ಕೋವಿಡ್; 22 ಜನರು ಆಸ್ಪತ್ರೆಯಿಂದ ಬಿಡುಗಡೆ
Team Udayavani, Jun 16, 2020, 7:08 AM IST
ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಯಾವುದೇ ಕೋವಿಡ್ ಸೋಂಕು ಪ್ರಕರಣ ವರದಿಯಾಗಿಲ್ಲ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ 22 ಜನರು ಚೇತರಿಸಿಕೊಂಡು ಬಿಡುಗಡೆಯಾಗಿದ್ದು ಜನರಲ್ಲಿ ಸಾಕಷ್ಟು ಸಮಾಧಾನ ಉಂಟುಮಾಡಿದೆ. ಬೆಳಗಾವಿ ತಾಲೂಕಿನ 12 ಹಾಗೂ ಹುಕ್ಕೇರಿ ತಾಲೂಕಿನ ಏಳು, ಗೋಕಾಕ, ಬಾಗಲಕೋಟೆ ಹಾಗೂ ಕೊಪ್ಪಳದ ತಲಾ ಒಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾದರು.
ಈಗ ಆಸ್ಪತ್ರೆಯಲ್ಲಿ 58 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿ ಸಂಖ್ಯೆಗಳಾದ 838, 3146, 3148, 3670, 3684, 3685, 3689, 4067, 4069, 4070, 4072, 4545, 4546, 4552, 4556, 4557, 5020, 5022, 5387, 5394, 5404 ಹಾಗೂ 5409 ಬಿಡುಗಡೆಯಾಗಿದ್ದು ಇದರೊಂದಿಗೆ ಜಿಲ್ಲೆಯಲ್ಲಿ 247 ಜನರು ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 305 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ ಎಂಟು ಜನ ಬಾಗಲಕೊಟೆ ಜಿಲ್ಲೆಗೆ ಸೇರಿದವರಾಗಿದ್ದಾರೆ. ಒಟ್ಟು 247 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಈಗ 58 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇವತ್ತಿನವರೆಗೆ 15646 ಜನರ ಮೇಲೆ ನಿಗಾ ವಹಿಸಲಾಗಿದೆ. ಇದುವರೆಗೆ 1063 ಜನರು 14 ದಿನಗಳ ಗೃಹ ನಿಗಾದಲ್ಲಿದ್ದರೆ 58 ಜನರು ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 6497 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ 8028 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇವತ್ತಿನವರೆಗೆ 14350 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು 13371 ಜನರ ವರದಿ ನಕಾರಾತ್ಮಾಕವಾಗಿವೆ. ಒಟ್ಟು 294 ಜನರ ವರದಿಗಾಗಿ ಕಾಯಲಾಗುತ್ತಿದೆ ಎಂದು ಸರಕಾರದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ