ಕರ್ಫ್ಯೂ ಮಧ್ಯೆ ಸರ್ಕಸ್‌ ಕಂಪನಿ ಸ್ಥಿತಿ ಅತಂತ್ರ!

ಬಸ್‌ ಮುಷ್ಕರ-ಕೊರೊನಾಘಾತ­!15 ದಿನದಿಂದ ಪ್ರದರ್ಶನವಿಲ್ಲದೇ ಖಾಲಿ ಕುಳಿತ ಕಲಾವಿದರು

Team Udayavani, May 8, 2021, 5:55 PM IST

ijkjlkj

ವರದಿ : ಮಹಾದೇವ ಪೂಜೇರಿ

ಚಿಕ್ಕೋಡಿ: ನಗರದಿಂದ ನಗರಕ್ಕೆ, ಪಟ್ಟಣದಿಂದ ಪಟ್ಟಣಕ್ಕೆ ಹೋಗಿ ಮೈನವಿರೇಳಿಸುವಂತಹ ಕಸರತ್ತಿನ ಕಲೆಯನ್ನು ಪ್ರದರ್ಶನ ಮಾಡುವ ಸೂಪರ ಸ್ಟಾರ್‌ ಸರ್ಕಸ್‌ ಕಲಾವಿದರ ಬದುಕನ್ನು ಕೊರೊನಾ ಎಂಬ ಹೆಮ್ಮಾರಿ ಕಟ್ಟಿ ಹಾಕಿದೆ. ಕಳೆದ ಹದಿನೈದು ದಿನಗಳಿಂದ ಕಲೆ ಪ್ರದರ್ಶನವಿಲ್ಲದೆ ಕಲಾವಿದರು ಜೀವನ ನಡೆಸಲು ಹರಸಾಹಸ ಪಡುವಂತಾಗಿದೆ.

ಸರ್ಕಸ್‌ ಕಲೆಯಿಂದಲೇ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಲಾವಿದರ ಬದುಕು ಇಂದು ಬೀದಿಗೆ ಬಿದ್ದಿದೆ. ಕೊರೊನಾ ಎಂಬ ಮಾರಣಾಂತಿಕ ಸೋಂಕಿಗೆ ರಾಜ್ಯವೇ ಜನತಾ ಕರ್ಫ್ಯೂನಲ್ಲಿದೆ. ಹೀಗಾಗಿ ಕಳೆದ 15 ದಿನಗಳಿಂದ 150 ಕಲಾವಿದರು ಯಾವುದೇ ಕೆಲಸವಿಲ್ಲದೇ ಅತಂತ್ರರಾಗಿದ್ದಾರೆ.

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಸೂಪರ ಸ್ಟಾರ್‌ ಸರ್ಕಸ್‌ ಕಂಪನಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಚಿಕ್ಕೋಡಿ ನಗರದ ಹುಡ್ಕೋ ಕಾಲೋನಿ ಹತ್ತಿರದ ಶ್ರೀ ಅಲ್ಲಮಪ್ರಭು ಐಟಿಐ ಕಾಲೇಜು ಮೈದಾನದಲ್ಲಿ ಟೆಂಟ್‌ ಹಾಕಿತ್ತು. ಎರಡು ವಾರಗಳ ಕಾಲ ಸರ್ಕಸ್‌ ಪ್ರದರ್ಶನ ನೀಡುವಷ್ಟರಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದರಿಂದ ಸರ್ಕಾರ ಕೊರೊನಾ ಕರ್ಫ್ಯೂ ಜಾರಿ ಮಾಡಿದ್ದರಿಂದ ಸರ್ಕಸ್‌ ಪ್ರದರ್ಶನ ನಿಂತು ಹೋಗಿದೆ. ಇದರಿಂದ ಕಲಾವಿದರ ಬದುಕು ಮೂರಾಬಟ್ಟೆಯಾಗಿದೆ.

ಚಿಕ್ಕೋಡಿ ನಗರದಲ್ಲಿ ಮೊದಲ ವಾರದ ಪ್ರದರ್ಶನಗಳು ಭರ್ತಿಯಾಗಿದ್ದವು. ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಷ್ಕರದಿಂದ ಬಸ್‌ ಬಂದಾದವು. ಆವಾಗ ಹಳ್ಳಿ ಜನರು ಬಾರದೇ ನೋಡುಗರ ಸಂಖ್ಯೆ ಕಡಿಮೆಯಾಯಿತು. ಈಗ ಕರ್ಫ್ಯೂದಿಂದ ಸರ್ಕಸ್‌ ಕಂಪನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ ವರ್ಷ ಕೋವಿಡ್‌ ಸಂದರ್ಭದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ತೊಂದರೆ ಅನುಭವಿಸಿದ್ದೇವೆ. ಈ ವರ್ಷ ಕೂಡ ಆತಂಕದ ಪರಿಸ್ಥಿತಿ ಎದುರಾಗಿದೆ ಎನ್ನುತ್ತಾರೆ ಕಂಪನಿ ಕಲಾವಿದರು. ಮೊದಲೇ ಅಳಿವಿನ ಅಂಚಿನಲ್ಲಿರುವ ಸರ್ಕಸ್‌ ಕಂಪನಿಗಳು ವಿವಿಧ ಕಾರಣಗಳಿಂದ ಮುಚ್ಚುತ್ತಿವೆ. ಸರ್ಕಸ್‌ ನಡೆಸುವ ಮಾನೆ ಕುಟುಂಬದ ನಾಲ್ಕನೆಯ ತಲೆಮಾರಿನ ಪ್ರಕಾಶ ಮಾನೆ ಕಳೆದ 35 ವರ್ಷಗಳಿಂದ ಹಲವಾರು ಏಳುಬೀಳುಗಳ ನಡುವೆ ನೂರಾರು ಕಲಾವಿದರನ್ನು ಸೇರಿಸಿ ಕಂಪನಿ ನಡೆಸಿಕೊಂಡು ಬರುತ್ತಿದ್ದಾರೆ.

ಮಹಾರಾಷ್ಟ್ರ, ಗುಜರಾತ, ಛತ್ತೀಸಗಢ, ತಮಿಳುನಾಡು, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಪ್ರದರ್ಶನ ನೀಡಿದ್ದಾರೆ. ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಸಾಹಸ, ಜನಪದ ಕ್ರೀಡೆ ಇವೆಲ್ಲ ದೇಶದ ಘನತೆ ಹೆಚ್ಚಿಸುತ್ತವೆ. ಆಯಾ ಕ್ಷೇತ್ರದಲ್ಲಿ ಸಾಧಕರಿಗೆ ಕಲೆಯ ಜೊತೆಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಇಂತಹ ಕಲಾವಿದರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ತಿಂಗಳ ಮಾಸಾಶನದ ಜೊತೆಗೆ ಕಂಪನಿ ನಡೆಸಲು ಆರ್ಥಿಕ ಸಹಾಯ ನೀಡಿದರೆ, ಕೆಲವೊಂದಿಷ್ಟಾದರೂ ಸರ್ಕಸ್‌ ಕಂಪನಿಗಳನ್ನು ಉಳಿಸಿಕೊಳ್ಳಬಹುದು. ಜೊತೆಗೆ ಇಂತಹ ಬಡ ಕಂಪನಿಗಳಿಗೆ ಜನಪ್ರತಿನಿ ಧಿಗಳು, ಸಂಘ-ಸಂಸ್ಥೆ, ದಾನಿಗಳು ಆರ್ಥಿಕ ಸಹಾಯ, ಉಪಜೀವನಕ್ಕೆ ದವಸ ಧಾನ್ಯ ನೀಡುವುದು ಅತ್ಯವಶ್ಯಕವಾಗಿದೆ ಎನ್ನುತ್ತಾರೆ ಚಿಕ್ಕೋಡಿಯ ಕಲಾವಿದ ಭರತ ಕಲಾಚಂದ್ರ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.