲೂಕಿನ 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕ್ಯಾಬೀಜ್‌ ಬೆಳೆ ಹೊಲಗಳ ತುಂಬ ತುಂಬಿ ನಿಂತಿದೆ. ಪೇಟೆಗೆ ತಂದರೆ ಒಂದು ಚೀಲಕ್ಕೆ ಕೇವಲ 70 ರಿಂದ 80 ರೂ. ಮಾತ್ರ. ಹತ್ತು ಕಿ.ಮೀ. ದೂರದ ಹಳ್ಳಿಗಳಿಂದ ಬೆಳಗಾವಿಗೆ ತರಬೇಕಾದರೆ ಕನಿಷ್ಠ 60 ರೂ. ಸಾಗಾಟದ ವೆಚ್ಚ. ದಲ್ಲಾಳಿಗಳಿಗೆ ಒಂದಿಷ್ಟು ಹಣ ಕೊಡಬೇಕು. ಇದರಿಂದ ಕೊನೆಗೆ ರೈತರಿಗೆ ಉಳಿಯುವುದು ನಾಲ್ಕೈದು ರೂಪಾಯಿ ಮಾತ್ರ. ಹೀಗಾಗಿ ಅನೇಕ ರೈತರು  ಮಾರುಕಟ್ಟೆಗೆ ಬರುವದನ್ನೇ ನಿಲ್ಲಿಸಿದ್ದಾರೆ. ಮಾರುಕಟ್ಟೆಯಲ್ಲಿ ದಲ್ಲಾಳಿಗಳಿಂದ ಈಗ ಪ್ರತಿ ಕೆಜಿಗೆ 70 ರಿಂದ 80 ಪೈಸೆ ಸಿಗುತ್ತಿದೆ. ಒಂದು ಲಾರಿ ಲೋಡ್‌ ಮಾಡಿದರೆ (10 ಟನ್‌) ಸಿಗುವದು ಕೇವಲ 8,000 ರೂ. ಮಾತ್ರ. ಆದರೆ ಅದೇ ಮಾರುಕಟ್ಟೆಯಲ್ಲಿ ಒಳ್ಳೆಯ ದರ ಇದ್ದರೆ ಒಂದು ಟನ್‌ಗೆ ಕನಿಷ್ಠ ಒಂದು ಲಕ್ಷ ರೂ. ವರೆಗೆ ಸಿಗುತ್ತದೆ. ಕೋವಿಡ್ 19 ವೈರಸ್‌ ಬಂದಿರುವುದರಿಂದ ಒಂದು ಟನ್‌ಗೆ ಈಗ 10 ಸಾವಿರವೂ ಸಿಗುತ್ತಿಲ್ಲ ಎನ್ನುತ್ತಾರೆ ರೈತ ಮುಖಂಡ ಅಪ್ಪಾಸಾಹೇಬ ದೇಸಾಯಿ.

 

ಸಣ್ಣ ರೈತರಿಗೆ ಇದು ಬಹಳ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ಹೀಗಾಗಿ ಸರಕಾರ ಯಾವುದೇ ದಾಖಲೆ ಕೇಳದೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು. ಅನೇಕ ರೈತರು ಬೇರೆಯವರ ಹೊಲ ಮಾಡುತ್ತಿದ್ದಾರೆ. ಅವರ ಹೆಸರಿನಲ್ಲಿ ಹೊಲ ಇರುವದಿಲ್ಲ. ದಾಖಲೆ ಬೇರೆಯವರ ಹೆಸರಿನಲ್ಲಿ ಇರುತ್ತದೆ. ಆದಕಾರಣ ಅಧಿಕಾರಿಗಳಿಂದ ಸಮೀಕ್ಷೆ ಮಾಡಿಸಿ ನಿಜವಾಗಿ ನಷ್ಟ ಅನುಭವಿಸಿದ ರೈತರಿಗೆ ತಕ್ಷಣ ನೆರವು ನೀಡಬೇಕು. – ಅಪ್ಪಾಸಾಹೇಬ ದೇಸಾಯಿ, ರೈತ ಮುಖಂಡ, ಬೆಳಗಾವಿ

 

-ಕೇಶವ ಆದಿ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.