ಕೋವಿಡ್ ವಿರುದ್ಧದ ಹೋರಾಟಕ್ಕೆ ಶ್ರೀಗಳ ಸಾಥ್
ಮನೆಯಲ್ಲಿದ್ದು ಆರೋಗ್ಯ ಕಾಪಾಡಿಕೊಳ್ಳಿ! ಮುಂದುವರಿದ ಜನಜಾಗೃತಿ
Team Udayavani, May 24, 2021, 6:57 PM IST
ಚಿಕ್ಕೋಡಿ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲರೂ ಮನೆಯಲ್ಲಿ ಇದ್ದು ಸರ್ಕಾರದ ಮಾರ್ಗಸೂಚಿ ಪಾಲಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಚರಮೂರ್ತಿಮಠದ ಸಂಪಾದನಾ ಸ್ವಾಮೀಜಿ ನಗರದ ಪ್ರತಿವಾರ್ಡಿನಲ್ಲಿ ಪುರಸಭೆ ಸದಸ್ಯರೊಂದಿಗೆ ಕೊರೊನಾ ಜಾಗೃತಿ ಮೂಡಿಸಿದರು.
ಜಾಗೃತಿ ಸಂದರ್ಭದಲ್ಲಿ ಮಾತನಾಡಿದ ಅವರು, ಮಠಾಧೀಶರು ತಮ್ಮ ತಮ್ಮ ಭಾಗದಲ್ಲಿ ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಈ ಎರಡನೇ ಅಲೆಗೆ ಹೆಚ್ಚು ಯುವಕರು ಬಲಿಯಾಗುತ್ತಿದ್ದಾರೆ. ಇದು ನಿಲ್ಲಬೇಕು. ನಮ್ಮ ಯುವ ಶಕ್ತಿ ಬೆಳೆಯಬೇಕು ಅದಕ್ಕಾಗಿ ಎಲ್ಲರೂ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಅನವಶ್ಯಕವಾಗಿ ಮನೆಯಿಂದ ಹೊರಗೆ ಬರಬೇಡಿ. ನಿಮಗೂ ತೊಂದರೆಯಾಗುತ್ತದೆ. ಮನೆಯಲ್ಲಿ ಇದ್ದು ಕೊರೊನಾ ಗೆಲ್ಲೋಣ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ನಿಮ್ಮ ಮನೆಯ ನೆರೆಹೊರೆಯವರಿಗೂ ಧೈರ್ಯ ತುಂಬಿರಿ. ಅವರಿಗೆ ಸಹಾಯ, ಸಹಕಾರ ನೀಡಿರಿ. ಅಲ್ಲದೇ ಮೂರನೇ ಅಲೆಯ ಬಗ್ಗೆಯೂ ಎಚ್ಚರಿಕೆ ಇರಲಿ. ಮಕ್ಕಳನ್ನು ಕಾಪಾಡುವ ಜವಾಬ್ದಾರಿ ಪಾಲಕರ ಮೇಲಿದೆ. ಈ ಸಂದರ್ಭದಲ್ಲಿ ಒಬ್ಬರನೊಬ್ಬರು ದೂರುವುದನ್ನು ಬಿಟ್ಟು ಒಬ್ಬರಿಗೊಬ್ಬರು ಸಹಾಯ ಮಾಡಿರಿ. ಕೊರೊನಾ ದೇಶ ಬಿಟ್ಟು ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಜಾಗೃತಿ ಮೂಡಿಸಿದರು. ಚಿಕ್ಕೋಡಿ ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಮುಖ್ಯಾ ಧಿಕಾರಿ ಡಾ| ಸುಂದರ ರೋಗಿ, ಬಾಬು ಮಿರ್ಜೆ, ನಾಗರಾಜ ಮೇದಾರ, ಸಂತೋಷ ಕಾಮಗೌಡ, ಸಿದ್ದಪ್ಪ ಡಂಗೇರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್