ಕೋವಿಡ್ ಜಾಗೃತಿ ಮೂಡಿಸಿ ಮದುವೆಯಾದ ಪೊಲೀಸ್ ಪೇದೆ
Team Udayavani, May 30, 2020, 12:32 PM IST
ಅಥಣಿ: ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದ ಮದುವೆಯಲ್ಲಿ “ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಿ ಸುರಕ್ಷಿತವಾಗಿರಿ, ಜೀವನ ಅಮೂಲ್ಯವಾದದ್ದು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಸಮರ್ಪಕವಾಗಿ ಬಳಸಿ’ ಘೋಷಣೆ ಬರೆದ ಪೋಸ್ಟರ್ ಹಿಡಿದ ವಧು-ವರರು ಮಾಸ್ಕ್ ಧರಿಸಿ ಕೋವಿಡ್ ಕುರಿತು ಜಾಗೃತಿ ಮೂಡಿಸಿದ್ದು ಗಮನ ಸೆಳೆಯಿತು.
ಮೂಲತಃ ಬೆಂಗಳೂರಿನ ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಮು ಕಾಂಬಳೆ ಅವರು ಮೊದಲೇ ನಿಶ್ಚಯವಾದಂತೆ ದೀಪಾ ಕಾಂಬಳೆ ಎಂಬುವರೊಂದಿಗೆ ಸಪ್ತಪದಿ ತುಳಿದರು. ಇಲ್ಲಿಯೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡು ಮೆಚ್ಚುಗೆ ಪಾತ್ರವಾಗಿದ್ದಾರೆ.ಈ ವೇಳೆ ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ವಿಜಯ ಕಾಂಬಳೆ, ಸಂತೋಷ ಬಡಕಂಬಿ, ಚೇತನ ಶಾನವಾಡ, ನಾಗರಾಜ ಕಟ್ಟಿಮನಿ, ವಿಜಯ ಹೊಸಮನಿ, ಆದಿನಾಥ ಮುತ್ತೂರ, ಗೌತಮ ದೊಡಮನಿ, ಅಶೋಕ ವಾಜಂತ್ರಿ, ಯಮನಪ್ಪ ಬೋದ್ಲಿ, ಸಾಗರ ಮಾಲಾಪೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ