ನೇಕಾರಿಕೆಗೂ ಕೋವಿಡ್ 19 ಕರಿನೆರಳು


Team Udayavani, Apr 20, 2020, 5:26 PM IST

bg-tdy-4

ಸಾಂದರ್ಭಿಕ ಚಿತ್ರ

ಬೈಲಹೊಂಗಲ: ದೇಶನೂರ ಗ್ರಾಮದಲ್ಲಿ ಕೈಮಗ್ಗ ನಂಬಿ ಬದುಕುತ್ತಿರುವ ಕುಟುಂಬಗಳ ನೇಯ್ಗೆ ಕೆಲಸದ ಮೇಲೂ ಕೋವಿಡ್ 19 ಕರಿನೆರಳು ಬಿದ್ದಿದ್ದು, ನೇಕಾರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ.

ತಮ್ಮ ಹಿರಿಯರ ಕಾಲದಿಂದ ತಾಲೂಕಿನ ದೇಶನೂರ ಗ್ರಾಮದಲ್ಲಿ ಕೈಮಗ್ಗದಿಂದ ನೇಯ್ಗೆ ಕೆಲಸ ಮಾಡುತ್ತಾ ಬಂದಿದ್ದಾರೆ. ವಿನೂತನ ಮಾದರಿಯಲ್ಲಿ ಪಾಲಿಸ್ಟರ್‌, ಕಾಟನ್‌ ನೇಯ್ಗೆ ಕೆಲಸ ಮಾಡಲಾಗುತ್ತದೆ. ಇದರಿಂದ ಅನೇಕರು ಬದುಕನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಾರೆ. ಆದರೆ ಕೋವಿಡ್ 19 ದಿಂದ ದೇಶಾದ್ಯಂತ ಲಾಕ್‌ಡೌನ್‌ ಆಗಿರುವುದರಿಂದ ಈ ಉದ್ಯಮ ನಂಬಿಕೊಂಡಿದ್ದವರ ಜೀವನ ಸಂಕಷ್ಟಕ್ಕೆ ಒಳಗಾಗುವಂತೆ ಮಾಡಿದೆ. ಇಲ್ಲಿ ನೇಯ್ಗೆ ಮಾಡುವ ಕೆಲಸ ಸ್ಥಗಿತಗೊಂಡಿದೆ. ಇನ್ನು ತಯಾರು ಮಾಡಿದ ಸೀರೆಗಳ ವ್ಯಾಪಾರವೂ ನಿಂತು ಹೋಗಿದೆ. ಏಪ್ರಿಲ್‌, ಮೇ ತಿಂಗಳಲ್ಲಿ ಮದುವೆ, ಇನ್ನಿತರ ಶುಭ ಕಾರ್ಯಗಳಿಗೆ ನೇಯ್ಗೆ ಮಾಡಿದ ಬಟ್ಟೆಗಳಿಗೆ ಬೇಡಿಕೆ ಇರುತ್ತಿತ್ತು. ಆದರೆ ಕೋವಿಡ್ 19 ಕರಿನೆರಳು ಈ ಕ್ಷೇತ್ರದ ಮೇಲೂ ಬಿದ್ದಿರುವುದರಿಂದ ಬದುಕು ದುಸ್ತರವಾಗಿದೆ.

ಈ ಹಿಂದೆ ನೇಯ್ದ ಬಟ್ಟೆಗಳನ್ನು ಕೊಳ್ಳುವರಿಲ್ಲದೆ ಜನರು ಬೀದಿಗೆ ಬರುವಂತಾಗಿದೆ. ಕೆಲಸಗಾರರು ಕಷ್ಟಕರವಾಗಿ ದಿನ ದೂಡುವಂತಾಗಿದೆ. ಕಚ್ಚಾ ತಯಾರಿ ಪರಿಕರವನ್ನು ರಾಮದುರ್ಗದಿಂದ ತರಲಾಗುತ್ತದೆ. ರಾಮದುರ್ಗ, ಬೆಳಗಾವಿಗೆ ಸೀರೆ ಮಾರಾಟಕ್ಕೆ ಹೋಗುತ್ತಾರೆ. ನೇಯಲು ನೂಲು ದೊರಕದೆ, ನೇಯ್ಗೆ ಬಟ್ಟೆ ಸಾಗಣೆಗೆ ಸಂಚಾರ ವ್ಯವಸ್ಥೆ ಇಲ್ಲದೆ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ದೇಶನೂರದಲ್ಲಿ 300 ಕುಟುಂಬಗಳು ನಿತ್ಯ ನೇಯ್ಗೆ ನಂಬಿ ಬದುಕು ಸಾಗಿಸುತ್ತಿದ್ದಾರೆ. ನಿತ್ಯ ಇಲ್ಲಿ 10 ಸಾವಿರ ಸೀರೆ ತಯಾರಾಗುತ್ತದೆ. ಕೂಲಿಕಾರರಿಗೆ 100 ರಿಂದ 150 ರೂ. ಪಗಾರ ಕೊಡಲಾಗುತ್ತದೆ. ಆದರೆ ನೇಯ್ಗೆ ಕೆಲಸವಿಲ್ಲದೆ ಕೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ. ಸರಕಾರ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರಿಗೆ ವಿವಿಧ ಯೋಜನೆಯಡಿ ಪರಿಹಾರ ಘೋಷಿಸಿದ್ದು, ಅದನ್ನು ನೇಯ್ಗೆ ಕಾರ್ಮಿಕರಿಗೂ ಅನ್ವಯ ಮಾಡಬೇಕೆಂದು ನೇಕಾರ ಕುಟುಂಬದವರಾದ ಪ್ರಶಾಂತ ಚಡಿಚಾಳ, ಬಸಪ್ಪ ಗೊರಗುದ್ದಿ, ನೀಲಕಂಠ ಸೊಗಲಿ, ಕಲ್ಲಪ್ಪ ತಿಳಗಂಜಿ, ಆನಂದ ಹಳಿಜೋಳ ಒತ್ತಾಯಿಸಿದ್ದಾರೆ.

ರೈತರಿಗೆ ಬೆಂಬಲ ಬೆಲೆ ಕೊಟ್ಟು ಬೆಳೆ ಸರಕಾರ ಖರೀದಿಸುವಂತೆ ನೇಕಾರರ ಬದುಕು ಹಸನಾಗಲು ನೇಯ್ಗೆ ಬಟ್ಟೆಗಳನ್ನು ನೀಡಬೇಕು. ಇದರಿಂದ ನಿರಂತರ ಉದ್ಯೋಗ ಸಿಗಲು ಸಾಧ್ಯ. ಒಳ್ಳೆಯ ಬೆಲೆಯನ್ನು ಸರಕಾರ ನಿಗದಿಪಡಿಸಿದಲ್ಲಿ ನೇಯ್ಗೆ ನಂಬಿದವರ ಬದುಕು ಉಜ್ವಲವಾಗುತ್ತದೆ. –ಸಂತೋಷ ತಿಳಗಂಜಿ, ನೇಕಾರ, ದೇಶನೂರ

ಲಾಕ್‌ಡೌನ್‌ದಿಂದ ನೇಕಾರರ ಬಟ್ಟೆಗಳ ಮಾರಾಟ ನಿಂತು ಅವರ ಬದುಕು ದುಸ್ತರವಾಗಿದೆ. ಸರಕಾರ ಕೂಲಿ ಕಾರ್ಮಿಕರಿಗೆ ಅನುಕೂಲ ಮಾಡಿದಂತೆ ನೇಕಾರರಿಗೆ ಪ್ಯಾಕೇಜ್‌ ಘೋಷಿಸಿ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅನುಕೂಲ ಮಾಡಿಕೊಡಬೇಕು.  –ಶ್ರೀಶೈಲ ಕಮತಗಿ, ತಾಪಂ ಸದಸ್ಯ

 

ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.