ಬ್ಯಾಂಡ್‌ ಕಲಾವಿದರ ತುತ್ತಿನ ಚೀಲಕ್ಕೆ ಲಾಕ್‌ಡೌನ್‌ ಕನ್ನ


Team Udayavani, Apr 26, 2020, 4:38 PM IST

ಬ್ಯಾಂಡ್‌ ಕಲಾವಿದರ ತುತ್ತಿನ ಚೀಲಕ್ಕೆ ಲಾಕ್‌ಡೌನ್‌ ಕನ್ನ

ಸಾಂದರ್ಭಿಕ ಚಿತ್ರ

ಬೆಳಗಾವಿ: ವರ್ಷದಲ್ಲಿ ಅತಿ ಹೆಚ್ಚು ಮದುವೆ ಮುಹೂರ್ತ ಇರುವ ತಿಂಗಳಲ್ಲೇ  ಕೋವಿಡ್ 19 ಮಹಾಮಾರಿ ಬಂದು ಅಪ್ಪಳಿಸಿದ್ದು, ಮದುವೆಗಳನ್ನೇ ನಂಬಿಕೊಂಡು ಬದುಕುವ ಬ್ಯಾಂಡ್‌, ಬ್ಯಾಂಜೋ, ಮಂಗಳವಾದ್ಯ ಕಲಾವಿದರ ತುತ್ತಿನ ಚೀಲವನ್ನೇ ಲಾಕ್‌ಡೌನ್‌ ಕಸಿದುಕೊಂಡು ಬಿಟ್ಟಿದೆ.

ಏಪ್ರೀಲ್‌, ಮೇ, ಜೂನ್‌ ತಿಂಗಳಲ್ಲಿಯೇ ಅತಿ ಹೆಚ್ಚು ಮದುವೆ, ಮುಂಜಿ, ಧಾರ್ಮಿಕ ಕಾರ್ಯಕ್ರಮಗಳ ಮುಹೂರ್ತಗಳು ಇರುತ್ತವೆ. ಆದರೆ ಈ ತಿಂಗಳಲ್ಲಿಯೇ ಮಹಾಮಾರಿ ಕೋವಿಡ್ 19 ದಿಂದಾಗಿ ಇಡೀ ದೇಶಾದ್ಯಂತ ಲಾಕ್‌ ಡೌನ್‌ ವಿಧಿ ಸಲಾಗಿದೆ. ಹೀಗಾಗಿ ಮದುವೆಗಳಿಗೆ ಅಗತ್ಯವಾಗಿ ಬೇಕಾಗುವ ಮಂಗಳವಾದ್ಯ, ಬ್ಯಾಂಡ್‌, ಬ್ಯಾಂಜೋ ಕಲಾವಿದರಿಗೆ ಭಾರೀ ಸಂಕಷ್ಟ ಎದುರಾಗಿದೆ.

ಲಾಕ್‌ಡೌನ್‌ದಿಂದಾಗಿ ಸಭೆ, ವಿವಾಹ, ಧಾರ್ಮಿಕ ಸಮಾರಂಭಗಳನ್ನು ಬಂದ್‌ ಮಾಡಲಾಗಿದೆ. ಎಲ್ಲ ಮದುವೆ, ಮುಂಜಿ ಸಮಾರಂಭಗಳನ್ನು ಮುಂದೂಡಲಾಗಿದೆ. ಮದುವೆ ಮೆರವಣಿಗೆ, ವಿವಾಹ ಕಾರ್ಯಕ್ರಮಕ್ಕೆ ಜರೂರಾಗಿ ಬೇಕಾಗುವ ಮಂಗಳವಾದ್ಯಗಳಿಗೂ ಬ್ರೇಕ್‌ ಬಿದ್ದಿದೆ. ರಾಜ್ಯದಲ್ಲಿ 550-600 ಬ್ಯಾಂಡ್‌ ಕಂಪನಿಗಳಿದ್ದು, ಸಾವಿರಾರು ಮಂಗಳವಾದ್ಯಗಳ ತಂಡಗಳು ಇವೆ. ಮದುವೆ ಸಮಾರಂಭಗಳನ್ನೇ ನಂಬಿರುವ ಈ ಕಲಾವಿದರಿಗೆ ಕಷ್ಟವಾಗಿದೆ, ವರ್ಷದಲ್ಲಿ ನಾಲ್ಕೈದು ತಿಂಗಳುಗಳ ಕಾಲ ಮದುವೆ ಸಮಾರಂಭಗಳು ನಡೆಯುತ್ತವೆ. ಒಂದು ಬ್ಯಾಂಡ್‌ ಕಂಪನಿಯಲ್ಲಿ ಕಲಾವಿದರು, ಕಾರ್ಮಿಕರು ಸೇರಿದಂತೆ ಸುಮಾರು 20ರಿಂದ 25 ಜನ ದುಡಿಯುತ್ತಿರುತ್ತಾರೆ. ರಾಜ್ಯದಲ್ಲಿ ಇಂಥ ಸಾವಿರಾರು ಕಾರ್ಮಿಕರ ಉದ್ಯೋಗವನ್ನೇ ಲಾಕ್‌ ಡೌನ್‌ ಕಸಿದುಕೊಂಡಿದೆ.

ಈ ಕಲಾವಿದರನ್ನು ಹಾಗೂ ಕಾರ್ಮಿಕರನ್ನು ನಂಬಿಕೊಂಡಿರುವ ಇವರ ಕುಟುಂಬಸ್ಥರ ಸ್ಥಿತಿಯೂ ಶೋಚನೀಯವಾಗಿದೆ. ಬ್ಯಾಂಡ್‌ ಕಂಪನಿಗಳಲ್ಲಿ ಇದ್ದುಕೊಂಡು ಆಲ್ಪಸ್ವಲ್ಪ ಬರುವ ಸಂಬಳದಲ್ಲಿಯೇ ಬದುಕು ಸಾಗಿಸುತ್ತಾರೆ. ಬ್ಯಾಂಡ್‌ ಕಂಪನಿ ಮಾಲೀಕರು, ಕಲಾವಿದರು ಹಾಗೂ ಕಾರ್ಮಿಕರು ದುಡಿಮೆ ಇಲ್ಲದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಜೂನ್‌ ತಿಂಗಳಿಂದ ಮಳೆಗಾಲ ಶುರುವಾದರೆ ಮದುವೆಗಳು ನಡೆಯುವುದಿಲ್ಲ. ಮತ್ತೆ ಒಂದು ವರ್ಷ ಕಾಯಬೇಕಾಗುತ್ತದೆ ಎನ್ನುತ್ತಾರೆ ಬ್ಯಾಂಡ್‌ ಮಾಲೀಕರು.

ಬ್ಯಾಂಡ್‌ ಬಾರಿಸುವ ಸೀಜನ್‌ ಮುಗಿದಾಗ ಕಲಾವಿದರು ಬೀದಿ ಬೀದಿಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡುವುದು, ಕೆಲವರು ಪೊರಕೆ ತಯಾರಿಸುವ ಕಾರ್ಯದಲ್ಲಿ ತೊಡಗುತ್ತಾರೆ. ಮೊದಲೇ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಈ ಜನರು ಮನೆಯಲ್ಲಿ ಯಾವುದಾದರೂ ಕಾಂರ್ಯಕ್ರಮ ನಡೆಸಲು ಕೈಗಡ ಪಡೆದುಕೊಳ್ಳುತ್ತಾರೆ. ಈ ಸಾಲ ತುಂಬಲು ಮತ್ತೆ ವರ್ಷಪೂರ್ತಿ ದುಡಿಯಬೇಕಾಗುತ್ತದೆ. ಇಂಥ ಬಡತನದಲ್ಲಿರುವ ಈ ಕಲಾವಿದರಿಗೆ ಸರ್ಕಾರ ಪರಿಹಾರ ನೀಡಿ ನೆರವಿಗೆ ನಿಲ್ಲಬೇಕು ಎಂದು ಬ್ಯಾಂಡ್‌ ಮಾಲೀಕ ಸುಭಾಷ ಭಜಂತ್ರಿ ಹೇಳುತ್ತಾರೆ.

ಮದವಿ ಫಂಕ್ಷನ್‌ಗೋಳ ಬಂದ್‌ ಆಗಿ ನಮ್ಮ ಜೀವನಾ ಮೂರಾಬಟ್ಟೆ ಆಗೈತಿ. ಕೆಲಸ ಇದ್ರ ನಮ್ಮ ಹೊಟ್ಟಿ ತುಂಬತೆ„ತಿ. ವರ್ಸದಾಗಿನ ಉದ್ಯೋಗ ಈ ಕೋವಿಡ್ 19  ರೋಗ ಬಂದ ಕಸಕೊಂಡ ಬಿಟೈತಿ. ಮುಹೂರ್ತಗೋಳ ಮುಗದು ಅಂದ್ರ ಮುಂದಿನ ವರ್ಸಕ್ಕ ನಮ್ಮಕೆಲಸಾ. ತುತ್ತ ಅನ್ನಕ್ಕ ಕಷ್ಟಾ ಪಡೋಂಗ ಆಗೈತಿ. ಹಿಂಗಾದ್ರ ಬದಕೋದ ಹೆಂಗ? –ದುರ್ಗಪ್ಪ ಭಜಂತ್ರಿ, ಬ್ಯಾಂಡ್ ಕಲಾವಿದರು

ವರ್ಷದಲ್ಲಿ ವಿವಾಹ ಮುಹೂರ್ತಗಳು ಇದೇ ತಿಂಗಳಲ್ಲಿಯೇ ಅತಿ ಹೆಚ್ಚು ಇರುತ್ತವೆ. ಆದರೆ ಈಗ ಲಾಕ್‌ಡೌನ್‌ದಿಂದಾಗಿ ಈ ವರ್ಷದ ಉದ್ಯೋಗವೇ ಇಲ್ಲ. ಸಾವಿರಾರು ಕಲಾವಿದರು ಹಾಗೂ ಮಾಲೀಕರು ಸಂಕಷ್ಟದಲ್ಲಿ ಬದುಕುತ್ತಿದ್ದಾರೆ. ಹೀಗಾಗಿ ಸರ್ಕಾರ ನಮ್ಮ ನೆರವಿಗೆ ನಿಂತು ಸಹಾಯ ಮಾಡಬೇಕು. –ಪರಶುರಾಮ ಭಜಂತ್ರಿ, ಬ್ಯಾಂಡ್ ಮಾಲೀಕರು

 

 

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.