ಯುಗಾದಿಗೂ ಕೋವಿಡ್ 19 ಕಾರ್ಮೋಡ


Team Udayavani, Mar 25, 2020, 4:07 PM IST

ಯುಗಾದಿಗೂ ಕೋವಿಡ್ 19 ಕಾರ್ಮೋಡ

ಚಿಕ್ಕೋಡಿ: ವಿಶ್ವ ವ್ಯಾಪಿ ಹಬ್ಬಿರುವ ಮಹಾಮಾರಿ ಕೋವಿಡ್ 19 ವೈರಸ್‌ ಅಬ್ಬರದಿಂದ ಯುಗಾದಿ ಅಮಾವಾಸ್ಯೆ ಮಂಕಾಗಿದೆ. ಹೀಗಾಗಿ ಅಮಾವಾಸ್ಯೆಯಂದು ಜನಜಂಗುಳಿಯಿಂದ ಕೂಡಿರುತ್ತಿದ್ದ ಗಡಿ ಭಾಗದ ದೇವಸ್ಥಾನಗಳು ಭಕ್ತರಿಲ್ಲದೇ ಭಣಗುಡುತ್ತಿವೆ.

ಯುಗಾದಿ ಅಮಾವಾಸ್ಯೆ ಮತ್ತು ಯುಗಾದಿ ಹಬ್ಬವನ್ನು ಭಾರತೀಯರು ಸಂಭ್ರಮದಿಂದ ಆಚರಿಸುತ್ತ ಬಂದಿದ್ದಾರೆ. ಆದರೆ ಪ್ರಸಕ್ತ ವರ್ಷದಲ್ಲಿ ಕೋವಿಡ್ 19  ವೈರಸ್‌ ಸೋಂಕು ಹರಡುತ್ತಿರುವ ಪರಿಣಾಮ ಕೇಂದ್ರ-ರಾಜ್ಯ ಸರ್ಕಾರ ದೇವಸ್ಥಾನಗಳನ್ನು ಬಂದ್‌ ಮಾಡಿವೆ. ಹೀಗಾಗಿ ಯುಗಾದಿ ಅಮಾವಾಸ್ಯೆಯನ್ನು ಭಕ್ತರು ಮನೆಯಲ್ಲಿಯೇ ಇದ್ದುಕೊಂಡು ಪೂಜೆ, ಪುನಸ್ಕಾರ, ನೈವೇದ್ಯ ಮಾಡಿದ್ದಾರೆ.

ಯುಗಾದಿ ಅಮಾವಾಸ್ಯೆ ಮತ್ತು ಯುಗಾದಿ ಪಾಡ್ಯ ನಿಮಿತ್ತ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ, ತೋರಣಹಳ್ಳಿಯ ಹನುಮಾನ ದೇವಸ್ಥಾನ, ಯಕ್ಸಂಬಾದ ಬೀರೇಶ್ವರ, ಪಟ್ಟಣಕುಡಿ ಸೂರ್ಯನಾರಾಯಣ ದೇವಸ್ಥಾನ, ಚಿಂಚಣಿ ಅಲ್ಲಮಪ್ರಭು ಸಿದ್ಧಸಂಸ್ಥಾನ ಮಠದಲ್ಲಿ ಯುಗಾದಿಯನ್ನು ಭಕ್ತರು ಅದ್ಧೂರಿಯಾಗಿ ಆಚರಿಸುತ್ತಿದ್ದರು.

ಆದರೆ ಭಕ್ತರ ಸಂಭ್ರಮ ಹಾಗೂ ಯುಗಾದಿ ಹಬ್ಬಕ್ಕೆ ಕೋವಿಡ್ 19  ವೈರಸ್‌ ತಣ್ಣೀರೆರಚಿದೆ. ಬೇವು-ಬೆಲ್ಲದ ಬಾಂಧವ್ಯದ ಯುಗಾದಿ ಹಬ್ಬವನ್ನು ಗಡಿ ಭಾಗದ ಜನರು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದರು. ಆದರೆ ಕೋವಿಡ್ 19 ವೈರಸ್‌ದಿಂದ ಇಡೀ ರಾಜ್ಯ ಲಾಕ್‌ ಡೌನ್‌ ಇರುವುದರಿಂದ ಜನ ಮನೆಯಿಂದ ಹೊರಬರುತ್ತಿಲ್ಲ, ಕೊರೊನಾ ಮಹಾಮಾರಿಗೆ ಯುಗಾದಿ ಹಬ್ಬ ಸಿಹಿ-ಕಹಿ ಆಗದೇ ಕೇವಲ ಕಹಿ ಆಗಿರುವುದು ಜನರಲ್ಲಿ ಬೇಸರ ಮೂಡಿಸಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.